<p><strong>ಇಂಡಿ</strong>: ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿರುವ ಬಹಳಷ್ಟು ರಸ್ತೆಗಳು ಹಾಳಾಗಿದ್ದು, ವಾಹನ ಸವಾರರಿಗೆ ಅತೀವ ತೊಂದರೆಯಾಗುತ್ತಿದೆ. ರಸ್ತೆಯ ಬಗ್ಗೆ ಗ್ರಾಮೀಣ ಪ್ರದೇಶದ ಸಾರ್ವಜನಿಕರು ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.</p>.<p>ತಾಲ್ಲೂಕಿನ ಭತಗುಣಕಿ ಗ್ರಾಮದಿಂದ ಮೈಲಾರ ಗ್ರಾಮಕ್ಕೆ ಹೋಗುವ ರಸ್ತೆ, ತಡವಲಗಾ ಗ್ರಾಮದಿಂದ ನಿಂಬಾಳ-ಕ್ಯಾತನಕೇರಿ ಗ್ರಾಮಗಳಿಗೆ ಹೋಗುವ ರಸ್ತೆ, ಭುಯ್ಯಾರದಿಂದ ಖೇಡಗಿಗೆ ಹೋಗುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಸಂಚಾರಕ್ಕೆ ಅಡಚಣೆಯಾಗುತ್ತಿದೆ.</p>.<p>ರಸ್ತೆಯಲ್ಲಿ ತಗ್ಗು ಗುಂಡಿಗಳು ಬಿದ್ದಿದ್ದು, ಮಳೆಯಾದರೆ ಗುಂಡಿಗಳಲ್ಲಿ ನೀರು ಸಂಗ್ರಹವಾಗಿ ರಸ್ತೆಯಲ್ಲಿನ ಗುಂಡಿಗಳೇ ಕಾಣುವುದಿಲ್ಲ. ಹೀಗಾಗಿ ದ್ವಿಚಕ್ರ ವಾಹನಗಳು ಗುಂಡಿಯಲ್ಲಿ ಹಾದು ಜಾರಿ ಬೀಳುತ್ತಿರುವುದು ಸಾಮಾನ್ಯವಾಗಿದೆ. ವಾಹನ ಸವಾರರು ಬಿದ್ದು ಗಾಯ ಮಾಡಿಕೊಂಡು ಆಸ್ಪತ್ರೆಗೆ ಸೇರುತ್ತಿದ್ದಾರೆ.</p>.<p>ಈ ರಸ್ತೆಗಳು ಬಹಳ ವರ್ಷಗಳಿಂದ ಹದಗೆಟ್ಟಿದ್ದರೂ ಸಹಿತ ಯಾವೊಬ್ಬ ಅಧಿಕಾರಿಗಳು ಈ ರಸ್ತೆ ದುರಸ್ಥಿ ಕಾರ್ಯ ಮಾಡಲು ಮುಂದಾಗಿಲ್ಲ. ಇದರಿಂದ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಮೇಲಾದರೂ ಸಂಬಂಧಿಸಿದ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ರಸ್ತೆಗಳ ರಿಪೇರಿಗೆ ಮುಂದಾಗಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.</p>.<p><strong>ಮೈಲಾರದಿಂದ ಭತಗುಣಕಿಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಇದುವರೆಗೂ ಅದನ್ನು ದುರಸ್ತಿ ಮಾಡಲು ಅಥವಾ ಹೊಸ ರಸ್ತೆ ನಿರ್ಮಾಣ ಮಾಡಲು ತಾಲ್ಲೂಕು ಆಡಳಿತ ಮುಂದಾಗಿಲ್ಲ</strong></p><p><strong>- ಸಿದ್ದಾರಾಮ ಮಾಳಗೆ ಮೈಲಾರ ಗ್ರಾಮ</strong> </p>.<p><strong>ನಿಂಬಾಳ-ಕ್ಯಾತನಕೇರಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಅಧಿಕಾರಿಗಳು ಈ ರಸ್ತೆಯನ್ನು ದುರಸ್ತಿ ಸಹ ಮಾಡಿಸಿಲ್ಲ. 10 ನಿಮಿಷ ಸಾಗಬೇಕಾದ ರಸ್ತೆಯಲ್ಲಿ ಅರ್ಧ ಗಂಟೆ ಸಾಗಬೇಕಿದೆ. ಇದರಿಂದ ವಾಹನಗಳ ಸ್ಥಿತಿ ಹಾಳಾಗುತ್ತಿದೆ </strong></p><p><strong>-ಸುನೀಲ ರಾಠೋಡ ನಿಂಬಾಳ ಗ್ರಾಮ</strong> </p>.<p><strong>ಸರ್ಕಾರದಿಂದ ಇನ್ನು 15 ದಿನದಲ್ಲಿ ಅನುದಾನ ಬರುವ ನಿರೀಕ್ಷೆ ಇದೆ. ಅನುದಾನ ಬಂದ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಕೆಟ್ಟಿರುವ ರಸ್ತೆಗಳ ರಿಪೇರಿ ಹೊಸ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ </strong></p><p><strong>-ದಯಾನಂದ ಮಠ ಎಂಜಿನಿಯರ್ ಲೋಕೋಪಯೋಗಿ ಇಲಾಖೆ</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ</strong>: ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿರುವ ಬಹಳಷ್ಟು ರಸ್ತೆಗಳು ಹಾಳಾಗಿದ್ದು, ವಾಹನ ಸವಾರರಿಗೆ ಅತೀವ ತೊಂದರೆಯಾಗುತ್ತಿದೆ. ರಸ್ತೆಯ ಬಗ್ಗೆ ಗ್ರಾಮೀಣ ಪ್ರದೇಶದ ಸಾರ್ವಜನಿಕರು ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.</p>.<p>ತಾಲ್ಲೂಕಿನ ಭತಗುಣಕಿ ಗ್ರಾಮದಿಂದ ಮೈಲಾರ ಗ್ರಾಮಕ್ಕೆ ಹೋಗುವ ರಸ್ತೆ, ತಡವಲಗಾ ಗ್ರಾಮದಿಂದ ನಿಂಬಾಳ-ಕ್ಯಾತನಕೇರಿ ಗ್ರಾಮಗಳಿಗೆ ಹೋಗುವ ರಸ್ತೆ, ಭುಯ್ಯಾರದಿಂದ ಖೇಡಗಿಗೆ ಹೋಗುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಸಂಚಾರಕ್ಕೆ ಅಡಚಣೆಯಾಗುತ್ತಿದೆ.</p>.<p>ರಸ್ತೆಯಲ್ಲಿ ತಗ್ಗು ಗುಂಡಿಗಳು ಬಿದ್ದಿದ್ದು, ಮಳೆಯಾದರೆ ಗುಂಡಿಗಳಲ್ಲಿ ನೀರು ಸಂಗ್ರಹವಾಗಿ ರಸ್ತೆಯಲ್ಲಿನ ಗುಂಡಿಗಳೇ ಕಾಣುವುದಿಲ್ಲ. ಹೀಗಾಗಿ ದ್ವಿಚಕ್ರ ವಾಹನಗಳು ಗುಂಡಿಯಲ್ಲಿ ಹಾದು ಜಾರಿ ಬೀಳುತ್ತಿರುವುದು ಸಾಮಾನ್ಯವಾಗಿದೆ. ವಾಹನ ಸವಾರರು ಬಿದ್ದು ಗಾಯ ಮಾಡಿಕೊಂಡು ಆಸ್ಪತ್ರೆಗೆ ಸೇರುತ್ತಿದ್ದಾರೆ.</p>.<p>ಈ ರಸ್ತೆಗಳು ಬಹಳ ವರ್ಷಗಳಿಂದ ಹದಗೆಟ್ಟಿದ್ದರೂ ಸಹಿತ ಯಾವೊಬ್ಬ ಅಧಿಕಾರಿಗಳು ಈ ರಸ್ತೆ ದುರಸ್ಥಿ ಕಾರ್ಯ ಮಾಡಲು ಮುಂದಾಗಿಲ್ಲ. ಇದರಿಂದ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಮೇಲಾದರೂ ಸಂಬಂಧಿಸಿದ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ರಸ್ತೆಗಳ ರಿಪೇರಿಗೆ ಮುಂದಾಗಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.</p>.<p><strong>ಮೈಲಾರದಿಂದ ಭತಗುಣಕಿಗೆ ಹೋಗುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಇದುವರೆಗೂ ಅದನ್ನು ದುರಸ್ತಿ ಮಾಡಲು ಅಥವಾ ಹೊಸ ರಸ್ತೆ ನಿರ್ಮಾಣ ಮಾಡಲು ತಾಲ್ಲೂಕು ಆಡಳಿತ ಮುಂದಾಗಿಲ್ಲ</strong></p><p><strong>- ಸಿದ್ದಾರಾಮ ಮಾಳಗೆ ಮೈಲಾರ ಗ್ರಾಮ</strong> </p>.<p><strong>ನಿಂಬಾಳ-ಕ್ಯಾತನಕೇರಿ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಅಧಿಕಾರಿಗಳು ಈ ರಸ್ತೆಯನ್ನು ದುರಸ್ತಿ ಸಹ ಮಾಡಿಸಿಲ್ಲ. 10 ನಿಮಿಷ ಸಾಗಬೇಕಾದ ರಸ್ತೆಯಲ್ಲಿ ಅರ್ಧ ಗಂಟೆ ಸಾಗಬೇಕಿದೆ. ಇದರಿಂದ ವಾಹನಗಳ ಸ್ಥಿತಿ ಹಾಳಾಗುತ್ತಿದೆ </strong></p><p><strong>-ಸುನೀಲ ರಾಠೋಡ ನಿಂಬಾಳ ಗ್ರಾಮ</strong> </p>.<p><strong>ಸರ್ಕಾರದಿಂದ ಇನ್ನು 15 ದಿನದಲ್ಲಿ ಅನುದಾನ ಬರುವ ನಿರೀಕ್ಷೆ ಇದೆ. ಅನುದಾನ ಬಂದ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಕೆಟ್ಟಿರುವ ರಸ್ತೆಗಳ ರಿಪೇರಿ ಹೊಸ ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ </strong></p><p><strong>-ದಯಾನಂದ ಮಠ ಎಂಜಿನಿಯರ್ ಲೋಕೋಪಯೋಗಿ ಇಲಾಖೆ</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>