ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ಅಕ್ರಮ ಸಾಗಾಟ; ಟಿಪ್ಪರ್ ವಶ

Last Updated 15 ಜನವರಿ 2022, 12:41 IST
ಅಕ್ಷರ ಗಾತ್ರ

ವಿಜಯಪುರ: ತಾಳಿಕೋಟೆ ತಾಲ್ಲೂಕಿನ ಕಾವೇರಿ ಡಾಬಾ ಬಳಿ ಶುಕ್ರವಾರ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟಿಪ್ಪರನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಸುಮಾರು 7 ಬ್ರಾಸ್‍ನಷ್ಟು ಮರಳು ತುಂಬಿದ್ದ ಅಂದಾಜು ₹ 25 ಸಾವಿರ ಮೌಲ್ಯದ ಮರಳನ್ನು ಹಾಗೂ ಟಿಪ್ಪರ್‌ ಅನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.

ಇವಣಗಿ ತೋಟದ ಮನೆ ನಿವಾಸಿ ಟಿಪ್ಪರ್ ಚಾಲಕ ಸೋಮು ಕಲಬುರ್ಗಿ (23) ಟಿಪ್ಪರಿನಲ್ಲಿ ಮರಳನ್ನು ಕಳ್ಳತನದಿಂದ ಲೋಡ್ ಮಾಡಿಕೊಂಡು ಮಾರಾಟ ಮಾಡುವ ಉದ್ದೇಶದಿಂದ ತೆಗೆದುಕೊಂಡು ಹೊರಟಿದ್ದಾಗಿ ಒಪ್ಪಿಕೊಂಡಿದ್ದಾನೆ.

ಖಚಿತ ಮಾಹಿತಿಯನ್ನಾಧರಿಸಿ ತಾಳಿಕೋಟಿ ಕಂದಾಯ ನಿರೀಕ್ಷಕ, ತಾಳಿಕೋಟಿ ತಹಶೀಲ್ದಾರ್‌ ಹಾಗೂ ವಿಜಯಪುರ ಉಪವಿಭಾಗಾಧಿಕಾರಿ ಅವರನ್ನು ಒಳಗೊಂಡ ತಂಡವು ದಾಳಿ ನಡೆಸಿತ್ತು.ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT