<p><strong>ವಿಜಯಪುರ:</strong> ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಆರಂಭವಾದ ಮಳೆಯು ಶುಕ್ರವಾರ ದಿನವಿಡೀ ಬಿಡುವು ನೀಡದೇ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಯಿತು. ವಿಜಯಪುರ ಜಿಲ್ಲೆಯಲ್ಲಿ ಶನಿವಾರವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ‘ಯಲ್ಲೋ ಅಲರ್ಟ್’ ಮುನ್ನೆಚ್ಚರಿಕೆ ನೀಡಿದೆ.</p><p><strong>ಹೆದ್ದಾರಿ ಸಂಚಾರ ಆರಂಭ: </strong>ವಿಜಯಪುರ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಸೀನಾ ನದಿ ಪ್ರವಾಹದ ನೀರು ಕಡಿಮೆಯಾಗಿದ್ದರಿಂದ ಮೂರು ದಿನಗಳಿಂದ ಬಂದ್ ಮಾಡಲಾಗಿದ್ದ ವಾಹನಗಳ ಸಂಚಾರ ಶುಕ್ರವಾರ ಸಂಜೆ ಆರಂಭವಾಗಿದೆ.</p><p>ಭೀಮಾ ನದಿ ತೀರದಲ್ಲಿ ಪ್ರವಾಹ ಹೆಚ್ಚುತ್ತಿದ್ದು, ಎರಡು ದಿನಗಳಿಂದ ಆಲಮೇಲ ತಾಲ್ಲೂಕಿನ ತಾರಾಪುರ ಗ್ರಾಮ ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಪ್ರವಾಹದಲ್ಲಿ ಸಿಲುಕಿದ 50ಕ್ಕೂ ಹೆಚ್ಚು ಜನರನ್ನು ಸಮೀಪದ ಪುನರ್ ವಸತಿ ಕೇಂದ್ರದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. </p><p>ನದಿ ತೀರದ ಗ್ರಾಮಗಳಾದ ದೇವಣಗಾಂವ, ತಾವರಖೇಡ, ಬ್ಯಾಡಗಿಹಾಳ, ಕುಮಸಗಿ, ಶೇಂಬೆವಾಡ, ಕಡ್ಲೆವಾಡ, ಶಿರಸಗಿ ಗ್ರಾಮಗಳ ಕೆಲ ಮನೆಗಳಿಗೆ ನೀರು ಸುತ್ತುವರೆದು ಜಲಾವೃತಗೊಂಡಿದೆ. </p><p>ಆಲಮೇಲ ತಾಲ್ಲೂಕಿನ ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್ನಿಂದ ಗುರುವಾರ 28 ಗೇಟ್ ತೆರೆದು, 3.55 ಲಕ್ಷ ಕ್ಯೂಸೆಕ್ ಹೊರ ಬಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜಿಲ್ಲೆಯಾದ್ಯಂತ ಗುರುವಾರ ರಾತ್ರಿ ಆರಂಭವಾದ ಮಳೆಯು ಶುಕ್ರವಾರ ದಿನವಿಡೀ ಬಿಡುವು ನೀಡದೇ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಯಿತು. ವಿಜಯಪುರ ಜಿಲ್ಲೆಯಲ್ಲಿ ಶನಿವಾರವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ‘ಯಲ್ಲೋ ಅಲರ್ಟ್’ ಮುನ್ನೆಚ್ಚರಿಕೆ ನೀಡಿದೆ.</p><p><strong>ಹೆದ್ದಾರಿ ಸಂಚಾರ ಆರಂಭ: </strong>ವಿಜಯಪುರ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯ ಮೇಲೆ ಸೀನಾ ನದಿ ಪ್ರವಾಹದ ನೀರು ಕಡಿಮೆಯಾಗಿದ್ದರಿಂದ ಮೂರು ದಿನಗಳಿಂದ ಬಂದ್ ಮಾಡಲಾಗಿದ್ದ ವಾಹನಗಳ ಸಂಚಾರ ಶುಕ್ರವಾರ ಸಂಜೆ ಆರಂಭವಾಗಿದೆ.</p><p>ಭೀಮಾ ನದಿ ತೀರದಲ್ಲಿ ಪ್ರವಾಹ ಹೆಚ್ಚುತ್ತಿದ್ದು, ಎರಡು ದಿನಗಳಿಂದ ಆಲಮೇಲ ತಾಲ್ಲೂಕಿನ ತಾರಾಪುರ ಗ್ರಾಮ ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಪ್ರವಾಹದಲ್ಲಿ ಸಿಲುಕಿದ 50ಕ್ಕೂ ಹೆಚ್ಚು ಜನರನ್ನು ಸಮೀಪದ ಪುನರ್ ವಸತಿ ಕೇಂದ್ರದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. </p><p>ನದಿ ತೀರದ ಗ್ರಾಮಗಳಾದ ದೇವಣಗಾಂವ, ತಾವರಖೇಡ, ಬ್ಯಾಡಗಿಹಾಳ, ಕುಮಸಗಿ, ಶೇಂಬೆವಾಡ, ಕಡ್ಲೆವಾಡ, ಶಿರಸಗಿ ಗ್ರಾಮಗಳ ಕೆಲ ಮನೆಗಳಿಗೆ ನೀರು ಸುತ್ತುವರೆದು ಜಲಾವೃತಗೊಂಡಿದೆ. </p><p>ಆಲಮೇಲ ತಾಲ್ಲೂಕಿನ ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್ನಿಂದ ಗುರುವಾರ 28 ಗೇಟ್ ತೆರೆದು, 3.55 ಲಕ್ಷ ಕ್ಯೂಸೆಕ್ ಹೊರ ಬಿಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>