<p><strong>ವಿಜಯಪುರ</strong>: ನಗರದ ವಿಜಯಾ ಟಯರ್ಸ್ ಎದುರುಗಡೆ ಸರ್ವೀಸ್ ರಸ್ತೆಯಲ್ಲಿ ಲಾರಿಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ದಾಳಿ ನಡೆಸಿ, ₹4,76,310 ಮೌಲ್ಯದ 210 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಆಜೂರ ಗ್ರಾಮದ ಚಾಲಕ ಗಜಾನನ ಮಕಾಳೆ(31), ಗಣೇಶವಾಡಿಯ ಮಾರುತಿ ದೊಡಮನಿ ಮತ್ತು ಬೆಳಗಾವಿಯ ಅಜಾದ್ ನಗರದ ಇಕ್ಬಾಲ್ ತಹಶೀಲ್ದಾರ ಎಂಬುವವರನ್ನು ಬಂಧಿಸಲಾಗಿದೆ.</p>.<p>ಆರೋಪಿಗಳು ಯಾವುದೇ ಲೈಸೆನ್ಸ್ ಪಡೆಯದೇ ವಿಜಯಪುರದಲ್ಲಿರುವ ಎಫ್ಸಿಐ ರೈಲ್ವೆ ಗೂಡ್ಸ್ ಶೆಡ್ಡಿನಿಂದ 426 ಚೀಲ ಅಕ್ಕಿಯನ್ನು ಲಾರಿಯಲ್ಲಿ ಸಾಗಿಸುವಾಗ ದಾಳಿ ನಡೆಸಿ, ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.</p>.<p>ಆಹಾರ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಸೀತಾರಾಮ ಲಮಾಣಿ ಹಾಗೂ ಆದರ್ಶನಗರ ಠಾಣೆ ಪಿಎಸ್ಐ ಪಿ.ಎಸ್.ಕುಚಬಾಳ, ಸಿಬ್ಬಂದಿ ಆರ್.ಎಸ್.ಮರೆಗುದ್ದಿ, ಪಿ.ಎಸ್.ಆಜೂರ, ಮಸ್ತಾನ ಬಗಲಿ ಜಂಟಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಗರದ ವಿಜಯಾ ಟಯರ್ಸ್ ಎದುರುಗಡೆ ಸರ್ವೀಸ್ ರಸ್ತೆಯಲ್ಲಿ ಲಾರಿಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ದಾಳಿ ನಡೆಸಿ, ₹4,76,310 ಮೌಲ್ಯದ 210 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಆಜೂರ ಗ್ರಾಮದ ಚಾಲಕ ಗಜಾನನ ಮಕಾಳೆ(31), ಗಣೇಶವಾಡಿಯ ಮಾರುತಿ ದೊಡಮನಿ ಮತ್ತು ಬೆಳಗಾವಿಯ ಅಜಾದ್ ನಗರದ ಇಕ್ಬಾಲ್ ತಹಶೀಲ್ದಾರ ಎಂಬುವವರನ್ನು ಬಂಧಿಸಲಾಗಿದೆ.</p>.<p>ಆರೋಪಿಗಳು ಯಾವುದೇ ಲೈಸೆನ್ಸ್ ಪಡೆಯದೇ ವಿಜಯಪುರದಲ್ಲಿರುವ ಎಫ್ಸಿಐ ರೈಲ್ವೆ ಗೂಡ್ಸ್ ಶೆಡ್ಡಿನಿಂದ 426 ಚೀಲ ಅಕ್ಕಿಯನ್ನು ಲಾರಿಯಲ್ಲಿ ಸಾಗಿಸುವಾಗ ದಾಳಿ ನಡೆಸಿ, ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.</p>.<p>ಆಹಾರ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಸೀತಾರಾಮ ಲಮಾಣಿ ಹಾಗೂ ಆದರ್ಶನಗರ ಠಾಣೆ ಪಿಎಸ್ಐ ಪಿ.ಎಸ್.ಕುಚಬಾಳ, ಸಿಬ್ಬಂದಿ ಆರ್.ಎಸ್.ಮರೆಗುದ್ದಿ, ಪಿ.ಎಸ್.ಆಜೂರ, ಮಸ್ತಾನ ಬಗಲಿ ಜಂಟಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>