ವಿಜಯಪುರ: ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಭಾರಿ ಮಳೆಯ ಸುರಿಯುತ್ತಿರುವ ಕಾರಣ ಆಲಮಟ್ಟಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮ ಶುಕ್ರವಾರ ಮಧ್ಯಾಹ್ನ 1ರಿಂದ ಜಲಾಶಯದ 24 ಗೇಟ್ಗಳನ್ನು ತೆಗೆದು ಕೃಷ್ಣಾ ನದಿಗೆ 2.30 ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಜಲಾಶಯದ ಒಳಹರಿವನ್ನು ಪರಿಗಣಿಸಿ ಸಂಜೆ ವೇಳೆಗೆ 3 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುವುದು ಎಂದುಆಲಮಟ್ಟಿ ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಎಚ್. ಸುರೇಶ ತಿಳಿಸಿದ್ದಾರೆ.
ಜಲಾಶಯದ ಕೆಳಭಾಗದ ಪ್ರದೇಶದ ಜನರು ಎಚ್ಚರದಿಂದ ಇರಬೇಕು. ನದಿ ಬಳಿ ತೆರಳಬಾರದು ಎಂದು ಸೂಚನೆ ನೀಡಲಾಗಿದೆ.