<p><strong>ವಿಜಯಪುರ:</strong> ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ ₹1,433 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಲೋಕೋಪಯೋಗ ಇಲಾಖೆ ಅಡಿಯಲ್ಲಿ ಬರುವ ಜಿಲ್ಲೆಯ ಪ್ರಮುಖ ರಸ್ತೆಗಳ ಅಭಿವೃದ್ಧಿ, ಶಿಕ್ಷಣ, ಮೀನುಗಾರಿಕೆ, ಪಶುಸಂಗೋಪನೆ, ಆರೋಗ್ಯ, ಸಣ್ಣ ನೀರಾವರಿ, ಜೆಜೆಎಂ, ಶೀಥಲ ಘಟಕ ನಿರ್ಮಾಣಕ್ಕೆ ಈ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.</p>.<p>ಅರಕೇರಿಯಲ್ಲಿ 2 ಸಾವಿರ ಮೆಟ್ರಿಕ್ ಟನ್ ಸಾಮಾರ್ಥ್ಯದ ಶೀತಲ ಘಟಕ ನಿರ್ಮಾಣಕ್ಕೆ ₹10.11 ಕೋಟಿ ಅನುದಾನ ನೀಡಲಾಗಿದೆ ಎಂದರು.</p>.<p>900 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಜೆಜೆಎಂ ಯೋಜನೆಗೆ ಅನುದಾನ ಬಿಡುಗಡೆಯಾಗಿದೆ. ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಪ್ರಧಾನಿ ನರೇಂದ್ರ ಮೋದಿ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ ಎಂದರು.</p>.<h2>ತಾಂತ್ರಿಕ ಅಡಚಣೆ:</h2>.<p>ಸೋಲಾಪುರ– ಗದಗ ನಡುವಿನ ರೈಲ್ವೆ ಮಾರ್ಗದಲ್ಲಿ ತಾಂತ್ರಿಕ ಅಡಚಣೆ ಇರುವುದರಿಂದ ‘ವಂದೇ ಭಾರತ್’ ರೈಲು ಈ ಮಾರ್ಗದಲ್ಲಿ ಸದ್ಯ ಓಡಿಸಲು ಅನುಮತಿ ಸಿಕ್ಕಿಲ್ಲ. ಇದು ಸರಿಯಾದ ಬಳಿಕ ವಂದೇ ಭಾರತ್ ರೈಲು ಸಂಚರಿಸಲಿದೆ ಎಂದು ಹೇಳಿದರು.</p>.<h2>ನಿಷ್ಕಾಳಜಿ ಸಹಿಸಲ್ಲ:</h2>.<p>ಜಿಲ್ಲೆಯಲ್ಲಿ ಜೆಜೆಎಂ ಯೋಜನೆ ಅನುಷ್ಠಾನದಲ್ಲಿ ಆಗಿರುವ ಲೋಪ, ಭ್ರಷ್ಟಾಚಾರದ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತೇನೆ, ನಿಷ್ಕಾಳಜಿ ಸಹಿಸುವುದಿಲ್ಲ. ಈ ಬಗ್ಗೆ ಆಯಾ ಕ್ಷೇತ್ರದ ಶಾಸಕರು ಕೂಡ ಗಮನ ಹರಿಸಬೇಕು ಎಂದು ಆಗ್ರಹಿಸಿದರು.</p>.<p><strong>ಹಸಿರು ಪೀಠದಲ್ಲಿ ಪ್ರಕರಣ:</strong></p>.<p>ವಿಮಾನ ನಿಲ್ದಾಣ ಬಹುತೇಕ ಕಾರ್ಯ ಪೂರ್ಣವಾಗಿದೆ. ಅಗ್ನಿ ಶಾಮಕ ವ್ಯವಸ್ಥೆ ಟೆಂಡರ್ ಬಾಕಿ ಇದೆ. ಶೀಘ್ರ ಪೂರ್ಣವಾಗಲಿದೆ. ಸುಪ್ರೀಂ ಕೋರ್ಟ್ ಹಸಿರು ಪೀಠದಲ್ಲಿ ಪ್ರಕರಣ ಇದೆ. ಅದು ತೆರವಾದ ಬಳಿಕ ವಿಮಾನ ಸಂಚಾರ ಆರಂಭವಾಗಲಿದೆ ಎಂದರು.</p>.<h2>ನೋವಿದೆ:</h2>.<p>ಬಿಜೆಪಿ ಆಂತರಿಕ ಕಚ್ಚಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಆಂತರಿಕ ಕಚ್ಚಾಟದ ಬಗ್ಗೆ ಹೈಕಮಾಂಡ್ ಇದೆ. ಅವರು ಗಮನಿಸುತ್ತಾರೆ. ಆದರೆ, ಪಕ್ಷದ ಕಾರ್ಯಕರ್ತರಲ್ಲಿ ಈ ಬಗ್ಗೆ ತೀವ್ರ ನೋವಿದೆ ಎಂದು ಹೇಳಿದರು.</p>.<p>‘ಪಕ್ಷ ಸಂಘಟನೆಯಲ್ಲಿ ಎಂದೂ ನನ್ನ ಸಲಹೆ ಪಡೆದಿಲ್ಲ. ಅವರು ಕೇಳಿದರೆ ಸೂಕ್ತ ಸಲಹೆ ನೀಡುತ್ತೇನೆ. ಪಕ್ಷದಲ್ಲಿ ಅತ್ಯಂತ ಹಿರಿಯ ರಾಜಕಾರಣಿ. ಅನುಭವ ಇದೆ. ಆದರೆ, ನನ್ನನ್ನು ಉಪಯೋಗಕ್ಕೆ ತೆಗೆದುಕೊಳ್ಳುತ್ತಿಲ್ಲ. ಸಂಘ ಪರಿವಾರದಿಂದ ಬಂದಿಲ್ಲ ಎಂಬ ಕಾರಣ ಇರಬಹುದು’ ಎಂದರು.</p>.<p>‘ನಾನು ಎಂದೂ ಯಾವುದೇ ಅಧಿಕಾರಕ್ಕೆ ಆಸೆ ಪಟ್ಟವನಲ್ಲ. ಯಾರ ಚುಂಗು ಹಿಡಿದುಕೊಂಡು ಅಡ್ಡಾಡುವುದಿಲ್ಲ, ಅಧಿಕಾರಕ್ಕಾಗಿ ಯಾರ ಮನೆ ಬಾಗಿಲ ಕಾಯುವ ಮನುಷ್ಯ ನಾನಲ್ಲ. ಅವರು ಕೊಟ್ಟರೂ ಅಷ್ಟೇ, ಬಿಟ್ಟರೂ ಅಷ್ಟೆ’ ಎಂದು ಖಡಕ್ ಹೇಳಿಕೆ ನೀಡಿದರು.</p>.<p>ಬಿಜೆಪಿ ಮಾಧ್ಯಮ ವಕ್ತಾರ ವಿಜಯ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><blockquote>ಕೇಂದ್ರದಿಂದ ಜಿಲ್ಲೆಗೆ ಬರುವ ಅನುದಾನದಲ್ಲಿ ಯಾವುದೇ ಕೊರತೆಯಾಗಿಲ್ಲ. ಕೇಂದ್ರ ಸರ್ಕಾರ ಇಷ್ಟೊಂದು ದೊಡ್ಡ ಮೊತ್ತದ ಅನುದಾನ ನೀಡಿರುವುದು ಸಂತೋಷ ಸಂಗತಿ </blockquote><span class="attribution">ರಮೇಶ ಜಿಗಜಿಣಗಿ ಸಂಸದ ವಿಜಯಪುರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ ₹1,433 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದರು.</p>.<p>ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಲೋಕೋಪಯೋಗ ಇಲಾಖೆ ಅಡಿಯಲ್ಲಿ ಬರುವ ಜಿಲ್ಲೆಯ ಪ್ರಮುಖ ರಸ್ತೆಗಳ ಅಭಿವೃದ್ಧಿ, ಶಿಕ್ಷಣ, ಮೀನುಗಾರಿಕೆ, ಪಶುಸಂಗೋಪನೆ, ಆರೋಗ್ಯ, ಸಣ್ಣ ನೀರಾವರಿ, ಜೆಜೆಎಂ, ಶೀಥಲ ಘಟಕ ನಿರ್ಮಾಣಕ್ಕೆ ಈ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.</p>.<p>ಅರಕೇರಿಯಲ್ಲಿ 2 ಸಾವಿರ ಮೆಟ್ರಿಕ್ ಟನ್ ಸಾಮಾರ್ಥ್ಯದ ಶೀತಲ ಘಟಕ ನಿರ್ಮಾಣಕ್ಕೆ ₹10.11 ಕೋಟಿ ಅನುದಾನ ನೀಡಲಾಗಿದೆ ಎಂದರು.</p>.<p>900 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಜೆಜೆಎಂ ಯೋಜನೆಗೆ ಅನುದಾನ ಬಿಡುಗಡೆಯಾಗಿದೆ. ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಪ್ರಧಾನಿ ನರೇಂದ್ರ ಮೋದಿ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ ಎಂದರು.</p>.<h2>ತಾಂತ್ರಿಕ ಅಡಚಣೆ:</h2>.<p>ಸೋಲಾಪುರ– ಗದಗ ನಡುವಿನ ರೈಲ್ವೆ ಮಾರ್ಗದಲ್ಲಿ ತಾಂತ್ರಿಕ ಅಡಚಣೆ ಇರುವುದರಿಂದ ‘ವಂದೇ ಭಾರತ್’ ರೈಲು ಈ ಮಾರ್ಗದಲ್ಲಿ ಸದ್ಯ ಓಡಿಸಲು ಅನುಮತಿ ಸಿಕ್ಕಿಲ್ಲ. ಇದು ಸರಿಯಾದ ಬಳಿಕ ವಂದೇ ಭಾರತ್ ರೈಲು ಸಂಚರಿಸಲಿದೆ ಎಂದು ಹೇಳಿದರು.</p>.<h2>ನಿಷ್ಕಾಳಜಿ ಸಹಿಸಲ್ಲ:</h2>.<p>ಜಿಲ್ಲೆಯಲ್ಲಿ ಜೆಜೆಎಂ ಯೋಜನೆ ಅನುಷ್ಠಾನದಲ್ಲಿ ಆಗಿರುವ ಲೋಪ, ಭ್ರಷ್ಟಾಚಾರದ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತೇನೆ, ನಿಷ್ಕಾಳಜಿ ಸಹಿಸುವುದಿಲ್ಲ. ಈ ಬಗ್ಗೆ ಆಯಾ ಕ್ಷೇತ್ರದ ಶಾಸಕರು ಕೂಡ ಗಮನ ಹರಿಸಬೇಕು ಎಂದು ಆಗ್ರಹಿಸಿದರು.</p>.<p><strong>ಹಸಿರು ಪೀಠದಲ್ಲಿ ಪ್ರಕರಣ:</strong></p>.<p>ವಿಮಾನ ನಿಲ್ದಾಣ ಬಹುತೇಕ ಕಾರ್ಯ ಪೂರ್ಣವಾಗಿದೆ. ಅಗ್ನಿ ಶಾಮಕ ವ್ಯವಸ್ಥೆ ಟೆಂಡರ್ ಬಾಕಿ ಇದೆ. ಶೀಘ್ರ ಪೂರ್ಣವಾಗಲಿದೆ. ಸುಪ್ರೀಂ ಕೋರ್ಟ್ ಹಸಿರು ಪೀಠದಲ್ಲಿ ಪ್ರಕರಣ ಇದೆ. ಅದು ತೆರವಾದ ಬಳಿಕ ವಿಮಾನ ಸಂಚಾರ ಆರಂಭವಾಗಲಿದೆ ಎಂದರು.</p>.<h2>ನೋವಿದೆ:</h2>.<p>ಬಿಜೆಪಿ ಆಂತರಿಕ ಕಚ್ಚಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಆಂತರಿಕ ಕಚ್ಚಾಟದ ಬಗ್ಗೆ ಹೈಕಮಾಂಡ್ ಇದೆ. ಅವರು ಗಮನಿಸುತ್ತಾರೆ. ಆದರೆ, ಪಕ್ಷದ ಕಾರ್ಯಕರ್ತರಲ್ಲಿ ಈ ಬಗ್ಗೆ ತೀವ್ರ ನೋವಿದೆ ಎಂದು ಹೇಳಿದರು.</p>.<p>‘ಪಕ್ಷ ಸಂಘಟನೆಯಲ್ಲಿ ಎಂದೂ ನನ್ನ ಸಲಹೆ ಪಡೆದಿಲ್ಲ. ಅವರು ಕೇಳಿದರೆ ಸೂಕ್ತ ಸಲಹೆ ನೀಡುತ್ತೇನೆ. ಪಕ್ಷದಲ್ಲಿ ಅತ್ಯಂತ ಹಿರಿಯ ರಾಜಕಾರಣಿ. ಅನುಭವ ಇದೆ. ಆದರೆ, ನನ್ನನ್ನು ಉಪಯೋಗಕ್ಕೆ ತೆಗೆದುಕೊಳ್ಳುತ್ತಿಲ್ಲ. ಸಂಘ ಪರಿವಾರದಿಂದ ಬಂದಿಲ್ಲ ಎಂಬ ಕಾರಣ ಇರಬಹುದು’ ಎಂದರು.</p>.<p>‘ನಾನು ಎಂದೂ ಯಾವುದೇ ಅಧಿಕಾರಕ್ಕೆ ಆಸೆ ಪಟ್ಟವನಲ್ಲ. ಯಾರ ಚುಂಗು ಹಿಡಿದುಕೊಂಡು ಅಡ್ಡಾಡುವುದಿಲ್ಲ, ಅಧಿಕಾರಕ್ಕಾಗಿ ಯಾರ ಮನೆ ಬಾಗಿಲ ಕಾಯುವ ಮನುಷ್ಯ ನಾನಲ್ಲ. ಅವರು ಕೊಟ್ಟರೂ ಅಷ್ಟೇ, ಬಿಟ್ಟರೂ ಅಷ್ಟೆ’ ಎಂದು ಖಡಕ್ ಹೇಳಿಕೆ ನೀಡಿದರು.</p>.<p>ಬಿಜೆಪಿ ಮಾಧ್ಯಮ ವಕ್ತಾರ ವಿಜಯ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><blockquote>ಕೇಂದ್ರದಿಂದ ಜಿಲ್ಲೆಗೆ ಬರುವ ಅನುದಾನದಲ್ಲಿ ಯಾವುದೇ ಕೊರತೆಯಾಗಿಲ್ಲ. ಕೇಂದ್ರ ಸರ್ಕಾರ ಇಷ್ಟೊಂದು ದೊಡ್ಡ ಮೊತ್ತದ ಅನುದಾನ ನೀಡಿರುವುದು ಸಂತೋಷ ಸಂಗತಿ </blockquote><span class="attribution">ರಮೇಶ ಜಿಗಜಿಣಗಿ ಸಂಸದ ವಿಜಯಪುರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>