<p><strong>ವಿಜಯಪುರ:</strong> ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ಮೂರು ದಿನ ಪೂರೈಸಿದ್ದು, ಜಿಲ್ಲೆಯಾದ್ಯಂತ ಸಾರಿಗೆ ಬಸ್ಗಳ ಸಂಚಾರ ಸ್ಥಗಿತವಾಗಿತ್ತು.</p>.<p>ಪ್ರಯಾಣಿಕರಿಗೆ ಬದಲಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಮುಂದಾಗಿರುವ ಸಾರಿಗೆ ಅಧಿಕಾರಿ ವರ್ಗ ಸ್ವತ: ಮುಂದೆ ನಿಂತು ನಗರದ ಕೇಂದ್ರ ಬಸ್ ನಿಲ್ದಾಣದಿಂದಲೇಖಾಸಗಿ ಬಸ್, ಇತರೆ ವಾಹನಗಳ ಕಾರ್ಯಾಚರಣೆಗೆ ಅವಕಾಶ ಕಲ್ಪಿಸಿದರು. ಹುಬ್ಬಳ್ಳಿ, ಅಥಣಿ, ಜಮಖಂಡಿ ಸೇರಿದಂತೆ ವಿವಿಧ ನಗರಗಳಿಗೆ ಖಾಸಗಿ ಬಸ್ಗಳು ಓಡಿದವಾದರೂ ಮುಷ್ಕರದ ಹಿನ್ನೆಲೆಯಲ್ಲಿ ಬೆರಳೆಣಿಕೆ ಪ್ರಯಾಣಿಕರು ಮಾತ್ರ ಬಸ್ಗಳಲ್ಲಿ ಸಂಚರಿಸಿದರು.ಪೊಲೀಸ್ ಭದ್ರತೆಯನ್ನು ಒದಗಿಸಿದ್ದರು.</p>.<p>ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳುಸಾರಿಗೆ ಇಲಾಖೆಯನಿವೃತ್ತ ಚಾಲಕ, ನಿರ್ವಾಹಕರನ್ನುತಾತ್ಕಾಲಿಕವಾಗಿ ಕೆಲಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು, ಈ ಸಂಬಂಧ 53 ಚಾಲಕ ಮತ್ತು 18 ನಿರ್ವಾಹಕರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಕರೆಪತ್ರವನ್ನು ಕಳುಹಿಸಿಹಾಗೂ ಷರತ್ತುಗಳನ್ನು ತಿಳಿಸಿ ಅವರ ಮನವೊಲಿಸುವ ಕಾರ್ಯ ಮಾಡಲಾಗಿದೆ. ನಾಳೆ ಕರ್ತವ್ಯಕ್ಕೆ ಹಾಜರಾಗುವ ಸಾಧ್ಯತೆ ಇದೆ ಎಂದು ವಿಜಯಪುರ ವಿಭಾಗದ ವಿಭಾಗೀಯ ಸಂಚಾಲಕ ನಾರಾಯಣಪ್ಪ ಕುರುಬರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಶುಕ್ರವಾರ 194 ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿದ್ದು,ಶ್ರೀಶೈಲಕ್ಕೆ 50 ಬಸ್ಸುಗಳನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಜಿಲ್ಲೆಯೊಳಗೆ 47 ಬಸ್ಗಳು ಕಾರ್ಯಾಚರಣೆ ನಡೆಸಿವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ಮೂರು ದಿನ ಪೂರೈಸಿದ್ದು, ಜಿಲ್ಲೆಯಾದ್ಯಂತ ಸಾರಿಗೆ ಬಸ್ಗಳ ಸಂಚಾರ ಸ್ಥಗಿತವಾಗಿತ್ತು.</p>.<p>ಪ್ರಯಾಣಿಕರಿಗೆ ಬದಲಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಮುಂದಾಗಿರುವ ಸಾರಿಗೆ ಅಧಿಕಾರಿ ವರ್ಗ ಸ್ವತ: ಮುಂದೆ ನಿಂತು ನಗರದ ಕೇಂದ್ರ ಬಸ್ ನಿಲ್ದಾಣದಿಂದಲೇಖಾಸಗಿ ಬಸ್, ಇತರೆ ವಾಹನಗಳ ಕಾರ್ಯಾಚರಣೆಗೆ ಅವಕಾಶ ಕಲ್ಪಿಸಿದರು. ಹುಬ್ಬಳ್ಳಿ, ಅಥಣಿ, ಜಮಖಂಡಿ ಸೇರಿದಂತೆ ವಿವಿಧ ನಗರಗಳಿಗೆ ಖಾಸಗಿ ಬಸ್ಗಳು ಓಡಿದವಾದರೂ ಮುಷ್ಕರದ ಹಿನ್ನೆಲೆಯಲ್ಲಿ ಬೆರಳೆಣಿಕೆ ಪ್ರಯಾಣಿಕರು ಮಾತ್ರ ಬಸ್ಗಳಲ್ಲಿ ಸಂಚರಿಸಿದರು.ಪೊಲೀಸ್ ಭದ್ರತೆಯನ್ನು ಒದಗಿಸಿದ್ದರು.</p>.<p>ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳುಸಾರಿಗೆ ಇಲಾಖೆಯನಿವೃತ್ತ ಚಾಲಕ, ನಿರ್ವಾಹಕರನ್ನುತಾತ್ಕಾಲಿಕವಾಗಿ ಕೆಲಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು, ಈ ಸಂಬಂಧ 53 ಚಾಲಕ ಮತ್ತು 18 ನಿರ್ವಾಹಕರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಕರೆಪತ್ರವನ್ನು ಕಳುಹಿಸಿಹಾಗೂ ಷರತ್ತುಗಳನ್ನು ತಿಳಿಸಿ ಅವರ ಮನವೊಲಿಸುವ ಕಾರ್ಯ ಮಾಡಲಾಗಿದೆ. ನಾಳೆ ಕರ್ತವ್ಯಕ್ಕೆ ಹಾಜರಾಗುವ ಸಾಧ್ಯತೆ ಇದೆ ಎಂದು ವಿಜಯಪುರ ವಿಭಾಗದ ವಿಭಾಗೀಯ ಸಂಚಾಲಕ ನಾರಾಯಣಪ್ಪ ಕುರುಬರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಶುಕ್ರವಾರ 194 ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿದ್ದು,ಶ್ರೀಶೈಲಕ್ಕೆ 50 ಬಸ್ಸುಗಳನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಜಿಲ್ಲೆಯೊಳಗೆ 47 ಬಸ್ಗಳು ಕಾರ್ಯಾಚರಣೆ ನಡೆಸಿವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>