ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿಯರ ಅತ್ಯಾಚಾರ ಪ್ರಕರಣ: ಮರು ಮರಣೋತ್ತರ ಪರೀಕ್ಷೆಗೆ ಪೋಷಕರ ಆಗ್ರಹ

Last Updated 3 ಜೂನ್ 2021, 17:16 IST
ಅಕ್ಷರ ಗಾತ್ರ

ವಿಜಯಪುರ: ಬಸವನಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಇತ್ತೀಚೆಗೆ ನಡೆದ ಇಬ್ಬರು ಬಾಲಕಿಯರ ಅತ್ಯಾಚಾರ, ಕೊಲೆ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲಾಗಿದ್ದು, ಮರು ಮರಣೋತ್ತರ ಪರೀಕ್ಷೆಯನ್ನು ನಡೆಸಬೇಕು ಎಂದು ಬಾಲಕಿಯರ ಪೋಷಕರು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಗ್ರಾಮದ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ. ಪೊಲೀಸ್ ಇಲಾಖೆ ಕೈಗೊಂಡಿರುವ ತನಿಖೆಯ ದಿಕ್ಕು ತಪ್ಪಿಸಿ, ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಇಬ್ಬರು ಬಾಲಕಿಯರು ಚೆನ್ನಾಗಿಯೇ ಇದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುವಂಥ ತೊಂದರೆಗಳೇನೂ ಇರಲಿಲ್ಲ. ಆದರೆ, ಆರೋಪಿಗಳು ಅವರ ಮೇಲೆ ದೌರ್ಜನ್ಯ ಎಸಗಿ, ಕೊಲೆ ಮಾಡಿ, ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಕರಣದ ಹಿಂದಿರುವ ನೈಜವನ್ನು ಬಯಲಿಗೆಳೆಯಯುವ ಸಂಬಂಧ ಹಾಗೂ ನಮಗೆ ನ್ಯಾಯ ಒದಗಿಸಲು ಶವಗಳ ಮರಣೋತ್ತರ ಪರೀಕ್ಷೆಯನ್ನು ತಮ್ಮ ನೇತೃತ್ವದಲ್ಲಿ ನಡೆಸಬೇಕೆಂದು ಪೋಷಕರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT