ವಿಜಯಪುರ ನಗರದ ಅರ್ಜುನ ಕುಶಾಲಸಿಂಗ್ ರಜಪೂತ (32) ರವಿನಾಥ ಸುನಿಲಾಲ್ ಪತ್ತಾರ (52) ಪುಷ್ಪಾ ರವಿನಾಥ ಪತ್ತಾರ ( 40) ಮೇಘರಾಜ ಅರ್ಜುನಸಿಂಗ್ ರಜಪೂತ(12) ಸಾವಿಗೀಡಾಗಿದ್ದಾರೆ.
ವಿಜಯಪುರದಿಂದ ಜಮಖಂಡಿಯ ದೇವಸ್ಥಾನಕ್ಕೆ ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು.
ಜಮಖಂಡಿಯಿಂದ ಸಿಮೆಂಟ್ ತುಂಬಿದ್ದ ಲಾರಿ ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ನುಜ್ಜುಗುಜ್ಜಾದ ಕಾರಿನೊಳಗಿದ್ದ ಶವಗಳನ್ನು ಹೊರತೆಗೆಯಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನೆವಣೆ ಹಾಗೂ ಬಬಲೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.