<p class="rtejustify"><strong>ವಿಜಯಪುರ:</strong> ಪಾಲಿಕೆ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ವೈಜ್ಞಾನಿಕ ರೀತಿಯಲ್ಲಿ ದುರಸ್ತಿಗೊಳಿಸಲು ವಿಶೇಷ ಗಮನ ನೀಡುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.<br /><br />ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಗುಂಡಿ ಬಿದ್ದಿರುವ ರಸ್ತೆಗಳ ದುರಸ್ತಿಗೆ ವಿಶೇಷ ಯಂತ್ರಚಾಲಿತ ವಾಹನ ತರಿಸಲು ಸಲಹೆ ನೀಡಿದ ಅವರು,ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.</p>.<p>ನಗರದ ರಸ್ತೆಗಳ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ದೀಪಗಳನ್ನು ಅತ್ಯುತ್ತಮವಾಗಿ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.</p>.<p>ರಸ್ತೆ ನಿಮಯಗಳ ಉಲ್ಲಂಘಿಸುವ ವಾಹನ ಚಾಲಕರ ಡ್ರೈವಿಂಗ್ ಲೈಸನ್ಸ್ ಅಮಾನತ್ತಿನಲ್ಲಿ ಇಡಲು ಕ್ರಮ ಕೈಗೊಳ್ಳಲು ಪೊಲೀಸ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ವಿವಿಧ ರಸ್ತೆಗಳಲ್ಲಿರುವ ಅಪಾಯಕಾರಿಯಾದ ಡಾರ್ಕ್ ಸ್ಪಾಟ್ ಮತ್ತು ಬ್ಲ್ಯಾಕ್ ಸ್ಪಾಟ್ಗಳನ್ನು ಪ್ರತ್ಯೇಕವಾಗಿ ಗುರುತಿಸಬೇಕು ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಸೋಲಾರ್ ಲೈಟ್ ಅಳವಡಿಕೆಗೆ ಅವಕಾಶವಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಗೆ ಸೇರುವಂತಹ ನಗರದ ಮುಖ್ಯ ರಸ್ತೆಗಳ ಸಂಪರ್ಕ ಸ್ಥಳಗಳನ್ನು ಪೊಲೀಸರ ನೆರವಿನೊಂದಿಗೆ ಗುರುತಿಸಿ ವಿದ್ಯುತ್ ದೀಪ ಅಳವಡಿಕೆಗೆ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.</p>.<p>ಹೆಚ್ಚು ಅಪಘಾತ ಸಂಭವಿಸುವ ರಸ್ತೆಗಳನ್ನು ಗುರುತಿಸಿ ವೈಜ್ಞಾನಿಕ ಹಂಪ್ಸ್ ಇರುವಂತೆ ನೋಡಿಕೊಳ್ಳಬೇಕು. ಅವಶ್ಯಕ ರಸ್ತೆ ಸುರಕ್ಷತಾ ಪರಿಕರಗಳನ್ನು ಅಳವಡಿಸಲು ಅವರು ಸಲಹೆ ನೀಡಿದರು.</p>.<p>ನಗರದ ರಸ್ತೆಗಳ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಮ್ಯಾನುವೆಲ್ ಚೆಂಬರ್ಗಳನ್ನು ಸರಿಪಡಿಸಲು ವಿಶೇಷ ಗಮನ ನೀಡುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಒಳಗೊಂಡ ಸಮಿತಿ ರಚಿಸಿಕೊಂಡು ನೋ ಪಾರ್ಕಿಂಗ್ ಸ್ಥಳಗಳ ಮೇಲೆ ನಿಗಾ ಇಡಬೇಕು. ಅಪಘಾತ ವಲಯಗಳನ್ನು ಪುನರ್ ಪರಿಶೀಲನೆ ಮಾಡಿ, ಪ್ರಾದೇಶಿಕ ಸಾರಿಗೆ ಮತ್ತು ಪೊಲೀಸ್ ಇಲಾಖೆ ಸಮನ್ವಯತೆಯಿಂದ ವರದಿ ಸಿದ್ಧಪಡಿಸುವಂತೆ ಸೂಚನೆ ನೀಡಿದರು.</p>.<p>ರಸ್ತೆ ಅಪಘಾತದ ಸಂದರ್ಭದಲ್ಲಿ ಸೆಕ್ಸನ್ 304 ಪ್ರಕರಣ ದಾಖಲಿಸಿಕೊಂಡವರ ಬಗ್ಗೆ ನಿಗಾ ಇಟ್ಟು, ಆಟೊ ರಿಕ್ಷಾ ಚಾಲನಾ ಪರವಾನಗಿ ರದ್ಧತಿಗೆ ಕ್ರಮಕೈಗೊಳ್ಳಬೇಕು ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸೊಲ್ಲಾಪುರ, ಕಲಬುರ್ಗಿ ಅಧಿಕಾರಿಗಳು ಮುಂದಿನ ಸಭೆಗಳಲ್ಲಿ ಕೈಗೊಂಡ ಕ್ರಮಗಳ ವರದಿಯೊಂದಿಗೆ ಬರಬೇಕು ಎಂದು ಅವರು ಸೂಚಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಸಿಂದಗಿ–ದೇವರ ಹಿಪ್ಪರಗಿ ಮಾರ್ಗ ಮಧ್ಯೆದಲ್ಲಿ ಬರುವ (ಶಾಂಭವಿ ರೆಸ್ಟೋರೆಂಟ್ ಹತ್ತಿರ) ಸೇತುವೆ ಕಳೆದ ಒಂದು ವರ್ಷದಿಂದ ನೆನೆಗುದಿಗೆ ಬಿದ್ದಿದ್ದು, ತಕ್ಷಣ ಈ ಕಾಮಗಾರಿ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಸರ್ಕಾರಿ ಬಸ್ಗಳನ್ನು ಬಸ್ ನಿಲ್ದಾಣ ಹೊರತುಪಡಿಸಿ ರಸ್ತೆ ಮಧ್ಯೆದಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸದಂತೆ ವಾಹನ ಚಾಲಕರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಗಮನಕ್ಕೆ ತಂದರು.</p>.<p>ಹೆದ್ದಾರಿ, ರಸ್ತೆಗಳನ್ನು ಅಗೆದು ಕಾಲುವೆ, ಪೈಪ್ಲೈನ್ ನಿರ್ಮಿಸಿದ ನಂತರ ಸಂಬಂಧಪಟ್ಟ ಇಲಾಖೆಯಿಂದ ರಸ್ತೆ ಸರಿಪಡಿಸುವಂತೆ ಸೂಚಿಸಬೇಕು. ಒಂದು ವೇಳೆ ರಸ್ತೆ ಸರಿಪಡಿಸದೆ ಇದ್ದಲ್ಲಿ ಠೇವಣಿ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ಥನಳ್ಳಿ, ರಸ್ತೆ ಅಪಘಾತಗಳು ಕಳೆದ ಮೂರು ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿವೆ. ಮರಣ ಪ್ರಮಾಣ ಹೆಚ್ಚಾಗಿದ್ದು, ಗಂಭೀರ ಪ್ರಮಾಣದ ಗಾಯಗಳ ಪ್ರಕರಣ ಕಡಿಮೆಯಾಗಿವೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ 108 ಪ್ರಚಾರ ಹೆಚ್ಚಾಗಬೇಕು. ರಾತ್ರಿ ವೇಳೆ ಹೆಚ್ಚಿನ ನಿಗಾ ಇಡಬೇಕು. ಅಪಘಾತ ಸ್ಥಳಕ್ಕೆ ಕೂಡಲೇ ಧಾವಿಸುವ ಮೂಲಕ ಸ್ಪಂದಿಸಬೇಕು. ಪ್ರಥಮ ಮತ್ತು ತುರ್ತು ಚಿಕಿತ್ಸೆ ಒದಗಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ವಿಜಯಪುರ:</strong> ಪಾಲಿಕೆ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ವೈಜ್ಞಾನಿಕ ರೀತಿಯಲ್ಲಿ ದುರಸ್ತಿಗೊಳಿಸಲು ವಿಶೇಷ ಗಮನ ನೀಡುವಂತೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಅವರು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.<br /><br />ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಗುಂಡಿ ಬಿದ್ದಿರುವ ರಸ್ತೆಗಳ ದುರಸ್ತಿಗೆ ವಿಶೇಷ ಯಂತ್ರಚಾಲಿತ ವಾಹನ ತರಿಸಲು ಸಲಹೆ ನೀಡಿದ ಅವರು,ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳಿದರು.</p>.<p>ನಗರದ ರಸ್ತೆಗಳ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ದೀಪಗಳನ್ನು ಅತ್ಯುತ್ತಮವಾಗಿ ನಿರ್ವಹಿಸುವಂತೆ ಅವರು ಸೂಚನೆ ನೀಡಿದರು.</p>.<p>ರಸ್ತೆ ನಿಮಯಗಳ ಉಲ್ಲಂಘಿಸುವ ವಾಹನ ಚಾಲಕರ ಡ್ರೈವಿಂಗ್ ಲೈಸನ್ಸ್ ಅಮಾನತ್ತಿನಲ್ಲಿ ಇಡಲು ಕ್ರಮ ಕೈಗೊಳ್ಳಲು ಪೊಲೀಸ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ನಗರದ ವಿವಿಧ ರಸ್ತೆಗಳಲ್ಲಿರುವ ಅಪಾಯಕಾರಿಯಾದ ಡಾರ್ಕ್ ಸ್ಪಾಟ್ ಮತ್ತು ಬ್ಲ್ಯಾಕ್ ಸ್ಪಾಟ್ಗಳನ್ನು ಪ್ರತ್ಯೇಕವಾಗಿ ಗುರುತಿಸಬೇಕು ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಸೋಲಾರ್ ಲೈಟ್ ಅಳವಡಿಕೆಗೆ ಅವಕಾಶವಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಗೆ ಸೇರುವಂತಹ ನಗರದ ಮುಖ್ಯ ರಸ್ತೆಗಳ ಸಂಪರ್ಕ ಸ್ಥಳಗಳನ್ನು ಪೊಲೀಸರ ನೆರವಿನೊಂದಿಗೆ ಗುರುತಿಸಿ ವಿದ್ಯುತ್ ದೀಪ ಅಳವಡಿಕೆಗೆ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.</p>.<p>ಹೆಚ್ಚು ಅಪಘಾತ ಸಂಭವಿಸುವ ರಸ್ತೆಗಳನ್ನು ಗುರುತಿಸಿ ವೈಜ್ಞಾನಿಕ ಹಂಪ್ಸ್ ಇರುವಂತೆ ನೋಡಿಕೊಳ್ಳಬೇಕು. ಅವಶ್ಯಕ ರಸ್ತೆ ಸುರಕ್ಷತಾ ಪರಿಕರಗಳನ್ನು ಅಳವಡಿಸಲು ಅವರು ಸಲಹೆ ನೀಡಿದರು.</p>.<p>ನಗರದ ರಸ್ತೆಗಳ ವ್ಯಾಪ್ತಿಯಲ್ಲಿ ನಿರ್ಮಿಸಲಾದ ಮ್ಯಾನುವೆಲ್ ಚೆಂಬರ್ಗಳನ್ನು ಸರಿಪಡಿಸಲು ವಿಶೇಷ ಗಮನ ನೀಡುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಒಳಗೊಂಡ ಸಮಿತಿ ರಚಿಸಿಕೊಂಡು ನೋ ಪಾರ್ಕಿಂಗ್ ಸ್ಥಳಗಳ ಮೇಲೆ ನಿಗಾ ಇಡಬೇಕು. ಅಪಘಾತ ವಲಯಗಳನ್ನು ಪುನರ್ ಪರಿಶೀಲನೆ ಮಾಡಿ, ಪ್ರಾದೇಶಿಕ ಸಾರಿಗೆ ಮತ್ತು ಪೊಲೀಸ್ ಇಲಾಖೆ ಸಮನ್ವಯತೆಯಿಂದ ವರದಿ ಸಿದ್ಧಪಡಿಸುವಂತೆ ಸೂಚನೆ ನೀಡಿದರು.</p>.<p>ರಸ್ತೆ ಅಪಘಾತದ ಸಂದರ್ಭದಲ್ಲಿ ಸೆಕ್ಸನ್ 304 ಪ್ರಕರಣ ದಾಖಲಿಸಿಕೊಂಡವರ ಬಗ್ಗೆ ನಿಗಾ ಇಟ್ಟು, ಆಟೊ ರಿಕ್ಷಾ ಚಾಲನಾ ಪರವಾನಗಿ ರದ್ಧತಿಗೆ ಕ್ರಮಕೈಗೊಳ್ಳಬೇಕು ಎಂದರು.</p>.<p>ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸೊಲ್ಲಾಪುರ, ಕಲಬುರ್ಗಿ ಅಧಿಕಾರಿಗಳು ಮುಂದಿನ ಸಭೆಗಳಲ್ಲಿ ಕೈಗೊಂಡ ಕ್ರಮಗಳ ವರದಿಯೊಂದಿಗೆ ಬರಬೇಕು ಎಂದು ಅವರು ಸೂಚಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಸಿಂದಗಿ–ದೇವರ ಹಿಪ್ಪರಗಿ ಮಾರ್ಗ ಮಧ್ಯೆದಲ್ಲಿ ಬರುವ (ಶಾಂಭವಿ ರೆಸ್ಟೋರೆಂಟ್ ಹತ್ತಿರ) ಸೇತುವೆ ಕಳೆದ ಒಂದು ವರ್ಷದಿಂದ ನೆನೆಗುದಿಗೆ ಬಿದ್ದಿದ್ದು, ತಕ್ಷಣ ಈ ಕಾಮಗಾರಿ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಸರ್ಕಾರಿ ಬಸ್ಗಳನ್ನು ಬಸ್ ನಿಲ್ದಾಣ ಹೊರತುಪಡಿಸಿ ರಸ್ತೆ ಮಧ್ಯೆದಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸದಂತೆ ವಾಹನ ಚಾಲಕರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಗಮನಕ್ಕೆ ತಂದರು.</p>.<p>ಹೆದ್ದಾರಿ, ರಸ್ತೆಗಳನ್ನು ಅಗೆದು ಕಾಲುವೆ, ಪೈಪ್ಲೈನ್ ನಿರ್ಮಿಸಿದ ನಂತರ ಸಂಬಂಧಪಟ್ಟ ಇಲಾಖೆಯಿಂದ ರಸ್ತೆ ಸರಿಪಡಿಸುವಂತೆ ಸೂಚಿಸಬೇಕು. ಒಂದು ವೇಳೆ ರಸ್ತೆ ಸರಿಪಡಿಸದೆ ಇದ್ದಲ್ಲಿ ಠೇವಣಿ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪ್ರಾದೇಶಿಕ ಸಾರಿಗೆ ಅಧಿಕಾರಿ ಆನಂದ ಪಾರ್ಥನಳ್ಳಿ, ರಸ್ತೆ ಅಪಘಾತಗಳು ಕಳೆದ ಮೂರು ತಿಂಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿವೆ. ಮರಣ ಪ್ರಮಾಣ ಹೆಚ್ಚಾಗಿದ್ದು, ಗಂಭೀರ ಪ್ರಮಾಣದ ಗಾಯಗಳ ಪ್ರಕರಣ ಕಡಿಮೆಯಾಗಿವೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ 108 ಪ್ರಚಾರ ಹೆಚ್ಚಾಗಬೇಕು. ರಾತ್ರಿ ವೇಳೆ ಹೆಚ್ಚಿನ ನಿಗಾ ಇಡಬೇಕು. ಅಪಘಾತ ಸ್ಥಳಕ್ಕೆ ಕೂಡಲೇ ಧಾವಿಸುವ ಮೂಲಕ ಸ್ಪಂದಿಸಬೇಕು. ಪ್ರಥಮ ಮತ್ತು ತುರ್ತು ಚಿಕಿತ್ಸೆ ಒದಗಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷ ಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>