<p><strong>ವಿಜಯಪುರ:</strong>ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣದ ರುವಾರಿ, ಪತ್ರಕರ್ತ ಮೊಹರೆ ಹಣಮಂತರಾಯರ ಹೆಸರಿನಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ವಿಜಯಪುರಯುವ ಭಾರತ ಸಮಿತಿ ಸಂಘಟನೆ ವತಿಯಿಂದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆಮಂಗಳವಾರ ಮನವಿ ಸಲ್ಲಿಸಲಾಯಿತು.</p>.<p>ಮಾರ್ಚ್ 4ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಈ ವಿಷಯವನ್ನು ಚರ್ಚಿಸಿ ಬರುವ ಬಜೆಟ್ನಲ್ಲಿ ಮೊಹರೆ ಹಣಮಂತರಾಯರ ಅಧ್ಯಯನ ಪೀಠ ಸ್ಥಾಪನೆ ಘೋಷಣೆ ಮಾಡಬೇಕು ಎಂದು ಸಮಿತಿಯ ಸದಸ್ಯರು ಕಾರಜೋಳ ಬಳಿ ಮನವಿ ಮಾಡಿದರು.</p>.<p>ಸಂಘಟನೆಯ ಮುಖಂಡ ವಿನೋದಕುಮಾರ ಮಣೂರ ಮಾತನಾಡಿ, ಮೊಹರೆ ಅವರು ಕನ್ನಡ ನಾಡಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದು, ಪತ್ರಿಕಾ ಸ್ವಾತಂತ್ರ್ಯ ಹಾಗೂ ವಾಕ್ ಸ್ವಾತಂತ್ರ್ಯದ ಬಗ್ಗೆ ಜನಜಾಗೃತಿ ಮೂಡಿಸಿದ್ದಾರೆ ಎಂದರು.</p>.<p>ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ಮೊಹರೆ ಹಣಮಂತರಾಯರು ಮಹಾತ್ಮ ಗಾಂಧಿಯವರ ಕರೆಗೆ ಓಗೊಟ್ಟು ತಮ್ಮ ವಕೀಲಿ ವೃತ್ತಿಯನ್ನು ತೊರೆದು ಬಂದು ಸ್ವಾತಂತ್ರ್ಯ ಸಂಗ್ರಾಮದಲ್ಲಿ ದುಮುಕಿದವರು, ಯುವ ಪೀಳಿಗೆಗೆ ಆದರ್ಶವಾಗಬೇಕಾಗಿರುವ ಮೊಹರೆಯವರ ನೆನಪುಗಳು ನಶಿಸಿ ಹೋಗಲು ಬಿಡಬಾರದು ಎಂದು ಹೇಳಿದರು.</p>.<p>ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿಧ್ಯಾಲಯದಲ್ಲಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಮೊಹರೆ ಹಣಮಂತರಾಯರ ಅಧ್ಯಯನ ಪೀಠ ಸ್ಥಾಪನೆಯಾದಲ್ಲಿ ವಿದ್ಯಾರ್ಥಿನಿಯರಿಗೆ ಆದರ್ಶ ಪತ್ರಕರ್ತನ ಬದುಕು ಬರಹದ ಪರಿಚಯ ಮಾಡಿಕೊಡುವುದಷ್ಟೇ ಅಲ್ಲದೇ ಸಂಶೋಧನೆಗೆ ಪ್ರೇರಣೆಯಾಗುವುದು ಎಂದರು.</p>.<p>ವಿರೇಶ ಗೊಬ್ಬುರ, ಸತೀಶ ಭಾಗಿ, ಗಿರೀಶ ಕುಲಕರ್ಣಿ, ಸಾಗರ ಗಾಯಕವಾಡ, ಸಂತೋಷ ಝಳಕಿ, ಸಚೀನ ಪಾಟೀಲ ಹಲಸಂಗಿ, ಅನೀಲ ಧನಶ್ರೀ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣದ ರುವಾರಿ, ಪತ್ರಕರ್ತ ಮೊಹರೆ ಹಣಮಂತರಾಯರ ಹೆಸರಿನಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ವಿಜಯಪುರಯುವ ಭಾರತ ಸಮಿತಿ ಸಂಘಟನೆ ವತಿಯಿಂದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆಮಂಗಳವಾರ ಮನವಿ ಸಲ್ಲಿಸಲಾಯಿತು.</p>.<p>ಮಾರ್ಚ್ 4ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದಲ್ಲಿ ಈ ವಿಷಯವನ್ನು ಚರ್ಚಿಸಿ ಬರುವ ಬಜೆಟ್ನಲ್ಲಿ ಮೊಹರೆ ಹಣಮಂತರಾಯರ ಅಧ್ಯಯನ ಪೀಠ ಸ್ಥಾಪನೆ ಘೋಷಣೆ ಮಾಡಬೇಕು ಎಂದು ಸಮಿತಿಯ ಸದಸ್ಯರು ಕಾರಜೋಳ ಬಳಿ ಮನವಿ ಮಾಡಿದರು.</p>.<p>ಸಂಘಟನೆಯ ಮುಖಂಡ ವಿನೋದಕುಮಾರ ಮಣೂರ ಮಾತನಾಡಿ, ಮೊಹರೆ ಅವರು ಕನ್ನಡ ನಾಡಿನ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಿ ಹಿಡಿದು, ಪತ್ರಿಕಾ ಸ್ವಾತಂತ್ರ್ಯ ಹಾಗೂ ವಾಕ್ ಸ್ವಾತಂತ್ರ್ಯದ ಬಗ್ಗೆ ಜನಜಾಗೃತಿ ಮೂಡಿಸಿದ್ದಾರೆ ಎಂದರು.</p>.<p>ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯ ಮೊಹರೆ ಹಣಮಂತರಾಯರು ಮಹಾತ್ಮ ಗಾಂಧಿಯವರ ಕರೆಗೆ ಓಗೊಟ್ಟು ತಮ್ಮ ವಕೀಲಿ ವೃತ್ತಿಯನ್ನು ತೊರೆದು ಬಂದು ಸ್ವಾತಂತ್ರ್ಯ ಸಂಗ್ರಾಮದಲ್ಲಿ ದುಮುಕಿದವರು, ಯುವ ಪೀಳಿಗೆಗೆ ಆದರ್ಶವಾಗಬೇಕಾಗಿರುವ ಮೊಹರೆಯವರ ನೆನಪುಗಳು ನಶಿಸಿ ಹೋಗಲು ಬಿಡಬಾರದು ಎಂದು ಹೇಳಿದರು.</p>.<p>ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿಧ್ಯಾಲಯದಲ್ಲಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಮೊಹರೆ ಹಣಮಂತರಾಯರ ಅಧ್ಯಯನ ಪೀಠ ಸ್ಥಾಪನೆಯಾದಲ್ಲಿ ವಿದ್ಯಾರ್ಥಿನಿಯರಿಗೆ ಆದರ್ಶ ಪತ್ರಕರ್ತನ ಬದುಕು ಬರಹದ ಪರಿಚಯ ಮಾಡಿಕೊಡುವುದಷ್ಟೇ ಅಲ್ಲದೇ ಸಂಶೋಧನೆಗೆ ಪ್ರೇರಣೆಯಾಗುವುದು ಎಂದರು.</p>.<p>ವಿರೇಶ ಗೊಬ್ಬುರ, ಸತೀಶ ಭಾಗಿ, ಗಿರೀಶ ಕುಲಕರ್ಣಿ, ಸಾಗರ ಗಾಯಕವಾಡ, ಸಂತೋಷ ಝಳಕಿ, ಸಚೀನ ಪಾಟೀಲ ಹಲಸಂಗಿ, ಅನೀಲ ಧನಶ್ರೀ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>