ಇಲ್ಲಿನ ಜ್ಞಾನಯೋಗಾಶ್ರಮದಲ್ಲಿ ಮಂಗಳವಾರ ನಡೆದ ಸಿದ್ಧೇಶ್ವರ ಶ್ರೀಗಳ ಪ್ರಥಮ ವರ್ಷದ ನುಡಿನಮನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಬಸವಾದಿ ಶರಣರು ಜಾತಿ, ವರ್ಗ, ಧರ್ಮ ರಹಿತ ಸಮ ಸಮಾಜದ ಕನಸು ಕಂಡಿದ್ದರು. ನಮ್ಮ ಸಂವಿಧಾನವೂ ಇದನ್ನೇ ಹೇಳುತ್ತದೆ. ಸಿದ್ದೇಶ್ವರ ಶ್ರೀಗಳ ಆಶಯವೂ ಅದೇ ಆಗಿತ್ತು ಎಂಬುದು ಅವರ ಅಂತಿಮ ಅಭಿವಂದನಾ ಪತ್ರದಲ್ಲಿ (ವಿಲ್) ದಾಖಲಾಗಿದೆ’ ಎಂದರು.