ಕೋವಿಡ್ ರೋಗ ಉಲ್ಬಣಿಸುತ್ತಿದ್ದಂತೆ ಮೊದಲಿಗಿಂತಲೂ ಕೆಲಸದ ಒತ್ತಡ ಹೆಚ್ಚಾಗಿದ್ದರೂ ರೋಗಿಗಳ ಸೇವೆ ಮಾಡುತ್ತಿರುವ ಸಂತೃಪ್ತಿ ಇದೆ. ನಾವು ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವ ಕಾರ್ಯದಲ್ಲಿ ತೊಡಗಿಕೊಂಡಿರುವುದರಿಂದ ಮನೆಗೆ ತೆರಳಿದರೂ ಕುಟುಂಬ ಸದಸ್ಯರಿಂದ ಅಂತರ ಕಾಯ್ದುಕೊಂಡು ನನ್ನ ಕೆಲಸಗಳನ್ನು ನಾನೇಮಾಡಿಕೊಂಡು ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ ಎನ್ನುತ್ತಾರೆ ವಿಜಯಕುಮಾರ.