ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಹರೆ ಅಧ್ಯಯನ ಪೀಠ ಸ್ಥಾಪನೆಗೆ ಮನವಿ

Last Updated 2 ಮಾರ್ಚ್ 2021, 13:37 IST
ಅಕ್ಷರ ಗಾತ್ರ

ವಿಜಯಪುರ:ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣದ ರುವಾರಿ, ಪತ್ರಕರ್ತ ಮೊಹರೆ ಹಣಮಂತರಾಯರ ಹೆಸರಿನಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ವಿಜಯಪುರಯುವ ಭಾರತ ಸಮಿತಿ ಸಂಘಟನೆ ವತಿಯಿಂದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆಮಂಗಳವಾರ ಮನವಿ ಸಲ್ಲಿಸಲಾಯಿತು.

ಮಾರ್ಚ್‌ 4ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಈ ವಿಷಯವನ್ನು ಚರ್ಚಿಸಿ ಬರುವ ಬಜೆಟ್‌ನಲ್ಲಿ ಮೊಹರೆ ಹಣಮಂತರಾಯರ ಅಧ್ಯಯನ ಪೀಠ ಸ್ಥಾಪನೆ ಘೋಷಣೆ ಮಾಡಬೇಕು ಎಂದು ಸಮಿತಿಯ ಸದಸ್ಯರು ಕಾರಜೋಳ ಬಳಿ ಮನವಿ ಮಾಡಿದರು.

ಸಂಘಟನೆಯ ಮುಖಂಡ ವಿನೋದಕುಮಾರ ಮಣೂರ ಮಾತನಾಡಿ, ಮೊಹರೆ ಅವರು ಕನ್ನಡ ನಾಡಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದು, ಪತ್ರಿಕಾ ಸ್ವಾತಂತ್ರ್ಯ ಹಾಗೂ ವಾಕ್ ಸ್ವಾತಂತ್ರ್ಯದ ಬಗ್ಗೆ ಜನಜಾಗೃತಿ ಮೂಡಿಸಿದ್ದಾರೆ ಎಂದರು.

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ಮೊಹರೆ ಹಣಮಂತರಾಯರು ಮಹಾತ್ಮ ಗಾಂಧಿಯವರ ಕರೆಗೆ ಓಗೊಟ್ಟು ತಮ್ಮ ವಕೀಲಿ ವೃತ್ತಿಯನ್ನು ತೊರೆದು ಬಂದು ಸ್ವಾತಂತ್ರ್ಯ ಸಂಗ್ರಾಮದಲ್ಲಿ ದುಮುಕಿದವರು, ಯುವ ಪೀಳಿಗೆಗೆ ಆದರ್ಶವಾಗಬೇಕಾಗಿರುವ ಮೊಹರೆಯವರ ನೆನಪುಗಳು ನಶಿಸಿ ಹೋಗಲು ಬಿಡಬಾರದು ಎಂದು ಹೇಳಿದರು.

ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿಧ್ಯಾಲಯದಲ್ಲಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಮೊಹರೆ ಹಣಮಂತರಾಯರ ಅಧ್ಯಯನ ಪೀಠ ಸ್ಥಾಪನೆಯಾದಲ್ಲಿ ವಿದ್ಯಾರ್ಥಿನಿಯರಿಗೆ ಆದರ್ಶ ಪತ್ರಕರ್ತನ ಬದುಕು ಬರಹದ ಪರಿಚಯ ಮಾಡಿಕೊಡುವುದಷ್ಟೇ ಅಲ್ಲದೇ ಸಂಶೋಧನೆಗೆ ಪ್ರೇರಣೆಯಾಗುವುದು ಎಂದರು.

ವಿರೇಶ ಗೊಬ್ಬುರ, ಸತೀಶ ಭಾಗಿ, ಗಿರೀಶ ಕುಲಕರ್ಣಿ, ಸಾಗರ ಗಾಯಕವಾಡ, ಸಂತೋಷ ಝಳಕಿ, ಸಚೀನ ಪಾಟೀಲ ಹಲಸಂಗಿ, ಅನೀಲ ಧನಶ್ರೀ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT