<p><strong>ವಿಜಯಪುರ:</strong> ತೀವ್ರ ಉಸಿರಾಟ ತೊಂದರೆ ಇರುವ ರೋಗಿಗಳಿಗೆ ಆದ್ಯತೆ ಮೇಲೆ ಚಿಕಿತ್ಸೆ ಒದಗಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಖಾಸಗಿ ಆಸ್ಪತ್ರೆಗಳ ವೈದ್ಯರಿಗೆ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಜಿಲ್ಲಾಡಳಿತದೊಂದಿಗೆ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುತ್ತಿರುವುದಕ್ಕೆ ಅಭಿನಂದಿಸಿದರು.</p>.<p>ರೋಗಿಗಳ ಗಂಟಲುದ್ರವ ಪರೀಕ್ಷೆ, ರೋಗಿಯ ಆರೋಗ್ಯ ನಿರ್ವಹಣೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಪರಸ್ಪರ ಸಮನ್ವಯತೆಯಿಂದ ಬಗೆಹರಿಸಿಕೊಳ್ಳಬೇಕು ಎಂದರು.</p>.<p>ಸದ್ಯಕ್ಕೆ ಟ್ರೂನ್ಯಾಟ್ ಮೂಲಕ ಗಂಟಲುದ್ರವ ಪರೀಕ್ಷೆ ಆದಷ್ಟು ಶೀಘ್ರ ವರದಿ ನೀಡಲು ಪ್ರಯತ್ನಿಸಲಾಗುವುದು. ಶೀಘ್ರದಲ್ಲಿಯೇ ಆರ್.ಟಿ.ಪಿ.ಸಿ.ಆರ್ ಮೂಲಕ ಗಂಟಲುದ್ರವ ಪರೀಕ್ಷೆಗೆ ಒಳಪಡಿಸುವ ವ್ಯವಸ್ಥೆ ಜಾರಿಯಾಗಲಿದ್ದು, ಅಲ್ಲಿಯವರೆಗೆ ವ್ಯವಸ್ಥಿತ ರೀತಿಯಲ್ಲಿ ಕೋವಿಡ್-19 ರೋಗಿಗಳ ನಿರ್ವಹಣೆ ಮಾಡುವಂತೆ ಸೂಚನೆ ನೀಡಿದರು.</p>.<p>ಮಹಾರಾಷ್ಟ್ರ ರೀತಿಯಲ್ಲಿ ಬೆಂಗಳೂರಿನಿಂದ ಆಗಮಿಸುವ ವ್ಯಕ್ತಿಗಳ ಕುರಿತು ಸೂಕ್ತ ನಿಗಾ ವಹಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಉದ್ದೇಶ ಸಹ ಹೊಂದಲಾಗಿದೆ ಎಂದರು.</p>.<p>ಪ್ಲಾಸ್ಮಾ ಥೆರಫಿ ಅಳವಡಿಸುವ ಕುರಿತಂತೆ ಸರ್ಕಾರದ ಮಾರ್ಗಸೂಚಿ, ನಿರ್ದೇಶನಗಳ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಮಾಹಿತಿ ವಿನಿಮಯ ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.</p>.<p>ಖಾಸಗಿ ಆಸ್ಪತ್ರೆಗಳಿಗೆ ಆಗಮಿಸುತ್ತಿರುವ ತೀವ್ರ ಉಸಿರಾಟ ತೊಂದರೆ, ಕೋವಿಡ್-19 ಲಕ್ಷಣ ರೋಗಿಗಳ ಬಗ್ಗೆ ಸೂಕ್ತ ಮಾಹಿತಿಯನ್ನು ಸಮನ್ವಯತೆಯಿಂದ ವಿನಿಮಯ ಮಾಡಿಕೊಳ್ಳಲು ಹಾಗೂ ಮಾಹಿತಿ ನೀಡಲು ಸೂಚಿಸಿದರು.</p>.<p>ಹೋಂ ಐಸೋಲೇಶನ್, ಸ್ವ್ಯಾಬ್ ಸಂಗ್ರಹ, ಕೋವಿಡ್ ರೋಗಿಗಳ ಚಿಕಿತ್ಸೆಯನ್ನು ಸರ್ಕಾರದ ನೂತನ ನಿಯಮಾವಳಿ ಅನ್ವಯ ಆಗುವಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪಸೆ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಸೂಕ್ತ ಸಲಹೆ, ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ತೀವ್ರ ಉಸಿರಾಟ ತೊಂದರೆ ಇರುವ ರೋಗಿಗಳಿಗೆ ಆದ್ಯತೆ ಮೇಲೆ ಚಿಕಿತ್ಸೆ ಒದಗಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಖಾಸಗಿ ಆಸ್ಪತ್ರೆಗಳ ವೈದ್ಯರಿಗೆ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಜಿಲ್ಲಾಡಳಿತದೊಂದಿಗೆ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುತ್ತಿರುವುದಕ್ಕೆ ಅಭಿನಂದಿಸಿದರು.</p>.<p>ರೋಗಿಗಳ ಗಂಟಲುದ್ರವ ಪರೀಕ್ಷೆ, ರೋಗಿಯ ಆರೋಗ್ಯ ನಿರ್ವಹಣೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಪರಸ್ಪರ ಸಮನ್ವಯತೆಯಿಂದ ಬಗೆಹರಿಸಿಕೊಳ್ಳಬೇಕು ಎಂದರು.</p>.<p>ಸದ್ಯಕ್ಕೆ ಟ್ರೂನ್ಯಾಟ್ ಮೂಲಕ ಗಂಟಲುದ್ರವ ಪರೀಕ್ಷೆ ಆದಷ್ಟು ಶೀಘ್ರ ವರದಿ ನೀಡಲು ಪ್ರಯತ್ನಿಸಲಾಗುವುದು. ಶೀಘ್ರದಲ್ಲಿಯೇ ಆರ್.ಟಿ.ಪಿ.ಸಿ.ಆರ್ ಮೂಲಕ ಗಂಟಲುದ್ರವ ಪರೀಕ್ಷೆಗೆ ಒಳಪಡಿಸುವ ವ್ಯವಸ್ಥೆ ಜಾರಿಯಾಗಲಿದ್ದು, ಅಲ್ಲಿಯವರೆಗೆ ವ್ಯವಸ್ಥಿತ ರೀತಿಯಲ್ಲಿ ಕೋವಿಡ್-19 ರೋಗಿಗಳ ನಿರ್ವಹಣೆ ಮಾಡುವಂತೆ ಸೂಚನೆ ನೀಡಿದರು.</p>.<p>ಮಹಾರಾಷ್ಟ್ರ ರೀತಿಯಲ್ಲಿ ಬೆಂಗಳೂರಿನಿಂದ ಆಗಮಿಸುವ ವ್ಯಕ್ತಿಗಳ ಕುರಿತು ಸೂಕ್ತ ನಿಗಾ ವಹಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಉದ್ದೇಶ ಸಹ ಹೊಂದಲಾಗಿದೆ ಎಂದರು.</p>.<p>ಪ್ಲಾಸ್ಮಾ ಥೆರಫಿ ಅಳವಡಿಸುವ ಕುರಿತಂತೆ ಸರ್ಕಾರದ ಮಾರ್ಗಸೂಚಿ, ನಿರ್ದೇಶನಗಳ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಮಾಹಿತಿ ವಿನಿಮಯ ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.</p>.<p>ಖಾಸಗಿ ಆಸ್ಪತ್ರೆಗಳಿಗೆ ಆಗಮಿಸುತ್ತಿರುವ ತೀವ್ರ ಉಸಿರಾಟ ತೊಂದರೆ, ಕೋವಿಡ್-19 ಲಕ್ಷಣ ರೋಗಿಗಳ ಬಗ್ಗೆ ಸೂಕ್ತ ಮಾಹಿತಿಯನ್ನು ಸಮನ್ವಯತೆಯಿಂದ ವಿನಿಮಯ ಮಾಡಿಕೊಳ್ಳಲು ಹಾಗೂ ಮಾಹಿತಿ ನೀಡಲು ಸೂಚಿಸಿದರು.</p>.<p>ಹೋಂ ಐಸೋಲೇಶನ್, ಸ್ವ್ಯಾಬ್ ಸಂಗ್ರಹ, ಕೋವಿಡ್ ರೋಗಿಗಳ ಚಿಕಿತ್ಸೆಯನ್ನು ಸರ್ಕಾರದ ನೂತನ ನಿಯಮಾವಳಿ ಅನ್ವಯ ಆಗುವಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ಖಾಸಗಿ ಆಸ್ಪತ್ರೆಗಳ ವೈದ್ಯರೊಂದಿಗೆ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪಸೆ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಸೂಕ್ತ ಸಲಹೆ, ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>