<p><strong>ವಿಜಯಪುರ: </strong>ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1.5 ಅಡಿಗಿಂತ ಎತ್ತರದ ಗಜಾನನ ಮೂರ್ತಿಯನ್ನು ಮಾರಾಟ ಮಾಡುವಂತಿಲ್ಲ ಹಾಗೂ ಸಾರ್ವಜನಿಕರು ತಮ್ಮ ಮನೆಗಳಲ್ಲಿ 1.5 ಅಡಿಗಿಂತ ಎತ್ತರದ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ ಸೂಚಿಸಿದ್ದಾರೆ.</p>.<p>ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಿವಿಧ ಗಜಾನನ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿ, ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಜಾನನ ಮೂರ್ತಿಯನ್ನು ಪ್ರತಿಷ್ಠಾಪಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>ಈ ತೀರ್ಮಾನಗಳನ್ನು ಸಾರ್ವಜನಿಕರು ಹಾಗೂ ಗಜಾನನ ಮೂರ್ತಿ ಮಾರಾಟಗಾರರು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಈ ತೀರ್ಮಾನವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<p>ಪರಿಸರ ಸ್ನೇಹಿ ಜೇಡಿ ಮಣ್ಣಿನ ಗಜಾನನ ಮೂರ್ತಿಯನ್ನು ಪ್ರತಿಷ್ಠಾಪಿಸಲು ಅವಕಾಶವಿದೆ ಎಂದುಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1.5 ಅಡಿಗಿಂತ ಎತ್ತರದ ಗಜಾನನ ಮೂರ್ತಿಯನ್ನು ಮಾರಾಟ ಮಾಡುವಂತಿಲ್ಲ ಹಾಗೂ ಸಾರ್ವಜನಿಕರು ತಮ್ಮ ಮನೆಗಳಲ್ಲಿ 1.5 ಅಡಿಗಿಂತ ಎತ್ತರದ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ ಎಂದು ಮಹಾನಗರ ಪಾಲಿಕೆ ಆಯುಕ್ತ ಶ್ರೀಹರ್ಷಾ ಶೆಟ್ಟಿ ಸೂಚಿಸಿದ್ದಾರೆ.</p>.<p>ಕೋವಿಡ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಿವಿಧ ಗಜಾನನ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿ, ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಜಾನನ ಮೂರ್ತಿಯನ್ನು ಪ್ರತಿಷ್ಠಾಪಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.</p>.<p>ಈ ತೀರ್ಮಾನಗಳನ್ನು ಸಾರ್ವಜನಿಕರು ಹಾಗೂ ಗಜಾನನ ಮೂರ್ತಿ ಮಾರಾಟಗಾರರು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಈ ತೀರ್ಮಾನವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<p>ಪರಿಸರ ಸ್ನೇಹಿ ಜೇಡಿ ಮಣ್ಣಿನ ಗಜಾನನ ಮೂರ್ತಿಯನ್ನು ಪ್ರತಿಷ್ಠಾಪಿಸಲು ಅವಕಾಶವಿದೆ ಎಂದುಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>