ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಅಕ್ರಮ ಮರಳು ಸಾಗಣೆ ಲಾರಿಯನ್ನು ಪೊಲೀಸರಿಗೆ ಒಪ್ಪಿಸಿದ ಶಾಸಕ

Last Updated 2 ಜುಲೈ 2020, 10:36 IST
ಅಕ್ಷರ ಗಾತ್ರ

ವಿಜಯಪುರ:ನಾಗಠಾಣ ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚೌವ್ಹಾಣ್ ಗುರುವಾಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ತಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ವಿಜಯಪುರ ನಗರದ ಹೊರ ಭಾಗದಲ್ಲಿ ಸೊಲ್ಲಾಪುರದತ್ತ ಹೊರಟಿದ್ದ ಮರಳು ತುಂಬಿದ್ದ ಲಾರಿಯನ್ನು ಶಾಸಕರು ತಡೆದು ಪರಿಶೀಲಿಸಿದಾಗ ಮರಳು ಸಾಗಾಟ ಮಾಡುವ ಹಳೆಯ ಪಾಸ್ ಹೊಂದಿರುವುದು ಬೆಳಕಿಗೆ ನಂದಿದೆ.

ಕಳೆದ ಜೂನ್ 24ರ ಪಾಸ್ ಹೊಂದಿದ್ದ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅಕ್ರಮ ಮರಳು ಸಾಗಾಟ ಮಾಡುವ ಲಾರಿಯನ್ನು ಆದರ್ಶ ನಗರ ಪೊಲೀಸರ ಸುಪರ್ದಿಗೆ ಶಾಸಕರು ನೀಡಿದರು.

ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ವ್ಯಾಪಕವಾಗಿ ನಡೆದಿದೆ ಕೂಡಲೇ ಸರ್ಕಾರ ವಿಜಯಪುರ ಜಿಲ್ಲೆಯಲ್ಲಿನ ಅಕ್ರಮ ಮರಳುಗಾರಿಕೆ ತಡೆಯಬೇಕೆಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT