<p><strong>ಮುದ್ದೇಬಿಹಾಳ</strong>: ಎಸ್ಡಿಪಿಐ ಅಂದರೆ ಕೇವಲ ರಾಜಕೀಯ ಪಕ್ಷವಲ್ಲ. ಅದೊಂದು ನ್ಯಾಯ, ಸಮಾನತೆ, ಶಿಸ್ತಿನ ಹಾದಿಯಲ್ಲಿ ನಡೆಯುವ ಚಳವಳಿಯಾಗಿದೆ ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ರಂಜಾನ ಕಡಿವಾಲ ಹೇಳಿದರು.</p>.<p>ಪಟ್ಟಣದ ಬೆಂಗಳೂರು ಬೇಕರಿ ಸಭಾಂಗಣದಲ್ಲಿ ದಿಟ್ಟ ನಾಯಕತ್ವ-ಬಲಿಷ್ಠ ಕಾರ್ಯಕರ್ತ ಆಶಯದೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಎಸ್ಡಿಪಿಐ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಹೋರಾಟ ಶೋಷಿತರ ನೆಲೆಯಾಗಬೇಕು, ದಲಿತರ ಕನಸುಗಳ ರೂಪವಾಗಬೇಕು, ಬಡವರ ಶಕ್ತಿಯಾಗಿ ಬೆಳಗಬೇಕು’ ಎಂದರು.</p>.<p>‘ನಾಯಕತ್ವ ಹುದ್ದೆಗೆ ಸೀಮಿತವಲ್ಲ. ನೈತಿಕತೆ, ಶ್ರದ್ಧೆ, ಶಿಸ್ತಿನಿಂದ ಕಾರ್ಯಕರ್ತರಲ್ಲಿ ಸ್ಪೂರ್ತಿ ಮೂಡಿಸಬಲ್ಲ ಶಕ್ತಿ ಆಗಬೇಕು. ನಂಬಿಕೆ, ಸೇವೆ ಮತ್ತು ಸಮರ್ಪಣೆಯೊಂದಿಗೆ ನಾವು ಬದಲಾವಣೆ ತರಬಹುದು’ ಎಂದು ಹೇಳಿದರು.</p>.<p>ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ಸಮೀರ ಹುಣಚಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಸಾರ ಅಹ್ಮದ್ ಮನಿಯಾರ್, ಜಿಲ್ಲಾ ಸಮಿತಿ ಸದಸ್ಯರು ಏಜಾಜ್ ಮನಿಯಾರ್, ಸದ್ದಾಂ ನದಾಫ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ</strong>: ಎಸ್ಡಿಪಿಐ ಅಂದರೆ ಕೇವಲ ರಾಜಕೀಯ ಪಕ್ಷವಲ್ಲ. ಅದೊಂದು ನ್ಯಾಯ, ಸಮಾನತೆ, ಶಿಸ್ತಿನ ಹಾದಿಯಲ್ಲಿ ನಡೆಯುವ ಚಳವಳಿಯಾಗಿದೆ ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ರಂಜಾನ ಕಡಿವಾಲ ಹೇಳಿದರು.</p>.<p>ಪಟ್ಟಣದ ಬೆಂಗಳೂರು ಬೇಕರಿ ಸಭಾಂಗಣದಲ್ಲಿ ದಿಟ್ಟ ನಾಯಕತ್ವ-ಬಲಿಷ್ಠ ಕಾರ್ಯಕರ್ತ ಆಶಯದೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಎಸ್ಡಿಪಿಐ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಮ್ಮ ಹೋರಾಟ ಶೋಷಿತರ ನೆಲೆಯಾಗಬೇಕು, ದಲಿತರ ಕನಸುಗಳ ರೂಪವಾಗಬೇಕು, ಬಡವರ ಶಕ್ತಿಯಾಗಿ ಬೆಳಗಬೇಕು’ ಎಂದರು.</p>.<p>‘ನಾಯಕತ್ವ ಹುದ್ದೆಗೆ ಸೀಮಿತವಲ್ಲ. ನೈತಿಕತೆ, ಶ್ರದ್ಧೆ, ಶಿಸ್ತಿನಿಂದ ಕಾರ್ಯಕರ್ತರಲ್ಲಿ ಸ್ಪೂರ್ತಿ ಮೂಡಿಸಬಲ್ಲ ಶಕ್ತಿ ಆಗಬೇಕು. ನಂಬಿಕೆ, ಸೇವೆ ಮತ್ತು ಸಮರ್ಪಣೆಯೊಂದಿಗೆ ನಾವು ಬದಲಾವಣೆ ತರಬಹುದು’ ಎಂದು ಹೇಳಿದರು.</p>.<p>ಎಸ್ಡಿಪಿಐ ಜಿಲ್ಲಾ ಉಪಾಧ್ಯಕ್ಷ ಸಮೀರ ಹುಣಚಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಸಾರ ಅಹ್ಮದ್ ಮನಿಯಾರ್, ಜಿಲ್ಲಾ ಸಮಿತಿ ಸದಸ್ಯರು ಏಜಾಜ್ ಮನಿಯಾರ್, ಸದ್ದಾಂ ನದಾಫ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>