<p><strong>ವಿಜಯಪುರ:</strong> ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳುವಂತೆ ಜನರನ್ನು ಜಾಗೃತಿಗೊಳಿಸುವ ಕಾರ್ಯವನ್ನು ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದರು.</p>.<p>ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕೋವಿಡ್ ಲಸಿಕೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ನಗರದ ಆರೋಗ್ಯ ಕೇಂದ್ರಗಳ ಶಾಂತಿನಗರ, ನವಭಾಗ್, ಎಪಿಎಂಸಿ, ದರ್ಗಾ, ಗಣೇಶ ನಗರಗಳಲ್ಲಿ ಈ ವಾಹನವು ಸಂಚರಿಸಿ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.</p>.<p>ಮೂರು ವಾಹನಗಳನ್ನು ಪ್ರಚಾರಕ್ಕೆ ಬಳಸಲಾಗುತ್ತಿದ್ದು ಬಸವನಬಾಗೇವಾಡಿ, ಮುದ್ದೇಬಿಹಾಳದಲ್ಲಿ ಈ ವಾಹನಗಳ ಮೂಲಕ ಪ್ರಚಾರ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>ಕೋವಿಡ್ ಮೊದಲನೇ ಹಾಗೂ ಎರಡನೇ ಡೋಸ್ ಲಸಿಕೆಯನ್ನು ಪಡೆಯುವಂತೆ ಜನರಿಗೆ ತಿಳಿಸಿ, ಗುರಿಗೆ ತಕ್ಕಂತೆ ವ್ಯಾಕ್ಸಿನೇಷನ್ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.</p>.<p>ಡಾ. ಮಹೇಶ್ ನಾಗರಬೆಟ್ಟ, ಡಾ.ಕವಿತಾ ದೊಡ್ಡಮನಿ, ತಾಲ್ಲೂಕು ಆರೋಗ್ಯ ಅಧಿಕಾರಿ ನೂರ್ ಅಮ್ಮದ್ ಬಾಗವಾನ್, ಅಜಿಮ್ ಪ್ರೇಮ್ಜಿ ಫೌಂಡೇಶನ್ ಸದಸ್ಯರಾದ ಸುನೀತಾ, ನಾನಾಗೌಡ, ಡಾ. ಬಾಲಕೃಷ್ಣ, ಶಫೀಕ, ಬಗದಾದಿ, ಇಂದ್ರೇಶ್ ಬಕ್ಷಿ, ಜಮೀರ್ ಬಾಂಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳುವಂತೆ ಜನರನ್ನು ಜಾಗೃತಿಗೊಳಿಸುವ ಕಾರ್ಯವನ್ನು ಮಾಡಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಹೇಳಿದರು.</p>.<p>ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕೋವಿಡ್ ಲಸಿಕೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ನಗರದ ಆರೋಗ್ಯ ಕೇಂದ್ರಗಳ ಶಾಂತಿನಗರ, ನವಭಾಗ್, ಎಪಿಎಂಸಿ, ದರ್ಗಾ, ಗಣೇಶ ನಗರಗಳಲ್ಲಿ ಈ ವಾಹನವು ಸಂಚರಿಸಿ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.</p>.<p>ಮೂರು ವಾಹನಗಳನ್ನು ಪ್ರಚಾರಕ್ಕೆ ಬಳಸಲಾಗುತ್ತಿದ್ದು ಬಸವನಬಾಗೇವಾಡಿ, ಮುದ್ದೇಬಿಹಾಳದಲ್ಲಿ ಈ ವಾಹನಗಳ ಮೂಲಕ ಪ್ರಚಾರ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>ಕೋವಿಡ್ ಮೊದಲನೇ ಹಾಗೂ ಎರಡನೇ ಡೋಸ್ ಲಸಿಕೆಯನ್ನು ಪಡೆಯುವಂತೆ ಜನರಿಗೆ ತಿಳಿಸಿ, ಗುರಿಗೆ ತಕ್ಕಂತೆ ವ್ಯಾಕ್ಸಿನೇಷನ್ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.</p>.<p>ಡಾ. ಮಹೇಶ್ ನಾಗರಬೆಟ್ಟ, ಡಾ.ಕವಿತಾ ದೊಡ್ಡಮನಿ, ತಾಲ್ಲೂಕು ಆರೋಗ್ಯ ಅಧಿಕಾರಿ ನೂರ್ ಅಮ್ಮದ್ ಬಾಗವಾನ್, ಅಜಿಮ್ ಪ್ರೇಮ್ಜಿ ಫೌಂಡೇಶನ್ ಸದಸ್ಯರಾದ ಸುನೀತಾ, ನಾನಾಗೌಡ, ಡಾ. ಬಾಲಕೃಷ್ಣ, ಶಫೀಕ, ಬಗದಾದಿ, ಇಂದ್ರೇಶ್ ಬಕ್ಷಿ, ಜಮೀರ್ ಬಾಂಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>