<p><strong>ವಿಜಯಪುರ:</strong> ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಕುರಿತಾಗಿ ದತ್ತಾಂಶ ಸಂಗ್ರಹಣಾ ಸಮೀಕ್ಷೆ ಕಾರ್ಯ ಪಾರದರ್ಶಕವಾಗಿ, ನಿಖರವಾಗಿ ಮಾಹಿತಿ ಸಂಗ್ರಹಿಸಬೇಕು. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಎಚ್ಚರಿಕೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿಗಳ ದತ್ತಾಂಶ ಶೇಖರಣಾ ಸಮಿಕ್ಷೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಸೋಮವಾರದಿಂದ ಆರಂಭವಾಗಿರುವ ಸಮೀಕ್ಷಾ ಕಾರ್ಯ ಮೇ 17ರವರೆಗೆ ಜಿಲ್ಲೆಯ ಪರಿಶಿಷ್ಟ ಜಾತಿಗಳ ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ಪಾರದರ್ಶಕವಾಗಿ ನಿಯಮಗಳನ್ವಯ ಯಾವುದೇ ಗೊಂದಲ ಮಾಡಿಕೊಳ್ಳದೆ ಯಶಸ್ವಿಯಾಗಿ ಕೈಗೊಳ್ಳುವಂತೆ ಹೇಳಿದರು.</p>.<p>ಮೂರು ಹಂತಗಳಲ್ಲಿ ಸಮೀಕ್ಷೆ ಕಾರ್ಯ ನಡೆಯಲಿದೆ. ಮೇ 5 ರಿಂದ 17 ರವರೆಗೆ ಪರಿಶಿಷ್ಟ ಜಾತಿಯ ಮನೆ-ಮನೆಗೆ ಭೇಟಿ ನೀಡುವ ಮೂಲಕ, ಮೇ 19 ರಿಂದ 21 ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳ ಮೂಲಕ ಸಮೀಕ್ಷೆ ನಡೆಸಲಾಗುವುದು. ಮೇ 19 ರಿಂದ 23ರ ವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.</p>.<p>ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಸಹಾಯವಾಣಿ ಸಂಖ್ಯೆ 08352-255244 ಸಂಪರ್ಕಿಸಬಹುದಾಗಿದೆ ಎಂದರು.</p>.<p>ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾಸ್ಟರ್ ಟ್ರೇನರಗಳ ಮೂಲಕ ಸಮರ್ಪಕವಾಗಿ ತರಬೇತಿ ನೀಡಲಾಗಿದೆ. ಗಣತಿದಾರರು ಪ್ರತಿ ಮನೆ-ಮನೆಗೆ ಭೇಟಿ ನೀಡಿ ನಿಖರ ಮಾಹಿತಿ ಸಂಗ್ರಹಿಸಬೇಕು, ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಕುರಿತಂತೆ ಗ್ರಾಮ ಮಟ್ಟದಲ್ಲಿ ಡಂಗೂರ ಸಾರುವ ಮೂಲಕ ಜಿಲ್ಲೆಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದರು.</p>.<p>ಬಿಲ್ಕಲೆಕ್ಟರ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಮೀಕ್ಷೆದಾರರರೊಂದಿಗೆ ಹಾಜರಿದ್ದು ಸಮೀಕ್ಷಾ ಕಾರ್ಯಕ್ಕೆ ಸಹಕಾರ ನೀಡುವಂತೆಯೂ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಾಹನಗಳ ಮೂಲಕ ಪ್ರಚಾರ ಕೈಗೊಳ್ಳಬೇಕು. ಮಹಾನಗರ ಪಾಲಿಕೆ ಆಯುಕ್ತರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.</p>.<p>ಈ ಸಮೀಕ್ಷೆ ಕಾರ್ಯಗಳಿಗೆ ಈಗಾಗಲೇ ನೇಮಕ ಮಾಡಲಾದ ನೋಡಲ್ ಅಧಿಕಾರಿಗಳು ಆಯಾ ತಾಲ್ಲೂಕು ಮಟ್ವದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವ ಮೂಲಕ ನಿಗದಿತ ಅವಧಿಯಲ್ಲಿ ಸಮೀಕ್ಷೆ ಕಾರ್ಯ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.</p>.<p>ಯಾವುದೇ ಕುಟುಂಬ ಸಮೀಕ್ಷೆಯಿಂದ ಕೈ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು. ಈ ಕಾರ್ಯಕ್ಕೆ ಬೇಕಾದ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸಮೀಕ್ಷೆ ಕಾರ್ಯಕ್ಕಾಗಿ ನಿಯೋಜಿತರು ಪರಸ್ಪರ ಸಮನ್ವಯತೆ ಹಾಗೂ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಕುರಿತಾಗಿ ದತ್ತಾಂಶ ಸಂಗ್ರಹಣಾ ಸಮೀಕ್ಷೆ ಕಾರ್ಯ ಪಾರದರ್ಶಕವಾಗಿ, ನಿಖರವಾಗಿ ಮಾಹಿತಿ ಸಂಗ್ರಹಿಸಬೇಕು. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಎಚ್ಚರಿಕೆ ನೀಡಿದರು.</p>.<p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿಗಳ ದತ್ತಾಂಶ ಶೇಖರಣಾ ಸಮಿಕ್ಷೆ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಸೋಮವಾರದಿಂದ ಆರಂಭವಾಗಿರುವ ಸಮೀಕ್ಷಾ ಕಾರ್ಯ ಮೇ 17ರವರೆಗೆ ಜಿಲ್ಲೆಯ ಪರಿಶಿಷ್ಟ ಜಾತಿಗಳ ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ಪಾರದರ್ಶಕವಾಗಿ ನಿಯಮಗಳನ್ವಯ ಯಾವುದೇ ಗೊಂದಲ ಮಾಡಿಕೊಳ್ಳದೆ ಯಶಸ್ವಿಯಾಗಿ ಕೈಗೊಳ್ಳುವಂತೆ ಹೇಳಿದರು.</p>.<p>ಮೂರು ಹಂತಗಳಲ್ಲಿ ಸಮೀಕ್ಷೆ ಕಾರ್ಯ ನಡೆಯಲಿದೆ. ಮೇ 5 ರಿಂದ 17 ರವರೆಗೆ ಪರಿಶಿಷ್ಟ ಜಾತಿಯ ಮನೆ-ಮನೆಗೆ ಭೇಟಿ ನೀಡುವ ಮೂಲಕ, ಮೇ 19 ರಿಂದ 21 ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳ ಮೂಲಕ ಸಮೀಕ್ಷೆ ನಡೆಸಲಾಗುವುದು. ಮೇ 19 ರಿಂದ 23ರ ವರೆಗೆ ಆನ್ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.</p>.<p>ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಸಹಾಯವಾಣಿ ಸಂಖ್ಯೆ 08352-255244 ಸಂಪರ್ಕಿಸಬಹುದಾಗಿದೆ ಎಂದರು.</p>.<p>ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ್ ಏಕ ಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾಸ್ಟರ್ ಟ್ರೇನರಗಳ ಮೂಲಕ ಸಮರ್ಪಕವಾಗಿ ತರಬೇತಿ ನೀಡಲಾಗಿದೆ. ಗಣತಿದಾರರು ಪ್ರತಿ ಮನೆ-ಮನೆಗೆ ಭೇಟಿ ನೀಡಿ ನಿಖರ ಮಾಹಿತಿ ಸಂಗ್ರಹಿಸಬೇಕು, ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಕುರಿತಂತೆ ಗ್ರಾಮ ಮಟ್ಟದಲ್ಲಿ ಡಂಗೂರ ಸಾರುವ ಮೂಲಕ ಜಿಲ್ಲೆಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದರು.</p>.<p>ಬಿಲ್ಕಲೆಕ್ಟರ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಮೀಕ್ಷೆದಾರರರೊಂದಿಗೆ ಹಾಜರಿದ್ದು ಸಮೀಕ್ಷಾ ಕಾರ್ಯಕ್ಕೆ ಸಹಕಾರ ನೀಡುವಂತೆಯೂ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಾಹನಗಳ ಮೂಲಕ ಪ್ರಚಾರ ಕೈಗೊಳ್ಳಬೇಕು. ಮಹಾನಗರ ಪಾಲಿಕೆ ಆಯುಕ್ತರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.</p>.<p>ಈ ಸಮೀಕ್ಷೆ ಕಾರ್ಯಗಳಿಗೆ ಈಗಾಗಲೇ ನೇಮಕ ಮಾಡಲಾದ ನೋಡಲ್ ಅಧಿಕಾರಿಗಳು ಆಯಾ ತಾಲ್ಲೂಕು ಮಟ್ವದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವ ಮೂಲಕ ನಿಗದಿತ ಅವಧಿಯಲ್ಲಿ ಸಮೀಕ್ಷೆ ಕಾರ್ಯ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.</p>.<p>ಯಾವುದೇ ಕುಟುಂಬ ಸಮೀಕ್ಷೆಯಿಂದ ಕೈ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು. ಈ ಕಾರ್ಯಕ್ಕೆ ಬೇಕಾದ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸಮೀಕ್ಷೆ ಕಾರ್ಯಕ್ಕಾಗಿ ನಿಯೋಜಿತರು ಪರಸ್ಪರ ಸಮನ್ವಯತೆ ಹಾಗೂ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಅವರು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>