<p><strong>ವಿಜಯಪುರ:</strong> ಜೂನ್ನಿಂದ ಮುಂಗಾರು ಪ್ರಾರಂಭವಾಗಲಿದ್ದು, ಈ ಬಾರಿ 25 ಲಕ್ಷ ಸಸಿಗಳನ್ನು ನೆಟ್ಟು ಬೆಳಸುವ ಮೂಲಕಕೋಟಿ ವೃಕ್ಷ ಅಭಿಯಾನ ಸಂಪೂರ್ಣ ಸಫಲತೆ ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಕೋಟಿ ವೃಕ್ಷ ಅಭಿಯಾನದ ಪೂರ್ವ ಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕಳೆದ ನಾಲ್ಕು ವರ್ಷಗಳಲ್ಲಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ 75 ಲಕ್ಷ ಸಸಿಗಳನ್ನು ನೆಡಲಾಗಿದ್ದು, ಈ ವರ್ಷ 25 ಲಕ್ಷ ಸಸಿಗಳನ್ನು ವಿವಿಧ ಪ್ರದೇಶಗಳಲ್ಲಿ ನೆಡುವುದರ ಮೂಲಕ 1 ಕೋಟಿ ಸಸಿಗಳನ್ನು ನೆಡುವ ಕಾರ್ಯ ಪೂರ್ಣಗೊಳಿಸಬೇಕು ಎಂದು ಹೇಳಿದರು.</p>.<p>ಭೂತನಾಳ ಕೆರೆಯ ಹತ್ತಿರವಿರುವ ಕರಾಡದೊಡ್ಡಿ ಸೇರಿದಂತೆ ಜಿಲ್ಲೆಯಾದ್ಯಂತ ಈಗಾಗಲೇ 75 ಲಕ್ಷ ಗಿಡಗಳು ಜೀವ ಪಡೆದುಕೊಂಡಿದ್ದು, ಪಕ್ಷಿ ಸಂಕುಲಕ್ಕೆ ಹೆಚ್ಚಿನ ರೀತಿಯ ಆಕರ್ಷಣೆಯಾಗುತ್ತಿದೆ. ಜಿಲ್ಲೆಯಲ್ಲಿ ಅರಣ್ಯವಲಯ ಹೆಚ್ಚತೊಡಗಿದೆ ಎಂದರು.</p>.<p>ಕೆಬಿಜೆಎನ್ಎಲ್ ಹಾಗೂ ವಿವಿಧ ನರ್ಸರಿಗಳಿಂದ 8 ಲಕ್ಷ ಸಸಿಗಳನ್ನು ಗುರುತಿಸಿ ಜೂನ್ನಲ್ಲಿ ನೆಡುವ ಕಾರ್ಯ ಪ್ರಾರಂಭಿಸಬೇಕು ಹಾಗೂ ಅವುಗಳ ಸೂಕ್ತ ಪೋಷಣೆಯ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.</p>.<p>ಜಿಲ್ಲೆಯಲ್ಲಿ ಅತಿಕ್ರಮಣಕ್ಕೆ ಒಳಗಾದ ಪ್ರದೇಶ ಹಾಗೂ ಖಾಲಿ ಇರುವ ಜಾಗಗಳನ್ನು ಗುರುತಿಸಬೇಕು. ಸಸಿಗಳನ್ನು ನೆಡಲು ಸೂಕ್ತ ಪ್ರದೇಶಗಳ ವರದಿಯನ್ನು ತಯಾರಿಸಿ ಜಿಲ್ಲಾಡಳಿತಕ್ಕೆ ಎರಡು ದಿನಗಳೊಳಗೆ ನೀಡಬೇಕು ಎಂದು ತಿಳಿಸಿದರು.</p>.<p>ಕೆಬಿಜೆಎನ್ಎಲ್ನಿಂದ ಕೃಷ್ಣಾ ನದಿ ತೀರದ ರೈತರಿಗೆ ಸಸಿ ವಿತರಣೆ ಪ್ರಾರಂಭಿಸಬೇಕು ಹಾಗೂ ವಿವಿಧ ನರ್ಸರಿಗಳು ತಮ್ಮಲ್ಲಿರುವ ಸಸಿಗಳ ಮಾಹಿತಿಯನ್ನು ನೀಡಬೇಕು. ಸರ್ಕಾರಿ ಕಚೇರಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಕಾಲೇಜು ಆವರಣಗಳಲ್ಲಿ ಸಸಿ ನೆಡುವಂತಾಗಬೇಕು ಎಂದು ಸೂಚಿಸಿದರು.</p>.<p>ಭೂತನಾಳದ ಕರಾಡದೊಡ್ಡಿಯಲ್ಲಿ ಇರುವ ಗಿಡಮರಗಳಲ್ಲಿ ವಿವಿಧ ಜಾತಿಯ ಪಕ್ಷಿಗಳು ಆಶ್ರಯ ಪಡೆದಿವೆ. ಜಿಲ್ಲೆಯಲ್ಲಿ ಒಟ್ಟು 285 ವಿವಿಧ ಜಾತಿಯ ಪಕ್ಷಿಗಳಿದ್ದು, ಭೂತನಾಳದ ಸುತ್ತಮುತ್ತಲಿನ ಪ್ರದೇಶದಲ್ಲೆ 185ಕ್ಕೂ ಹೆಚ್ಚಿನ ವಿವಿಧ ಜಾತಿಯ ಪಕ್ಷಿ ಸಂಕುಲ ವಾಸವಾಗಿದೆ ಎಂದು ಹೇಳಿದರು.</p>.<p>ಕರಾಡದೊಡ್ಡಿಯಲ್ಲಿ ಲಾಲ್ಬಾಗ್ ಮತ್ತು ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಸ್ಯ ಸಂಗಮ ಉದ್ಯಾನ ಪ್ರಾರಂಭಿಸುವ ನಿಟ್ಟಿನಲ್ಲಿ ವಿವಿಧ ಜಾತಿಯ ಗಿಡಗಳ ವರದಿಯನ್ನು ಪಡೆಯಲಾಗಿದ್ದು, ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯ್ತು ಸಿಇಒ ಗೋವಿಂದ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ವಿಜಯಪುರ ಉಪವಿಭಾಗಾಧಿಕಾರಿ ಗೆಣ್ಣೂರ, ಸಂಗಮೇಶ ಬಿರಾದಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳುಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜೂನ್ನಿಂದ ಮುಂಗಾರು ಪ್ರಾರಂಭವಾಗಲಿದ್ದು, ಈ ಬಾರಿ 25 ಲಕ್ಷ ಸಸಿಗಳನ್ನು ನೆಟ್ಟು ಬೆಳಸುವ ಮೂಲಕಕೋಟಿ ವೃಕ್ಷ ಅಭಿಯಾನ ಸಂಪೂರ್ಣ ಸಫಲತೆ ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಕೋಟಿ ವೃಕ್ಷ ಅಭಿಯಾನದ ಪೂರ್ವ ಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕಳೆದ ನಾಲ್ಕು ವರ್ಷಗಳಲ್ಲಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ 75 ಲಕ್ಷ ಸಸಿಗಳನ್ನು ನೆಡಲಾಗಿದ್ದು, ಈ ವರ್ಷ 25 ಲಕ್ಷ ಸಸಿಗಳನ್ನು ವಿವಿಧ ಪ್ರದೇಶಗಳಲ್ಲಿ ನೆಡುವುದರ ಮೂಲಕ 1 ಕೋಟಿ ಸಸಿಗಳನ್ನು ನೆಡುವ ಕಾರ್ಯ ಪೂರ್ಣಗೊಳಿಸಬೇಕು ಎಂದು ಹೇಳಿದರು.</p>.<p>ಭೂತನಾಳ ಕೆರೆಯ ಹತ್ತಿರವಿರುವ ಕರಾಡದೊಡ್ಡಿ ಸೇರಿದಂತೆ ಜಿಲ್ಲೆಯಾದ್ಯಂತ ಈಗಾಗಲೇ 75 ಲಕ್ಷ ಗಿಡಗಳು ಜೀವ ಪಡೆದುಕೊಂಡಿದ್ದು, ಪಕ್ಷಿ ಸಂಕುಲಕ್ಕೆ ಹೆಚ್ಚಿನ ರೀತಿಯ ಆಕರ್ಷಣೆಯಾಗುತ್ತಿದೆ. ಜಿಲ್ಲೆಯಲ್ಲಿ ಅರಣ್ಯವಲಯ ಹೆಚ್ಚತೊಡಗಿದೆ ಎಂದರು.</p>.<p>ಕೆಬಿಜೆಎನ್ಎಲ್ ಹಾಗೂ ವಿವಿಧ ನರ್ಸರಿಗಳಿಂದ 8 ಲಕ್ಷ ಸಸಿಗಳನ್ನು ಗುರುತಿಸಿ ಜೂನ್ನಲ್ಲಿ ನೆಡುವ ಕಾರ್ಯ ಪ್ರಾರಂಭಿಸಬೇಕು ಹಾಗೂ ಅವುಗಳ ಸೂಕ್ತ ಪೋಷಣೆಯ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.</p>.<p>ಜಿಲ್ಲೆಯಲ್ಲಿ ಅತಿಕ್ರಮಣಕ್ಕೆ ಒಳಗಾದ ಪ್ರದೇಶ ಹಾಗೂ ಖಾಲಿ ಇರುವ ಜಾಗಗಳನ್ನು ಗುರುತಿಸಬೇಕು. ಸಸಿಗಳನ್ನು ನೆಡಲು ಸೂಕ್ತ ಪ್ರದೇಶಗಳ ವರದಿಯನ್ನು ತಯಾರಿಸಿ ಜಿಲ್ಲಾಡಳಿತಕ್ಕೆ ಎರಡು ದಿನಗಳೊಳಗೆ ನೀಡಬೇಕು ಎಂದು ತಿಳಿಸಿದರು.</p>.<p>ಕೆಬಿಜೆಎನ್ಎಲ್ನಿಂದ ಕೃಷ್ಣಾ ನದಿ ತೀರದ ರೈತರಿಗೆ ಸಸಿ ವಿತರಣೆ ಪ್ರಾರಂಭಿಸಬೇಕು ಹಾಗೂ ವಿವಿಧ ನರ್ಸರಿಗಳು ತಮ್ಮಲ್ಲಿರುವ ಸಸಿಗಳ ಮಾಹಿತಿಯನ್ನು ನೀಡಬೇಕು. ಸರ್ಕಾರಿ ಕಚೇರಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಕಾಲೇಜು ಆವರಣಗಳಲ್ಲಿ ಸಸಿ ನೆಡುವಂತಾಗಬೇಕು ಎಂದು ಸೂಚಿಸಿದರು.</p>.<p>ಭೂತನಾಳದ ಕರಾಡದೊಡ್ಡಿಯಲ್ಲಿ ಇರುವ ಗಿಡಮರಗಳಲ್ಲಿ ವಿವಿಧ ಜಾತಿಯ ಪಕ್ಷಿಗಳು ಆಶ್ರಯ ಪಡೆದಿವೆ. ಜಿಲ್ಲೆಯಲ್ಲಿ ಒಟ್ಟು 285 ವಿವಿಧ ಜಾತಿಯ ಪಕ್ಷಿಗಳಿದ್ದು, ಭೂತನಾಳದ ಸುತ್ತಮುತ್ತಲಿನ ಪ್ರದೇಶದಲ್ಲೆ 185ಕ್ಕೂ ಹೆಚ್ಚಿನ ವಿವಿಧ ಜಾತಿಯ ಪಕ್ಷಿ ಸಂಕುಲ ವಾಸವಾಗಿದೆ ಎಂದು ಹೇಳಿದರು.</p>.<p>ಕರಾಡದೊಡ್ಡಿಯಲ್ಲಿ ಲಾಲ್ಬಾಗ್ ಮತ್ತು ಕಬ್ಬನ್ ಪಾರ್ಕ್ ಮಾದರಿಯಲ್ಲಿ ಸಸ್ಯ ಸಂಗಮ ಉದ್ಯಾನ ಪ್ರಾರಂಭಿಸುವ ನಿಟ್ಟಿನಲ್ಲಿ ವಿವಿಧ ಜಾತಿಯ ಗಿಡಗಳ ವರದಿಯನ್ನು ಪಡೆಯಲಾಗಿದ್ದು, ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯ್ತು ಸಿಇಒ ಗೋವಿಂದ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ, ವಿಜಯಪುರ ಉಪವಿಭಾಗಾಧಿಕಾರಿ ಗೆಣ್ಣೂರ, ಸಂಗಮೇಶ ಬಿರಾದಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳುಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>