<p><strong>ನಾಲತವಾಡ:</strong> ಪಟ್ಟಣದಲ್ಲಿ ಸೋಮವಾರ ರಾತ್ರಿ ಸರಣಿ ಕಳ್ಳತನವಾಗಿದ್ದು, 2 ತೊಲಿ ಬಂಗಾರ ಹಾಗೂ ₹ 20 ಸಾವಿರ ನಗದು ಕಳ್ಳತನವಾಗಿದೆ.</p>.<p>ಸೋಮವಾರ ರಾತ್ರಿ ನಾಲ್ಕು ಮನೆಗಳ ಬೀಗ ಮುರಿದ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ನಾಡಗೌಡ ಓಣಿಯ ನಿವಾಸಿ ಚನ್ನಬಸಪ್ಪ ಗುರಿಕಾರ ಎಂಬವರ ಮನೆಗೆ ನುಗ್ಗಿದ ಕಳ್ಳರು, ಬೀರು ಒಡೆದು ಸುಮಾರು ₹ 20 ಸಾವಿರ ಹಾಗೂ 2 ತೊಲಿ ಬಂಗಾರವನ್ನು ಎಗರಿಸಿದ್ದಾರೆ. </p>.<p>ಬಸವರಾಜ ಹಳಶೆಟ್ಟಿ ಅವರ ಮನೆಯ ಬಾಗಿಲು ಮುರಿದು ಮನೆಯ ತುಂಬ ಹುಡುಕಾಡಿದ್ದಾರೆ. ಆದರೆ, ಮನೆಯಲ್ಲಿ ಬಂಗಾರ ಹಾಗೂ ನಗದು ಹಣ ಇಲ್ಲದಿರುವುದನ್ನು ಮನಗಂಡು ಬೆಲೆಬಾಳುವ 2 ಸೀರೆಯನ್ನು ಹೊತ್ತೊಯ್ದಿದ್ದಾರೆ.</p>.<p>ಗುರುಲಿಂಗಪ್ಪ ಕುಂಬಾರ ಹಾಗೂ ಅಬ್ದುಲ್ ಸಾಬ ಹಣಗಿ ಅವರ ಮನೆಯ ಬಾಗಿಲು ಮುರಿದು ಹೋಗಿದ್ದಾರೆ. ಆದರೆ, ಇವರ ಮನೆಯಲ್ಲಿ ಯಾವುದೇ ವಸ್ತುಗಳು ಕಳುವಾವಾಗಿಲ್ಲ ಎಂದು ತಿಳಿದು ಬಂದಿದೆ.</p>.<p>ಮುದ್ದೇಬಿಹಾಳ ಪೋಲೀಸ್ ಠಾಣೆಯ ಪಿಎಸ್ಐ ಮನ್ನಾಬಾಯಿ ನಾಯಕ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಲತವಾಡ:</strong> ಪಟ್ಟಣದಲ್ಲಿ ಸೋಮವಾರ ರಾತ್ರಿ ಸರಣಿ ಕಳ್ಳತನವಾಗಿದ್ದು, 2 ತೊಲಿ ಬಂಗಾರ ಹಾಗೂ ₹ 20 ಸಾವಿರ ನಗದು ಕಳ್ಳತನವಾಗಿದೆ.</p>.<p>ಸೋಮವಾರ ರಾತ್ರಿ ನಾಲ್ಕು ಮನೆಗಳ ಬೀಗ ಮುರಿದ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ನಾಡಗೌಡ ಓಣಿಯ ನಿವಾಸಿ ಚನ್ನಬಸಪ್ಪ ಗುರಿಕಾರ ಎಂಬವರ ಮನೆಗೆ ನುಗ್ಗಿದ ಕಳ್ಳರು, ಬೀರು ಒಡೆದು ಸುಮಾರು ₹ 20 ಸಾವಿರ ಹಾಗೂ 2 ತೊಲಿ ಬಂಗಾರವನ್ನು ಎಗರಿಸಿದ್ದಾರೆ. </p>.<p>ಬಸವರಾಜ ಹಳಶೆಟ್ಟಿ ಅವರ ಮನೆಯ ಬಾಗಿಲು ಮುರಿದು ಮನೆಯ ತುಂಬ ಹುಡುಕಾಡಿದ್ದಾರೆ. ಆದರೆ, ಮನೆಯಲ್ಲಿ ಬಂಗಾರ ಹಾಗೂ ನಗದು ಹಣ ಇಲ್ಲದಿರುವುದನ್ನು ಮನಗಂಡು ಬೆಲೆಬಾಳುವ 2 ಸೀರೆಯನ್ನು ಹೊತ್ತೊಯ್ದಿದ್ದಾರೆ.</p>.<p>ಗುರುಲಿಂಗಪ್ಪ ಕುಂಬಾರ ಹಾಗೂ ಅಬ್ದುಲ್ ಸಾಬ ಹಣಗಿ ಅವರ ಮನೆಯ ಬಾಗಿಲು ಮುರಿದು ಹೋಗಿದ್ದಾರೆ. ಆದರೆ, ಇವರ ಮನೆಯಲ್ಲಿ ಯಾವುದೇ ವಸ್ತುಗಳು ಕಳುವಾವಾಗಿಲ್ಲ ಎಂದು ತಿಳಿದು ಬಂದಿದೆ.</p>.<p>ಮುದ್ದೇಬಿಹಾಳ ಪೋಲೀಸ್ ಠಾಣೆಯ ಪಿಎಸ್ಐ ಮನ್ನಾಬಾಯಿ ನಾಯಕ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>