<p><strong>ವಿಜಯಪುರ:</strong> ನಗರದಲ್ಲಿ ಸೋಮವಾರ ಸಂಜೆ ಆಯೋಜಿಸಲಾಗಿದ್ದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲಿಗರು ಅಡ್ಡಿ ಪಡಿಸಿ, ಗದ್ದಲ ಎಬ್ಬಿಸಿದರು.</p><p>ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಬಿಜೆಪಿ ನಾಯಕರು ಕಾರ್ಯಕ್ರಮ ಉದ್ಘಾಟನೆಗೆ ಮುಂದಾದಾಗ ಯತ್ನಾಳ ವೇದಿಕೆಗೆ ಬರುವವರೆಗೂ ಕಾರ್ಯಕ್ರಮ ಉದ್ಘಾಟಿಸಬಾರದು ಎಂದು ಅಡ್ಡಿಪಡಿಸಿದರು.</p><p>ಬಿ ಆರ್ ಪಿ, ಬಿ ಆರ್ ಪಿ ಎಂದು ಘೋಷಣೆ ಕೂಗಿದರು. ಚುನಾವಣೆಯಲ್ಲಿ ಯತ್ನಾಳ ಅವರಿಗೆ ದ್ರೋಹ ಬಗೆದವರನ್ನು ಸಭೆಯಿಂದ ಹೊರಹಾಕಿ ಎಂದು ಒತ್ತಾಯಿಸಿದರು.</p><p>ವೇದಿಕ ಮೇಲೆ ಉಪಸ್ಥಿತರಿದ್ದ ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಮಾಜಿ ಸಚಿವ ಮುರುಗೇಶ ನಿರಾಣಿ ವಿರುದ್ದ ಧಿಕ್ಕಾರ ಹಾಕಿದರು.</p><p>ಗದ್ದಲದ ವಾತಾವರಣದಿಂದ ಬೇಸರಗೊಂಡ ಸಂಸದ ರಮೇಶ ಜಿಗಜಿಣಗಿ,ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಸಭೆಯಿಂದ ಹೊರನಡೆದರು. </p><p>ಯತ್ನಾಳ ಬೆಂಬಲಿಗರನ್ನು ತಡೆಯಲು ಪೊಲೀಸರು, ಬಿಜೆಪಿ ಮುಖಂಡರು ಹರಸಾಹಸ ಪಟ್ಟರು. </p><p>ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲವನ್ನೂ ಮೌನವಾಗಿ ನೋಡುತ್ತಾ ವೇದಿಕೆಯಲ್ಲಿ ಕುಳಿತಿದ್ದರು. ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಅಭಯ ಪಾಟೀಲ, ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ ಸಾಸನೂರ ವೇದಿಕೆಯಲ್ಲೇ ಇದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ನಗರದಲ್ಲಿ ಸೋಮವಾರ ಸಂಜೆ ಆಯೋಜಿಸಲಾಗಿದ್ದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲಿಗರು ಅಡ್ಡಿ ಪಡಿಸಿ, ಗದ್ದಲ ಎಬ್ಬಿಸಿದರು.</p><p>ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಬಿಜೆಪಿ ನಾಯಕರು ಕಾರ್ಯಕ್ರಮ ಉದ್ಘಾಟನೆಗೆ ಮುಂದಾದಾಗ ಯತ್ನಾಳ ವೇದಿಕೆಗೆ ಬರುವವರೆಗೂ ಕಾರ್ಯಕ್ರಮ ಉದ್ಘಾಟಿಸಬಾರದು ಎಂದು ಅಡ್ಡಿಪಡಿಸಿದರು.</p><p>ಬಿ ಆರ್ ಪಿ, ಬಿ ಆರ್ ಪಿ ಎಂದು ಘೋಷಣೆ ಕೂಗಿದರು. ಚುನಾವಣೆಯಲ್ಲಿ ಯತ್ನಾಳ ಅವರಿಗೆ ದ್ರೋಹ ಬಗೆದವರನ್ನು ಸಭೆಯಿಂದ ಹೊರಹಾಕಿ ಎಂದು ಒತ್ತಾಯಿಸಿದರು.</p><p>ವೇದಿಕ ಮೇಲೆ ಉಪಸ್ಥಿತರಿದ್ದ ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಮಾಜಿ ಸಚಿವ ಮುರುಗೇಶ ನಿರಾಣಿ ವಿರುದ್ದ ಧಿಕ್ಕಾರ ಹಾಕಿದರು.</p><p>ಗದ್ದಲದ ವಾತಾವರಣದಿಂದ ಬೇಸರಗೊಂಡ ಸಂಸದ ರಮೇಶ ಜಿಗಜಿಣಗಿ,ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಸಭೆಯಿಂದ ಹೊರನಡೆದರು. </p><p>ಯತ್ನಾಳ ಬೆಂಬಲಿಗರನ್ನು ತಡೆಯಲು ಪೊಲೀಸರು, ಬಿಜೆಪಿ ಮುಖಂಡರು ಹರಸಾಹಸ ಪಟ್ಟರು. </p><p>ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲವನ್ನೂ ಮೌನವಾಗಿ ನೋಡುತ್ತಾ ವೇದಿಕೆಯಲ್ಲಿ ಕುಳಿತಿದ್ದರು. ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಅಭಯ ಪಾಟೀಲ, ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ ಸಾಸನೂರ ವೇದಿಕೆಯಲ್ಲೇ ಇದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>