<p><strong>ವಿಜಯಪುರ</strong>: ನಗರದ ಸೈನಿಕ್ ಶಾಲೆಯ ಆವರಣದಲ್ಲಿ ಕಾರ್ಗಿಲ್ ವಿಜಯದ22ನೇ ವಾರ್ಷಿಕೋತ್ಸವವನ್ನು ಸೋಮವಾರ ಆಚರಿಸಲಾಯಿತು.</p>.<p>ಕಾರ್ಗಿಲ್ ಯುದ್ಧದ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದ ಕೆಚ್ಚೆದೆಯ ಸೈನಿಕರಿಗೆ ಗೌರವಾರ್ಥವಾಗಿ ಪ್ರಾಂಶುಪಾಲರಾದ ಕ್ಯಾಪ್ಟನ್ (ಐಎನ್) ವಿನಯ್ ತಿವಾರಿ, ಎನ್ಸಿಸಿ ಅಧಿಕಾರಿಎಸ್.ಎಸ್. ಕೊಯ್,ಉಪ ಪ್ರಾಂಶುಪಾಲ ಲೆಫ್ಟಿನೆಂಟ್ ಸಿಡಿಆರ್ ರವಿಕಾಂತ್ ಶುಕ್ಲಾ ಅವರು ಮಾಲಾರ್ಪಣೆ ಮಾಡಿ, ಹುತಾತ್ಮರಿಗೆ ಗೌರವ ಸಲ್ಲಿಸಿದರು.</p>.<p>ಕಾರ್ಗಿಲ್ ವಿಜಯ್ ದಿವಸ್ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಪಾಕಿಸ್ತಾನದ ವಿರುದ್ಧದ ಅದ್ಭುತ ವಿಜಯ ಸ್ಮರಣೀಯ. 1999 ರ ಈ ದಿನದಂದು, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಪ್ರದೇಶದಲ್ಲಿ ಸುಮಾರು ಮೂರು ತಿಂಗಳ ಕಾಲ ಹೋರಾಡಿದ ನಂತರ ಭಾರತವು ಕಾರ್ಗಿಲ್ ಮೇಲೆ ಯಶಸ್ವಿಯಾಗಿ ನಿಯಂತ್ರಣ ಪಡೆದುಕೊಂಡಿತು ಎಂದುಪ್ರಾಂಶುಪಾಲರಾದ ಕ್ಯಾಪ್ಟನ್ (ಐಎನ್) ವಿನಯ್ ತಿವಾರಿ ಹೇಳಿದರು.</p>.<p>ಆಚರಣೆಯ ಅಂಗವಾಗಿ ‘ಕಾರ್ಗಿಲ್ ವಿಜಯ್ 1999 ಯುದ್ಧ’ ಎಂಬ ವಿಷಯದ ಕುರಿತು ಪೋಸ್ಟರ್ ತಯಾರಿಸುವ ಸ್ಪರ್ಧೆಯನ್ನು ನಡೆಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸ್ಪರ್ಧೆಗೆ ಕೆಡೆಟ್ಗಳಿಂದ ಉತ್ಸಾಹಭರಿತ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಹುತಾತ್ಮರ ಗೌರವಾರ್ಥ ಸಂಕೇತವಾಗಿ ಎರಡು ನಿಮಿಷಗಳ ಮೌನ ಆಚರಿಸಲಾಯಿತು.ಜಿಲ್ಲೆಯ ಮಾಜಿ ಸೈನಿಕರು, ಸೈನಿಕ್ ಶಾಲೆಯ ಎನ್ಸಿಸಿಯ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ನಗರದ ಸೈನಿಕ್ ಶಾಲೆಯ ಆವರಣದಲ್ಲಿ ಕಾರ್ಗಿಲ್ ವಿಜಯದ22ನೇ ವಾರ್ಷಿಕೋತ್ಸವವನ್ನು ಸೋಮವಾರ ಆಚರಿಸಲಾಯಿತು.</p>.<p>ಕಾರ್ಗಿಲ್ ಯುದ್ಧದ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದ ಕೆಚ್ಚೆದೆಯ ಸೈನಿಕರಿಗೆ ಗೌರವಾರ್ಥವಾಗಿ ಪ್ರಾಂಶುಪಾಲರಾದ ಕ್ಯಾಪ್ಟನ್ (ಐಎನ್) ವಿನಯ್ ತಿವಾರಿ, ಎನ್ಸಿಸಿ ಅಧಿಕಾರಿಎಸ್.ಎಸ್. ಕೊಯ್,ಉಪ ಪ್ರಾಂಶುಪಾಲ ಲೆಫ್ಟಿನೆಂಟ್ ಸಿಡಿಆರ್ ರವಿಕಾಂತ್ ಶುಕ್ಲಾ ಅವರು ಮಾಲಾರ್ಪಣೆ ಮಾಡಿ, ಹುತಾತ್ಮರಿಗೆ ಗೌರವ ಸಲ್ಲಿಸಿದರು.</p>.<p>ಕಾರ್ಗಿಲ್ ವಿಜಯ್ ದಿವಸ್ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಪಾಕಿಸ್ತಾನದ ವಿರುದ್ಧದ ಅದ್ಭುತ ವಿಜಯ ಸ್ಮರಣೀಯ. 1999 ರ ಈ ದಿನದಂದು, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಪ್ರದೇಶದಲ್ಲಿ ಸುಮಾರು ಮೂರು ತಿಂಗಳ ಕಾಲ ಹೋರಾಡಿದ ನಂತರ ಭಾರತವು ಕಾರ್ಗಿಲ್ ಮೇಲೆ ಯಶಸ್ವಿಯಾಗಿ ನಿಯಂತ್ರಣ ಪಡೆದುಕೊಂಡಿತು ಎಂದುಪ್ರಾಂಶುಪಾಲರಾದ ಕ್ಯಾಪ್ಟನ್ (ಐಎನ್) ವಿನಯ್ ತಿವಾರಿ ಹೇಳಿದರು.</p>.<p>ಆಚರಣೆಯ ಅಂಗವಾಗಿ ‘ಕಾರ್ಗಿಲ್ ವಿಜಯ್ 1999 ಯುದ್ಧ’ ಎಂಬ ವಿಷಯದ ಕುರಿತು ಪೋಸ್ಟರ್ ತಯಾರಿಸುವ ಸ್ಪರ್ಧೆಯನ್ನು ನಡೆಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಈ ಸ್ಪರ್ಧೆಗೆ ಕೆಡೆಟ್ಗಳಿಂದ ಉತ್ಸಾಹಭರಿತ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಹುತಾತ್ಮರ ಗೌರವಾರ್ಥ ಸಂಕೇತವಾಗಿ ಎರಡು ನಿಮಿಷಗಳ ಮೌನ ಆಚರಿಸಲಾಯಿತು.ಜಿಲ್ಲೆಯ ಮಾಜಿ ಸೈನಿಕರು, ಸೈನಿಕ್ ಶಾಲೆಯ ಎನ್ಸಿಸಿಯ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>