<p><strong>ಸಿಂದಗಿ</strong>: ಸರಳ ಸಜ್ಜನಿಕೆಯ ರಾಜಕಾರಣಿ, ಶಿಕ್ಷಣ ಪ್ರೇಮಿ, ಮಾಜಿ ಸಚಿವ ಎಂ.ಸಿ.ಮನಗೂಳಿ ಅಗಲಿ ಇಂದಿಗೆ (ಜ.28) ಐದು ವರ್ಷ ಗತಿಸಿದರೂ ಅವರು ಮಾಡಿದ ಸೇವೆ, ಅಭಿವೃದ್ಧಿಪರ ಕಾರ್ಯಗಳಿಂದಾಗಿ ಜನಮನದಲ್ಲಿ ಸದಾ ಹಚ್ಚ ಹಸಿರಾಗಿ ಉಳಿದಿದ್ದಾರೆ.</p>.<p>ಆದರ್ಶವಾಗಿ ಬಾಳಿ ಬದುಕಿ ತಮ್ಮ ಸಾಮರ್ಥ್ಯ ಮತ್ತು ಪ್ರಯತ್ನದಿಂದ ಶೂನ್ಯದಿಂದ ಶಿಖರಕ್ಕೇರಿದ ಮನಗೂಳಿ ಅವರ ಜೀವನ ನಮಗೆಲ್ಲ ಸ್ಫೂರ್ತಿ.</p>.<p>ಗ್ರಾಮ ಸೇವಕರಾಗಿದ್ದ ಮನಗೂಳಿ ಅವರು ಗ್ರಾಮೀಣಾಭಿವೃದ್ಧಿ ಸಚಿವರಾದದ್ದು ಸಾಮಾನ್ಯ ಸಾಧನೆಯಲ್ಲ. ಅವರ ಸಾಧನೆಯ ಹಿಂದಿನ ಶಕ್ತಿ ಅವರ ಪತ್ನಿ ಸಿದ್ದಮ್ಮಗೌಡತಿ.</p>.<p>ದಿವಂಗತ ಬಿ.ಕೆ.ಗುಡದಿನ್ನಿಯವರ ರಾಜಕೀಯ ಶಿಷ್ಯರಾಗಿದ್ದರು. 1976 ರಲ್ಲಿ ತಾಲ್ಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ನಿರ್ದೇಶಕರಾದರು. ನಂತರ ಅದೇ ಸಂಸ್ಥೆಯ ಅಧ್ಯಕ್ಷರಾಗಿ ಶಿಕ್ಷಣ ಸಂಸ್ಥೆಯನ್ನು ಹೆಮ್ಮರವಾಗಿ ಬೆಳೆಸಿದರು.</p>.<p>1989ರಲ್ಲಿ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡರು. 1994ರಲ್ಲಿ ಅದೇ ಪಕ್ಷದಿಂದ ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕರಾದರು. ಜೊತೆಗೆ ಸಚಿವರಾಗಿಯೂ ಕೆಲಸ ಮಾಡಿದರು.</p>.<p>‘ರೈತರಿಗಾಗಿ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಅನುಷ್ಠಾನಗೊಳ್ಳುವ ತನಕ ಪಾದರಕ್ಷೆ ಧರಿಸುವದಿಲ್ಲ’ ಎಂದು ಬರದ ನಾಡಿಗೆ ನೀರು ಹರಿಸಿ ಆಧುನಿಕ ಭಗೀರಥ ಎಂದು ಹೆಸರುವಾಸಿಯಾದರು.</p>.<p>2018ರಲ್ಲಿ ಮತ್ತೆ ಜೆಡಿಎಸ್ ಪಕ್ಷದಿಂದ ಶಾಸಕರಾದರು. ಎರಡನೆಯ ಬಾರಿಗೆ ಮತ್ತೆ ಸಚಿವರಾದರು. ಆಲಮೇಲ ಪಟ್ಟಣವನ್ನು ತಾಲ್ಲೂಕು ಕೇಂದ್ರವಾಗಿಸಿ ಅಲ್ಲಿ ತೋಟಗಾರಿಕೆ ಕಾಲೇಜು ಮಂಜೂರು ಮಾಡಿಸಿದರು. ಬಳಗಾನೂರ ಕೆರೆಯಿಂದ ಸಿಂದಗಿ ಕೆರೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಿದರು.</p>.<p>ಸಿಂದಗಿ ಪಟ್ಟಣಕ್ಕೆ ಒಳಚರಂಡಿ ಕಾಮಗಾರಿ, ಮಿನಿವಿಧಾನಸೌಧ ಕಟ್ಟಡಕ್ಕೆ ಸರ್ಕಾರದಿಂದ ಮಂಜೂರಾತಿ ಪಡೆದರು. ಪಟ್ಟಣದ ಪ್ರತಿಯೊಂದು ವಾರ್ಡಿಗೆ ₹1 ಕೋಟಿ ಬಿಡುಗಡೆಗೊಳಿಸಿ ಪಟ್ಟಣವನ್ನು ಅಭಿವೃದ್ಧಿಪಡಿಸಿದರು. ಕಡಣಿ ಬ್ಯಾರೇಜು ನಿರ್ಮಾಣಕ್ಕೆ ಸರ್ಕಾರದಿಂದ ಅನುಮತಿ ಪಡೆದುಕೊಂಡರು. ಪಂಚಾಚಾರ್ಯ ಪೀಠದ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಂಡಿದ್ದರು.</p>.<p>ಜನಸೇವಕನಾಗಿ, ಶಾಸಕರಾಗಿ, ಸಚಿವರಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದವರು. ಅವರ ಐದನೇ ಪುಣ್ಯಸ್ಮರಣೆ ಆಚರಿಸುತ್ತಿದ್ದೇವೆ. ಭೌತಿಕವಾಗಿ ನಮ್ಮೊಂದಿಗಿಲ್ಲ ಆದರೆ, ಅವರ ಜನಪರ ಕಾರ್ಯಗಳು ಜೀವಂತವಾಗಿವೆ.</p>.<p class="Subhead">ಪ್ರೊ.ಎ.ಆರ್.ಹೆಗ್ಗನದೊಡ್ಡಿ, ಪ್ರಾಚಾರ್ಯ, ಎಚ್.ಜಿ.ಪಿಯು ಕಾಲೇಜು ಸಿಂದಗಿ</p>
<p><strong>ಸಿಂದಗಿ</strong>: ಸರಳ ಸಜ್ಜನಿಕೆಯ ರಾಜಕಾರಣಿ, ಶಿಕ್ಷಣ ಪ್ರೇಮಿ, ಮಾಜಿ ಸಚಿವ ಎಂ.ಸಿ.ಮನಗೂಳಿ ಅಗಲಿ ಇಂದಿಗೆ (ಜ.28) ಐದು ವರ್ಷ ಗತಿಸಿದರೂ ಅವರು ಮಾಡಿದ ಸೇವೆ, ಅಭಿವೃದ್ಧಿಪರ ಕಾರ್ಯಗಳಿಂದಾಗಿ ಜನಮನದಲ್ಲಿ ಸದಾ ಹಚ್ಚ ಹಸಿರಾಗಿ ಉಳಿದಿದ್ದಾರೆ.</p>.<p>ಆದರ್ಶವಾಗಿ ಬಾಳಿ ಬದುಕಿ ತಮ್ಮ ಸಾಮರ್ಥ್ಯ ಮತ್ತು ಪ್ರಯತ್ನದಿಂದ ಶೂನ್ಯದಿಂದ ಶಿಖರಕ್ಕೇರಿದ ಮನಗೂಳಿ ಅವರ ಜೀವನ ನಮಗೆಲ್ಲ ಸ್ಫೂರ್ತಿ.</p>.<p>ಗ್ರಾಮ ಸೇವಕರಾಗಿದ್ದ ಮನಗೂಳಿ ಅವರು ಗ್ರಾಮೀಣಾಭಿವೃದ್ಧಿ ಸಚಿವರಾದದ್ದು ಸಾಮಾನ್ಯ ಸಾಧನೆಯಲ್ಲ. ಅವರ ಸಾಧನೆಯ ಹಿಂದಿನ ಶಕ್ತಿ ಅವರ ಪತ್ನಿ ಸಿದ್ದಮ್ಮಗೌಡತಿ.</p>.<p>ದಿವಂಗತ ಬಿ.ಕೆ.ಗುಡದಿನ್ನಿಯವರ ರಾಜಕೀಯ ಶಿಷ್ಯರಾಗಿದ್ದರು. 1976 ರಲ್ಲಿ ತಾಲ್ಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ನಿರ್ದೇಶಕರಾದರು. ನಂತರ ಅದೇ ಸಂಸ್ಥೆಯ ಅಧ್ಯಕ್ಷರಾಗಿ ಶಿಕ್ಷಣ ಸಂಸ್ಥೆಯನ್ನು ಹೆಮ್ಮರವಾಗಿ ಬೆಳೆಸಿದರು.</p>.<p>1989ರಲ್ಲಿ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡರು. 1994ರಲ್ಲಿ ಅದೇ ಪಕ್ಷದಿಂದ ಸಿಂದಗಿ ವಿಧಾನಸಭಾ ಕ್ಷೇತ್ರದ ಶಾಸಕರಾದರು. ಜೊತೆಗೆ ಸಚಿವರಾಗಿಯೂ ಕೆಲಸ ಮಾಡಿದರು.</p>.<p>‘ರೈತರಿಗಾಗಿ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಅನುಷ್ಠಾನಗೊಳ್ಳುವ ತನಕ ಪಾದರಕ್ಷೆ ಧರಿಸುವದಿಲ್ಲ’ ಎಂದು ಬರದ ನಾಡಿಗೆ ನೀರು ಹರಿಸಿ ಆಧುನಿಕ ಭಗೀರಥ ಎಂದು ಹೆಸರುವಾಸಿಯಾದರು.</p>.<p>2018ರಲ್ಲಿ ಮತ್ತೆ ಜೆಡಿಎಸ್ ಪಕ್ಷದಿಂದ ಶಾಸಕರಾದರು. ಎರಡನೆಯ ಬಾರಿಗೆ ಮತ್ತೆ ಸಚಿವರಾದರು. ಆಲಮೇಲ ಪಟ್ಟಣವನ್ನು ತಾಲ್ಲೂಕು ಕೇಂದ್ರವಾಗಿಸಿ ಅಲ್ಲಿ ತೋಟಗಾರಿಕೆ ಕಾಲೇಜು ಮಂಜೂರು ಮಾಡಿಸಿದರು. ಬಳಗಾನೂರ ಕೆರೆಯಿಂದ ಸಿಂದಗಿ ಕೆರೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಿದರು.</p>.<p>ಸಿಂದಗಿ ಪಟ್ಟಣಕ್ಕೆ ಒಳಚರಂಡಿ ಕಾಮಗಾರಿ, ಮಿನಿವಿಧಾನಸೌಧ ಕಟ್ಟಡಕ್ಕೆ ಸರ್ಕಾರದಿಂದ ಮಂಜೂರಾತಿ ಪಡೆದರು. ಪಟ್ಟಣದ ಪ್ರತಿಯೊಂದು ವಾರ್ಡಿಗೆ ₹1 ಕೋಟಿ ಬಿಡುಗಡೆಗೊಳಿಸಿ ಪಟ್ಟಣವನ್ನು ಅಭಿವೃದ್ಧಿಪಡಿಸಿದರು. ಕಡಣಿ ಬ್ಯಾರೇಜು ನಿರ್ಮಾಣಕ್ಕೆ ಸರ್ಕಾರದಿಂದ ಅನುಮತಿ ಪಡೆದುಕೊಂಡರು. ಪಂಚಾಚಾರ್ಯ ಪೀಠದ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಉಚಿತ ಸಾಮೂಹಿಕ ವಿವಾಹ ಹಮ್ಮಿಕೊಂಡಿದ್ದರು.</p>.<p>ಜನಸೇವಕನಾಗಿ, ಶಾಸಕರಾಗಿ, ಸಚಿವರಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದವರು. ಅವರ ಐದನೇ ಪುಣ್ಯಸ್ಮರಣೆ ಆಚರಿಸುತ್ತಿದ್ದೇವೆ. ಭೌತಿಕವಾಗಿ ನಮ್ಮೊಂದಿಗಿಲ್ಲ ಆದರೆ, ಅವರ ಜನಪರ ಕಾರ್ಯಗಳು ಜೀವಂತವಾಗಿವೆ.</p>.<p class="Subhead">ಪ್ರೊ.ಎ.ಆರ್.ಹೆಗ್ಗನದೊಡ್ಡಿ, ಪ್ರಾಚಾರ್ಯ, ಎಚ್.ಜಿ.ಪಿಯು ಕಾಲೇಜು ಸಿಂದಗಿ</p>