<p><strong>ವಿಜಯಪುರ:</strong> ತಿಕೋಟಾ ತಾಲ್ಲೂಕಿನ ಬಾಬಾನಗರದ ಪ್ರಗತಿಪರ ರೈತ ಸಿದ್ರಾಮೇಶ್ವರಗೌಡ ಬಿರಾದಾರ ತಮ್ಮ ತೋಟದಲ್ಲಿ ಬೆಳೆದ ರೆಡ್ ಡೈಮಂಡ್ ತಳಿಯ ಪೇರಲ ಹಣ್ಣನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಉಡುಗೊರೆಯಾಗಿ ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ.</p>.<p>ನಗರದಲ್ಲಿರುವ ಸಚಿವರ ಗೃಹ ಕಚೇರಿಗೆ ಸೋಮವಾರ ಆಗಮಿಸಿದ ಅವರು, ತಮ್ಮ ಒಂದು ಎಕರೆ ಭೂಮಿಯಲ್ಲಿ ಸಾವಯವ ಕೃಷಿ ಮೂಲಕ ರೆಡ್ ಡೈಮಂಡ್ ತಳಿಯ ಪೇರಲ ಹಣ್ಣು ಬೆಳೆಯುತ್ತಿರುವುದಾಗಿ ತಿಳಿಸಿದರು. ಅಲ್ಲದೇ, ತಾವು ಬೆಳೆದ ಪೇರಲ ಹಣ್ಣಿನ ಉಡುಗೊರೆ ನೀಡಿದರು.</p>.<p>ಗುಜರಾತಿನಿಂದ ಈ ವಿಶೇಷ ತಳಿಯ ಬೀಜ ತರಿಸಿ ಹಣ್ಣು ಬೆಳೆದಿರುವುದಾಗಿ ತಿಳಿಸಿದ ಅವರು, ಸಚಿವರು ಕೈಗೊಂಡ ನೀರಾವರಿ ಯೋಜನೆಗಳಿಂದಾಗಿ ಗುಣಮಟ್ಟದ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸಹಾಯವಾಗಿದೆ. ಹೆಚ್ಚಿನ ನೀರು ಅಗತ್ಯವಾಗಿರುವ ಈ ತಳಿ ಪೇರಲ ಬೆಳೆಯಲು ನೀರಾವರಿ ಯೋಜನೆಗಳು ಪ್ರಮುಖ ಕಾರಣವಾಗಿವೆ. ವರ್ಷಕ್ಕೆ ಎರಡು ಬಾರಿ ಈ ಹಣ್ಣನ್ನು ಬೆಳೆಯಬಹುದಾಗಿದ್ದು, ವಾರ್ಷಿಕವಾಗಿ ₹7 ರಿಂದ ₹8 ಲಕ್ಷ ಆದಾಯ ಗಳಿಸಬಹುದು ಎಂದು ಸಂತಸ ವ್ಯಕ್ತಪಡಿಸಿದರು.</p>.<p>ಸಚಿವ ಎಂ.ಬಿ.ಪಾಟೀಲ ಮಾತನಾಡಿದ, ರೈತರ ಸಾರ್ಥಕ ಯಶೋಗಾಥೆ ಕೇಳಿ ಸಂತಸವಾಗಿದೆ. ತೋಟಗಾರಿಕೆ ಮತ್ತಷ್ಟು ಯಶಸ್ವಿಯಾಗಲಿ. ಇಂಥ ನೂತನ ಪ್ರಯತ್ನಗಳು ನಮ್ಮ ಜಿಲ್ಲೆಯ ಕೃಷಿ, ತೋಟಗಾರಿಕೆಯನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲಿವೆ ಎಂದು ಹೇಳಿದರು.</p>.<p>ವಿಜಯಪುರ-ಬಾಗಲಕೋಟೆ ಕೆ.ಎಂ.ಎಫ್ ನಿರ್ದೇಶಕ ಸಿದಗೊಂಡ ರುದ್ರಗೌಡರ, ತಿಕೋಟಾ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ತಿಕೋಟಾ ತಾಲ್ಲೂಕಿನ ಬಾಬಾನಗರದ ಪ್ರಗತಿಪರ ರೈತ ಸಿದ್ರಾಮೇಶ್ವರಗೌಡ ಬಿರಾದಾರ ತಮ್ಮ ತೋಟದಲ್ಲಿ ಬೆಳೆದ ರೆಡ್ ಡೈಮಂಡ್ ತಳಿಯ ಪೇರಲ ಹಣ್ಣನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಉಡುಗೊರೆಯಾಗಿ ನೀಡಿ ಕೃತಜ್ಞತೆ ಸಲ್ಲಿಸಿದ್ದಾರೆ.</p>.<p>ನಗರದಲ್ಲಿರುವ ಸಚಿವರ ಗೃಹ ಕಚೇರಿಗೆ ಸೋಮವಾರ ಆಗಮಿಸಿದ ಅವರು, ತಮ್ಮ ಒಂದು ಎಕರೆ ಭೂಮಿಯಲ್ಲಿ ಸಾವಯವ ಕೃಷಿ ಮೂಲಕ ರೆಡ್ ಡೈಮಂಡ್ ತಳಿಯ ಪೇರಲ ಹಣ್ಣು ಬೆಳೆಯುತ್ತಿರುವುದಾಗಿ ತಿಳಿಸಿದರು. ಅಲ್ಲದೇ, ತಾವು ಬೆಳೆದ ಪೇರಲ ಹಣ್ಣಿನ ಉಡುಗೊರೆ ನೀಡಿದರು.</p>.<p>ಗುಜರಾತಿನಿಂದ ಈ ವಿಶೇಷ ತಳಿಯ ಬೀಜ ತರಿಸಿ ಹಣ್ಣು ಬೆಳೆದಿರುವುದಾಗಿ ತಿಳಿಸಿದ ಅವರು, ಸಚಿವರು ಕೈಗೊಂಡ ನೀರಾವರಿ ಯೋಜನೆಗಳಿಂದಾಗಿ ಗುಣಮಟ್ಟದ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸಹಾಯವಾಗಿದೆ. ಹೆಚ್ಚಿನ ನೀರು ಅಗತ್ಯವಾಗಿರುವ ಈ ತಳಿ ಪೇರಲ ಬೆಳೆಯಲು ನೀರಾವರಿ ಯೋಜನೆಗಳು ಪ್ರಮುಖ ಕಾರಣವಾಗಿವೆ. ವರ್ಷಕ್ಕೆ ಎರಡು ಬಾರಿ ಈ ಹಣ್ಣನ್ನು ಬೆಳೆಯಬಹುದಾಗಿದ್ದು, ವಾರ್ಷಿಕವಾಗಿ ₹7 ರಿಂದ ₹8 ಲಕ್ಷ ಆದಾಯ ಗಳಿಸಬಹುದು ಎಂದು ಸಂತಸ ವ್ಯಕ್ತಪಡಿಸಿದರು.</p>.<p>ಸಚಿವ ಎಂ.ಬಿ.ಪಾಟೀಲ ಮಾತನಾಡಿದ, ರೈತರ ಸಾರ್ಥಕ ಯಶೋಗಾಥೆ ಕೇಳಿ ಸಂತಸವಾಗಿದೆ. ತೋಟಗಾರಿಕೆ ಮತ್ತಷ್ಟು ಯಶಸ್ವಿಯಾಗಲಿ. ಇಂಥ ನೂತನ ಪ್ರಯತ್ನಗಳು ನಮ್ಮ ಜಿಲ್ಲೆಯ ಕೃಷಿ, ತೋಟಗಾರಿಕೆಯನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲಿವೆ ಎಂದು ಹೇಳಿದರು.</p>.<p>ವಿಜಯಪುರ-ಬಾಗಲಕೋಟೆ ಕೆ.ಎಂ.ಎಫ್ ನಿರ್ದೇಶಕ ಸಿದಗೊಂಡ ರುದ್ರಗೌಡರ, ತಿಕೋಟಾ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>