<p><strong>ವಿಜಯಪುರ:</strong> ‘ಸಚಿವ ಸಂಪುಟ ಎಂದರೆ ಕೇವಲ ಬೆಳಗಾವಿ, ಬೆಂಗಳೂರು ಎಂಬಂತಾಗಿದೆ. ಈ ಪ್ರಾದೇಶಿಕ ಅಸಮಾನತೆ ತೊಡೆದುಹಾಕಲು ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇತರ ಜಿಲ್ಲೆಗಳ ಶಾಸಕರ ಆಕಾಂಕ್ಷಿಗಳಿಗೂ ಮುಖ್ಯಮಂತ್ರಿ ಸ್ಪಂದಿಸಬೇಕು. ಮಹೇಶ ಕುಮಠಳ್ಳಿ ಅವರಿಗೆ ಏಕೆ ಸಚಿವ ಸ್ಥಾನ ನೀಡಿಲ್ಲ ಎಂಬುದು ಗೊತ್ತಾಗಬೇಕು. ಪ್ರಾದೇಶಿಕ ಅಸಮಾನತೆ, ಬಜೆಟ್ನಲ್ಲಿ ಹಣ ಮೀಸಲು ಇಡುವ ಬಗ್ಗೆ ಶಾಸಕರೊಂದಿಗೆ ಚರ್ಚಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಸಂಪುಟ ವಿಸ್ತರಣೆಯಿಂದ ಬಿಜೆಪಿ ಮೂಲ ಶಾಸಕರಲ್ಲಿ ಅಸಮಾಧಾನ ಉಂಟಾಗಿದೆ. ಇದನ್ನು ಹೋಗಲಾಡಿಸಲು ಸಭೆ ಕರೆಯಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಸಚಿವ ಸಂಪುಟ ಎಂದರೆ ಕೇವಲ ಬೆಳಗಾವಿ, ಬೆಂಗಳೂರು ಎಂಬಂತಾಗಿದೆ. ಈ ಪ್ರಾದೇಶಿಕ ಅಸಮಾನತೆ ತೊಡೆದುಹಾಕಲು ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇತರ ಜಿಲ್ಲೆಗಳ ಶಾಸಕರ ಆಕಾಂಕ್ಷಿಗಳಿಗೂ ಮುಖ್ಯಮಂತ್ರಿ ಸ್ಪಂದಿಸಬೇಕು. ಮಹೇಶ ಕುಮಠಳ್ಳಿ ಅವರಿಗೆ ಏಕೆ ಸಚಿವ ಸ್ಥಾನ ನೀಡಿಲ್ಲ ಎಂಬುದು ಗೊತ್ತಾಗಬೇಕು. ಪ್ರಾದೇಶಿಕ ಅಸಮಾನತೆ, ಬಜೆಟ್ನಲ್ಲಿ ಹಣ ಮೀಸಲು ಇಡುವ ಬಗ್ಗೆ ಶಾಸಕರೊಂದಿಗೆ ಚರ್ಚಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಸಂಪುಟ ವಿಸ್ತರಣೆಯಿಂದ ಬಿಜೆಪಿ ಮೂಲ ಶಾಸಕರಲ್ಲಿ ಅಸಮಾಧಾನ ಉಂಟಾಗಿದೆ. ಇದನ್ನು ಹೋಗಲಾಡಿಸಲು ಸಭೆ ಕರೆಯಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>