ಮುದ್ದೇಬಿಹಾಳದ ಮೂರನೇ ತಾಲ್ಲೂಕು ಶರಣ ಸಾಹಿತ್ಯಸಮ್ಮೇಳನದಲ್ಲಿ ಭಾಗಿಯಾಗಿದ್ದ ಜನಸ್ತೋಮ.
ಮುದ್ದೇಬಿಹಾಳದಲ್ಲಿ ಹಮ್ಮಿಕೊಂಡಿದ್ದ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಇಟಗಿ ಅವರನ್ನು ಸನ್ಮಾನಿಸಲಾಯಿತು
ಕೂಡಲಸಂಗಮದಲ್ಲಿ ವಚನ ವಿವಿ ಸ್ಥಾಪಿಸಿ
ಭಾರತ ಬಸವ ಭಾರತವಾಗಲೆಂದು ಆಶಿಸಿದ ಸಂಗೀತ ನಿರ್ದೇಶಕ ಹಂಸಲೇಖ ಅವರ ನುಡಿಯನ್ನು ಬೆಂಬಲಿಸಬೇಕು. ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಕರ್ನಾಟಕ ಸರ್ಕಾರಕ್ಕೆ ಅಭಿನಂದಿಸುವೆ. ಹಂಪಿಯಲ್ಲಿ ಕನ್ನಡ ವಿಶ್ವವಿದ್ಯಾಲಯ ಸ್ಥಾಪಿಸಿದಂತೆ ಕೂಡಲಸಂಗಮದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಬೇಕು ಎಂದು ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಚಂದ್ರಶೇಖರ ಇಟಗಿ ಆಗ್ರಹಿಸಿದರು.