<p><strong>ವಿಜಯಪುರ</strong>: ಬಸವನ ಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರ ಬಾಲಕಿಯರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.</p>.<p>ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ ಎಂದು ಗ್ರಾಮದ ಯುವಕನ ಹೆಸರನ್ನು ಉಲ್ಲೇಖಿಸಿ ಬಾಲಕಿಯರ ಪೋಷಕರು ಬಸವನ ಬಾಗೇವಾಡಿ ಠಾಣೆಯಲ್ಲಿ ಮೇ 14ರಂದು ದೂರು ದಾಖಲಿಸಿದ್ದರು.</p>.<p>ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ವಿಜಯಪುರ ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ, ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ್ದರು.</p>.<p>ಇನ್ನೊಂದೆಡೆ, ಎರಡು ಬೇರೆ ಕೋಮಿಗೆ ಸೇರಿದ ಹುಡುಗ ಮತ್ತು ಹುಡುಗಿಯರ ನಡುವಿನ ಪ್ರೇಮ ಪ್ರಕರಣವಿದು. ಇದನ್ನು ವಿರೋಧಿಸಿ ಮರ್ಯಾದೆಗೇಡು ಹತ್ಯೆ ಮಾಡಲಾಗಿದೆ ಎಂದೂ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು.</p>.<p>‘ಬಾಲಕಿಯರ ಮೇಲೆ ಅತ್ಯಾಚಾರ ನಡೆದಿಲ್ಲ ಮತ್ತು ಕೊಲೆಯೂ ಆಗಿಲ್ಲ. ಇದು ಆತ್ಮಹತ್ಯೆ ಎಂದು ಮರಣೋತ್ತರ ಪರೀಕ್ಷೆಯು ದೃಢಪಡಿಸಿದೆ’ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p><strong>ಪ್ರಕರಣದ ವಿವರ: </strong>ಮೇ 12ರಂದು ಊರಿನಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಮೇ 14ರಂದು ನೆರೆಯ ತಾಲ್ಲೂಕಿನ ಗ್ರಾಮದ ಬಳಿಯಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು.</p>.<p>‘ಐದಾರು ತಿಂಗಳಿಂದ ಬಾಲಕಿಯೊಬ್ಬಳ ಹಿಂದೆ ಬಿದ್ದಿದ್ದ ಆರೋಪಿಯೊಬ್ಬ ಪ್ರೀತಿಸುವಂತೆ ಪೀಡಿಸಿ ಕಿರುಕುಳ ನೀಡಿದ್ದ. ಮೇ 12ರಂದು ಆ ಬಾಲಕಿಯ ಜೊತೆ ಮತ್ತೊಬ್ಬ ಬಾಲಕಿ (ಹತ್ತಿರದ ಸಂಬಂಧಿ)ಯನ್ನು ಪುಸಲಾಯಿಸಿ, ಇಬ್ಬರನ್ನು ಕರೆದುಕೊಂಡು ಹೋಗಿ, ಅತ್ಯಾಚಾರ ಎಸಗಿ, ಕೊಲೆ ಮಾಡಿ ಬಾಲಕಿಯರ ಕೈಗಳನ್ನು ಕಟ್ಟಿ ಬಾವಿಗೆ ಎಸೆದಿದ್ದಾನೆ’ ಎಂದು ಆರೋಪಿಸಿ ಬಸವನ ಬಾಗೇವಾಡಿ ಠಾಣೆಗೆ ಬಾಲಕಿಯರ ಪೋಷಕರು ದೂರು ನೀಡಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/madara-channaia-swamiji-832716.html" target="_blank">ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪಿಯನ್ನು ಬಂಧಿಸಿ: ಸ್ವಾಮೀಜಿ</a></p>.<p>ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಆಯೋಗವು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಸೂಚಿಸಿತ್ತು.</p>.<p><strong>ಮೂವರ ಬಂಧನ: </strong>ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಶನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ.</p>.<p>ಬಂಧಿತ ಆರೋಪಿಗಳಿಂದ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.</p>.<p><strong>ಪರಿಹಾರ ವಿತರಣೆ</strong><br />ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯಿಂದ ಸಂತ್ರಸ್ತರ ಕುಟುಂಬದವರಿಗೆ ತಲಾ ₹ 4,12,250 ಮೊತ್ತದ ಚೆಕ್ ಅನ್ನು ಈಗಾಗಲೇ ವಿತರಿಸಲಾಗಿದೆ.</p>.<p>***</p>.<p>ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ.<br /><em><strong>–ಅನುಪಮ್ ಅಗರವಾಲ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿಜಯಪುರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಬಸವನ ಬಾಗೇವಾಡಿ ತಾಲ್ಲೂಕಿನ ಗ್ರಾಮವೊಂದರ ಬಾಲಕಿಯರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.</p>.<p>ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿದೆ ಎಂದು ಗ್ರಾಮದ ಯುವಕನ ಹೆಸರನ್ನು ಉಲ್ಲೇಖಿಸಿ ಬಾಲಕಿಯರ ಪೋಷಕರು ಬಸವನ ಬಾಗೇವಾಡಿ ಠಾಣೆಯಲ್ಲಿ ಮೇ 14ರಂದು ದೂರು ದಾಖಲಿಸಿದ್ದರು.</p>.<p>ಚಿತ್ರದುರ್ಗದ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ವಿಜಯಪುರ ಜಿಲ್ಲೆಯ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ, ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ್ದರು.</p>.<p>ಇನ್ನೊಂದೆಡೆ, ಎರಡು ಬೇರೆ ಕೋಮಿಗೆ ಸೇರಿದ ಹುಡುಗ ಮತ್ತು ಹುಡುಗಿಯರ ನಡುವಿನ ಪ್ರೇಮ ಪ್ರಕರಣವಿದು. ಇದನ್ನು ವಿರೋಧಿಸಿ ಮರ್ಯಾದೆಗೇಡು ಹತ್ಯೆ ಮಾಡಲಾಗಿದೆ ಎಂದೂ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದರು.</p>.<p>‘ಬಾಲಕಿಯರ ಮೇಲೆ ಅತ್ಯಾಚಾರ ನಡೆದಿಲ್ಲ ಮತ್ತು ಕೊಲೆಯೂ ಆಗಿಲ್ಲ. ಇದು ಆತ್ಮಹತ್ಯೆ ಎಂದು ಮರಣೋತ್ತರ ಪರೀಕ್ಷೆಯು ದೃಢಪಡಿಸಿದೆ’ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p><strong>ಪ್ರಕರಣದ ವಿವರ: </strong>ಮೇ 12ರಂದು ಊರಿನಿಂದ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಮೇ 14ರಂದು ನೆರೆಯ ತಾಲ್ಲೂಕಿನ ಗ್ರಾಮದ ಬಳಿಯಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದರು.</p>.<p>‘ಐದಾರು ತಿಂಗಳಿಂದ ಬಾಲಕಿಯೊಬ್ಬಳ ಹಿಂದೆ ಬಿದ್ದಿದ್ದ ಆರೋಪಿಯೊಬ್ಬ ಪ್ರೀತಿಸುವಂತೆ ಪೀಡಿಸಿ ಕಿರುಕುಳ ನೀಡಿದ್ದ. ಮೇ 12ರಂದು ಆ ಬಾಲಕಿಯ ಜೊತೆ ಮತ್ತೊಬ್ಬ ಬಾಲಕಿ (ಹತ್ತಿರದ ಸಂಬಂಧಿ)ಯನ್ನು ಪುಸಲಾಯಿಸಿ, ಇಬ್ಬರನ್ನು ಕರೆದುಕೊಂಡು ಹೋಗಿ, ಅತ್ಯಾಚಾರ ಎಸಗಿ, ಕೊಲೆ ಮಾಡಿ ಬಾಲಕಿಯರ ಕೈಗಳನ್ನು ಕಟ್ಟಿ ಬಾವಿಗೆ ಎಸೆದಿದ್ದಾನೆ’ ಎಂದು ಆರೋಪಿಸಿ ಬಸವನ ಬಾಗೇವಾಡಿ ಠಾಣೆಗೆ ಬಾಲಕಿಯರ ಪೋಷಕರು ದೂರು ನೀಡಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/madara-channaia-swamiji-832716.html" target="_blank">ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಆರೋಪಿಯನ್ನು ಬಂಧಿಸಿ: ಸ್ವಾಮೀಜಿ</a></p>.<p>ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಕರ್ನಾಟಕ ಅನುಸೂಚಿತ ಜಾತಿ ಮತ್ತು ಬುಡಕಟ್ಟು ಆಯೋಗವು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಸೂಚಿಸಿತ್ತು.</p>.<p><strong>ಮೂವರ ಬಂಧನ: </strong>ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಶನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ.</p>.<p>ಬಂಧಿತ ಆರೋಪಿಗಳಿಂದ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.</p>.<p><strong>ಪರಿಹಾರ ವಿತರಣೆ</strong><br />ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯಿಂದ ಸಂತ್ರಸ್ತರ ಕುಟುಂಬದವರಿಗೆ ತಲಾ ₹ 4,12,250 ಮೊತ್ತದ ಚೆಕ್ ಅನ್ನು ಈಗಾಗಲೇ ವಿತರಿಸಲಾಗಿದೆ.</p>.<p>***</p>.<p>ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ.<br /><em><strong>–ಅನುಪಮ್ ಅಗರವಾಲ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿಜಯಪುರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>