<p><strong>ವಿಜಯಪುರ:</strong>ಕೋವಿಡ್ ಭಯ, ಅಂಜಿಕೆಯಿಂದ2020–21ನೇ ಶೈಕ್ಷಣಿಕ ಸಾಲಿನಲ್ಲಿ ಆರಂಭವೇ ಆಗಿರದ ಶಾಲೆ, ಕಾಲೇಜುಗಳು ಜಿಲ್ಲೆಯಾದ್ಯಂತ ಶುಕ್ರವಾರದಿಂದ ಬಾಗಿಲು ತೆರೆದಿದ್ದು, ತರಗತಿಗಳು ಶುಭಾರಂಭವಾಗಿವೆ.</p>.<p>ಪ್ರಥಮ ದಿನವಾದ ಕಾರಣ ಹಾಜರಾತಿ ಕಡಿಮೆ ಇತ್ತು. ಶೇ 30ರಿಂದ 35ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು.</p>.<p>10 ತಿಂಗಳಿಂದ ಪರಸ್ಪರ ಮುಖವನ್ನೇ ನೋಡದ ಗೆಳೆಯ, ಗೆಳತಿಯರು ದೀರ್ಘ ಸಮಯದ ಬಳಿಕ ಶಾಲಾ, ಕಾಲೇಜು ಆವರಣದಲ್ಲಿ ಮುಖಾಮುಖಿಯಾಗುವ ಮೂಲಕ ಖುಷಿಯಾದರು.</p>.<p>ಮಕ್ಕಳನ್ನು ಸ್ವಾಗತಿಸಲು ಬಹುತೇಕ ಶಾಲೆ, ಕಾಲೇಜುಗಳು ಸಿಂಗಾರಗೊಂಡಿದ್ದವು. ಅಲ್ಲದೇ, ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ, ಕಾಲೇಜುಗಳ ಕೊಠಡಿಗಳನ್ನು ಹಿಂದಿನ ದಿನವೇ ಸ್ಯಾನಿಟೈಜ್ ಮಾಡಿಸಲಾಗಿತ್ತು. ಶಾಲಾವರಣದಲ್ಲಿ ರಂಗೋಲಿ ಹಾಕಿ, ತೆಂಗಿನ ಗರಿಗಳಿಂದ ಶೃಂಗರಿಸಲಾಗಿತ್ತು. ಶಾಲಾ, ಕಾಲೇಜುಗಳ ಶಿಕ್ಷಕರು ವಿದ್ಯಾರ್ಥಿಗಳನ್ನು ಚಪ್ಪಾಳೆ ತಟ್ಟಿ ಸ್ವಾಗತಿಸಿದರು.</p>.<p>ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಸಬೇಕು, ಅಂತರ ಕಾಯ್ದುಕೊಳ್ಳಬೇಕು. ಪರಸ್ಪರ ಮಾಸ್ಕ್ ಬದಲಾಯಿಸುವುದಾಗಲಿ, ಪರಸ್ಪರ ಕೈ ಕುಲುಕುವುದಾಗಲಿ ಮಾಡಬಾರದು ಎಂದು ಮುಖ್ಯ ಶಿಕ್ಷಕರು ತಿಳಿ ಹೇಳಿದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ವಿ.ಹೊಸೂರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ ದಡ್ಡಿ ಅವರು ನಗರ ಸೇರಿದಂತೆ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳಿಗೆ ಭೇಟಿ ನೀಡಿ, ಮಕ್ಕಳು, ಶಿಕ್ಷಕರು ಮತ್ತು ಉಪನ್ಯಾಸಕರೊಂದಿಗೆ ಸಂವಾದ ನಡೆಸಿದರು.</p>.<p class="Subhead"><strong>ಶೇ 35ರಷ್ಟು ಹಾಜರಾತಿ:</strong></p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ ದಡ್ಡಿ, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ 220 ಪದವಿ ಪೂರ್ವ ಕಾಲೇಜುಗಳಲ್ಲಿ 22,500 ವಿದ್ಯಾರ್ಥಿಗಳು ಇದ್ದು, ಪ್ರಥಮ ದಿನದಂದು 5958 (ಶೇ35) ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದರು ಎಂದು ತಿಳಿಸಿದರು.</p>.<p>ಸೋಮವಾರದಿಂದ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ತರಗತಿಗಳಿಗೆಹಾಜರಾಗುವ ಸಾಧ್ಯತೆ ಇದೆ. ಶೇ 30ರಷ್ಟು ಪಠ್ಯಕ್ರಮವನ್ನು ಕಡಿತ ಮಾಡಲಾಗಿದೆ.ಆನ್ಲೈನ್ ತರಗತಿಗಳಿಗೆ ಕೆಲವು ವಿದ್ಯಾರ್ಥಿಗಳು ಹಾಜರಾಗಿಲ್ಲ. ಮತ್ತೆ ಕೆಲವರಿಗೆ ಪಾಠ ಸರಿಯಾಗಿ ಗ್ರಹಿಕೆಯಾಗಿಲ್ಲ.ಎಲ್ಲ ಪಠ್ಯವನ್ನು ಹೊಸದಾಗಿ ಬೋಧಿಸಲಾಗುವುದು ಎಂದರು.</p>.<p class="Subhead"><strong>ಶಾಲೆಗಳಿಗೆ ಭೇಟಿ:</strong></p>.<p>ಐದಾರು ಪ್ರೌಢಶಾಲೆಗಳಿಗೆ ಭೇಟಿ ನೀಡಿದೆ. ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಶಾಲೆಗಳಿಗೆ ಹಾಜರಾಗಿದ್ದರು. ವಿದ್ಯಾರ್ಥಿಗಳಿಂದಲೇ ತರಗತಿ ಆರಂಭ ಕಾರ್ಯಕ್ರಮ ಉದ್ಘಾಟಿಸಿ, ವಿಶ್ವಾಸ ತುಂಬಲಾಯಿತು. ಸಾಂಕೇತಿಕವಾಗಿ ಕೆಲವು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ವಿ.ಹೊಸೂರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಜಿಲ್ಲೆಯ ವಿವಿಧ ಪ್ರೌಢಶಾಲೆಗಳ ಒಟ್ಟು 2,33,764 ವಿದ್ಯಾರ್ಥಿಗಳ ಪೈಕಿ 83,991 ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದರು ಎಂದು ತಿಳಿಸಿದರು.</p>.<p>39,824ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪೈಕಿ 14,795 ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಿಗೆ 3433 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong>ಕೋವಿಡ್ ಭಯ, ಅಂಜಿಕೆಯಿಂದ2020–21ನೇ ಶೈಕ್ಷಣಿಕ ಸಾಲಿನಲ್ಲಿ ಆರಂಭವೇ ಆಗಿರದ ಶಾಲೆ, ಕಾಲೇಜುಗಳು ಜಿಲ್ಲೆಯಾದ್ಯಂತ ಶುಕ್ರವಾರದಿಂದ ಬಾಗಿಲು ತೆರೆದಿದ್ದು, ತರಗತಿಗಳು ಶುಭಾರಂಭವಾಗಿವೆ.</p>.<p>ಪ್ರಥಮ ದಿನವಾದ ಕಾರಣ ಹಾಜರಾತಿ ಕಡಿಮೆ ಇತ್ತು. ಶೇ 30ರಿಂದ 35ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು.</p>.<p>10 ತಿಂಗಳಿಂದ ಪರಸ್ಪರ ಮುಖವನ್ನೇ ನೋಡದ ಗೆಳೆಯ, ಗೆಳತಿಯರು ದೀರ್ಘ ಸಮಯದ ಬಳಿಕ ಶಾಲಾ, ಕಾಲೇಜು ಆವರಣದಲ್ಲಿ ಮುಖಾಮುಖಿಯಾಗುವ ಮೂಲಕ ಖುಷಿಯಾದರು.</p>.<p>ಮಕ್ಕಳನ್ನು ಸ್ವಾಗತಿಸಲು ಬಹುತೇಕ ಶಾಲೆ, ಕಾಲೇಜುಗಳು ಸಿಂಗಾರಗೊಂಡಿದ್ದವು. ಅಲ್ಲದೇ, ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ, ಕಾಲೇಜುಗಳ ಕೊಠಡಿಗಳನ್ನು ಹಿಂದಿನ ದಿನವೇ ಸ್ಯಾನಿಟೈಜ್ ಮಾಡಿಸಲಾಗಿತ್ತು. ಶಾಲಾವರಣದಲ್ಲಿ ರಂಗೋಲಿ ಹಾಕಿ, ತೆಂಗಿನ ಗರಿಗಳಿಂದ ಶೃಂಗರಿಸಲಾಗಿತ್ತು. ಶಾಲಾ, ಕಾಲೇಜುಗಳ ಶಿಕ್ಷಕರು ವಿದ್ಯಾರ್ಥಿಗಳನ್ನು ಚಪ್ಪಾಳೆ ತಟ್ಟಿ ಸ್ವಾಗತಿಸಿದರು.</p>.<p>ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಬಳಸಬೇಕು, ಅಂತರ ಕಾಯ್ದುಕೊಳ್ಳಬೇಕು. ಪರಸ್ಪರ ಮಾಸ್ಕ್ ಬದಲಾಯಿಸುವುದಾಗಲಿ, ಪರಸ್ಪರ ಕೈ ಕುಲುಕುವುದಾಗಲಿ ಮಾಡಬಾರದು ಎಂದು ಮುಖ್ಯ ಶಿಕ್ಷಕರು ತಿಳಿ ಹೇಳಿದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ವಿ.ಹೊಸೂರು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ ದಡ್ಡಿ ಅವರು ನಗರ ಸೇರಿದಂತೆ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳಿಗೆ ಭೇಟಿ ನೀಡಿ, ಮಕ್ಕಳು, ಶಿಕ್ಷಕರು ಮತ್ತು ಉಪನ್ಯಾಸಕರೊಂದಿಗೆ ಸಂವಾದ ನಡೆಸಿದರು.</p>.<p class="Subhead"><strong>ಶೇ 35ರಷ್ಟು ಹಾಜರಾತಿ:</strong></p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ ದಡ್ಡಿ, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ 220 ಪದವಿ ಪೂರ್ವ ಕಾಲೇಜುಗಳಲ್ಲಿ 22,500 ವಿದ್ಯಾರ್ಥಿಗಳು ಇದ್ದು, ಪ್ರಥಮ ದಿನದಂದು 5958 (ಶೇ35) ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದರು ಎಂದು ತಿಳಿಸಿದರು.</p>.<p>ಸೋಮವಾರದಿಂದ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ತರಗತಿಗಳಿಗೆಹಾಜರಾಗುವ ಸಾಧ್ಯತೆ ಇದೆ. ಶೇ 30ರಷ್ಟು ಪಠ್ಯಕ್ರಮವನ್ನು ಕಡಿತ ಮಾಡಲಾಗಿದೆ.ಆನ್ಲೈನ್ ತರಗತಿಗಳಿಗೆ ಕೆಲವು ವಿದ್ಯಾರ್ಥಿಗಳು ಹಾಜರಾಗಿಲ್ಲ. ಮತ್ತೆ ಕೆಲವರಿಗೆ ಪಾಠ ಸರಿಯಾಗಿ ಗ್ರಹಿಕೆಯಾಗಿಲ್ಲ.ಎಲ್ಲ ಪಠ್ಯವನ್ನು ಹೊಸದಾಗಿ ಬೋಧಿಸಲಾಗುವುದು ಎಂದರು.</p>.<p class="Subhead"><strong>ಶಾಲೆಗಳಿಗೆ ಭೇಟಿ:</strong></p>.<p>ಐದಾರು ಪ್ರೌಢಶಾಲೆಗಳಿಗೆ ಭೇಟಿ ನೀಡಿದೆ. ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಶಾಲೆಗಳಿಗೆ ಹಾಜರಾಗಿದ್ದರು. ವಿದ್ಯಾರ್ಥಿಗಳಿಂದಲೇ ತರಗತಿ ಆರಂಭ ಕಾರ್ಯಕ್ರಮ ಉದ್ಘಾಟಿಸಿ, ವಿಶ್ವಾಸ ತುಂಬಲಾಯಿತು. ಸಾಂಕೇತಿಕವಾಗಿ ಕೆಲವು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ವಿ.ಹೊಸೂರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಜಿಲ್ಲೆಯ ವಿವಿಧ ಪ್ರೌಢಶಾಲೆಗಳ ಒಟ್ಟು 2,33,764 ವಿದ್ಯಾರ್ಥಿಗಳ ಪೈಕಿ 83,991 ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದರು ಎಂದು ತಿಳಿಸಿದರು.</p>.<p>39,824ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪೈಕಿ 14,795 ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಿಗೆ 3433 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>