ಸಿಂದಗಿ: ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಸಂತೋಷ ಹರನಾಳ ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು, ಸಂತೋಷ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಸಿಂದಗಿ ಮಾಜಿ ಶಾಸಕ ರಮೇಶ ಭೂಸನೂರ, ಬಿಜೆಪಿ ಮುಖಂಡರಾದ ಸಂತೋಷ ಪಾಟೀಲ ಡಂಬಳ, ಮಲ್ಲೂ ಸಾವಳಸಂಗ, ಗುರು ತಳವಾರ, ಮಡಿವಾಳಪ್ಪಗೌಡ ಬಿರಾದಾರ ಉಪಸ್ಥಿತರಿದ್ದರು.
ಸಂತೋಷ ಹರನಾಳ ಮಾತನಾಡಿ, ‘ಸಿಂದಗಿ ತಾಲ್ಲೂಕಿನಲ್ಲಿ ಜೆಡಿಎಸ್ಗೆ ಅಸ್ತಿತ್ವವೇ ಇಲ್ಲವಾಗಿದೆ. ಪಕ್ಷ ತ್ಯಜಿಸುವುದು ಅನಿವಾರ್ಯವಾಯಿತು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ನಾಯಕತ್ವ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿರುವೆ. ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಇನ್ನಷ್ಟು ಬಲಗೊಳ್ಳಲಿದೆ. ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗುವುದು ನಿಶ್ಚಿತ’ ಎಂದರು.