ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧೆಡೆ ಮಳೆ: ಸಂತೆ ಅಸ್ತವ್ಯಸ್ತ

Last Updated 13 ಸೆಪ್ಟೆಂಬರ್ 2021, 13:38 IST
ಅಕ್ಷರ ಗಾತ್ರ

ವಿಜಯಪುರ: ನಗರ ಸೇರಿದಂತೆ ದೇವರ ಹಿಪ್ಪರಗಿ, ಸಿಂದಗಿ, ಬಸವನ ಬಾಗೇವಾಡಿ, ತಿಕೋಟಾ ಭಾಗದಲ್ಲಿ ಸೋಮವಾರ ಬೆಳಿಗ್ಗೆಯಿಂದ ಜಿಟಿಜಿಟಿ ಮಳೆ ಜೊತೆಗೆ ಆಗಾಗ ಧಾರಾಕಾರ ಮಳೆ ಸುರಿಯಿತು.

ದೇವರಹಿಪ್ಪರಗಿ ಪಟ್ಟಣದಲ್ಲಿ ಸಂತೆ ದಿನವಾದ ಸೋಮವಾರ ಮಧ್ಯಾಹ್ನದಿಂದಲೇ ಆರಂಭಗೊಂಡ ಮಳೆಯಿಂದ ಗ್ರಾಮೀಣ ಪ್ರದೇಶದ ತರಕಾರಿ ಹಾಗೂ ಕಾಳು ಮಾರಾಟಗಾರರು ತೊಂದರೆ ಅನುಭವಿಸುವಂತಾಯಿತು.

ಎರಡು ಗಂಟೆಗಳ ಕಾಲ ಆಗಾಗ ಸುರಿದ ಮಳೆ ತರಕಾರಿ ಬೆಲೆ ಇಳಿಮುಖವಾಗಲು ಕಾರಣವಾಯಿತು. ಇದರಿಂದ ಮಾರಾಟಗಾರರು ನಷ್ಟ ಅನುಭವಿಸಿದರು. ಬೆಳಿಗ್ಗೆ ಕೆ.ಜಿ.ಯೊಂದಕ್ಕೆ ₹10 ರಿಂದ ₹ 20 ಬೆಲೆಯಿದ್ದ ಟೊಮೆಟೊ, ಬಟಾಟೆ, ಸೊಪ್ಪು ಮಳೆ ಆರಂಭವಾಗುತ್ತಿದ್ದಂತೆಯೇ ಅರ್ಧ ಬೆಲೆಗೆ ಮಾರಾಟವಾದವು.

ಸಾರ್ವಜನಿಕ ಗಣೇಶೋತ್ಸವ ಸಮಿತಿಗಳು ಪ್ರತಿಷ್ಠಾಪಿಸಿರುವ ಗಣೇಶ ದರ್ಶನಕ್ಕೂಮಳೆಯಿಂದ ಭಕ್ತರಿಗೆ ಅಡಚಣೆಯಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT