<p><strong>ದೇವರಹಿಪ್ಪರಗಿ:</strong> ಶಂಕರಾಚಾರ್ಯರು ಅದ್ವೈತ ವೇದಾಂತದ ಮೂಲಕ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ ಶ್ರೇಷ್ಠ ಆಧ್ಯಾತ್ಮೀಕ ಸಂತ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಪಿ.ಬಿರಾದಾರ ಹೇಳಿದರು.</p>.<p>ತಾಲ್ಲೂಕು ಆಡಳಿತದಿಂದ ಶುಕ್ರವಾರ ಜರುಗಿದ ಶಂಕರಾಚಾರ್ಯರ 1237ನೇ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮದ ಆಶಾಕಿರಣವಾಗಿ ನಿರ್ಣಾಯಕ ಪಾತ್ರ ವಹಿಸಿದ ಶಂಕರಾಚಾರ್ಯರು ಭಾರತೀಯ ತತ್ವಶಾಸ್ತ್ರದ ಶ್ರೇಷ್ಠ ವ್ಯಕ್ತಿಯಾಗಿದ್ದರು ಎಂದರು.</p>.<p>ಶಿಕ್ಷಕ ಪ್ರಲ್ಹಾದ ಕುಲಕರ್ಣಿ ಶಂಕರರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ್ ಪ್ರಕಾಶ ಸಿಂದಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ಶಿರಸ್ತೇದಾರ್ ಸುರೇಶ ಮ್ಯಾಗೇರಿ, ಶಿಕ್ಷಕ ಬಸವರಾಜ ಬಡಿಗೇರ, ಪಾಂಡುರಂಗ ದೇಶಪಾಂಡೆ, ವೆಂಕಟೇಶ ಕುಲಕರ್ಣಿ, ನರೇಂದ್ರ ನಾಡಗೌಡ, ಗುರುರಾಜ ಕುಲಕರ್ಣಿ, ಪಿ.ಆರ್.ಕುಲಕರ್ಣಿ, ಶ್ರೀಧರ ನಾಡಗೌಡ, ಸುಧೀರ ಕುಲಕರ್ಣಿ, ಪ್ರವೀಣ ಕುಲಕರ್ಣಿ ಸಿಬ್ಬಂದಿ ಚನ್ನಬಸು ಹೊಸಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವರಹಿಪ್ಪರಗಿ:</strong> ಶಂಕರಾಚಾರ್ಯರು ಅದ್ವೈತ ವೇದಾಂತದ ಮೂಲಕ ಹಿಂದೂ ಧರ್ಮವನ್ನು ಪುನರುಜ್ಜೀವನಗೊಳಿಸಿದ ಶ್ರೇಷ್ಠ ಆಧ್ಯಾತ್ಮೀಕ ಸಂತ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಪಿ.ಬಿರಾದಾರ ಹೇಳಿದರು.</p>.<p>ತಾಲ್ಲೂಕು ಆಡಳಿತದಿಂದ ಶುಕ್ರವಾರ ಜರುಗಿದ ಶಂಕರಾಚಾರ್ಯರ 1237ನೇ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮದ ಆಶಾಕಿರಣವಾಗಿ ನಿರ್ಣಾಯಕ ಪಾತ್ರ ವಹಿಸಿದ ಶಂಕರಾಚಾರ್ಯರು ಭಾರತೀಯ ತತ್ವಶಾಸ್ತ್ರದ ಶ್ರೇಷ್ಠ ವ್ಯಕ್ತಿಯಾಗಿದ್ದರು ಎಂದರು.</p>.<p>ಶಿಕ್ಷಕ ಪ್ರಲ್ಹಾದ ಕುಲಕರ್ಣಿ ಶಂಕರರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ್ ಪ್ರಕಾಶ ಸಿಂದಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ಶಿರಸ್ತೇದಾರ್ ಸುರೇಶ ಮ್ಯಾಗೇರಿ, ಶಿಕ್ಷಕ ಬಸವರಾಜ ಬಡಿಗೇರ, ಪಾಂಡುರಂಗ ದೇಶಪಾಂಡೆ, ವೆಂಕಟೇಶ ಕುಲಕರ್ಣಿ, ನರೇಂದ್ರ ನಾಡಗೌಡ, ಗುರುರಾಜ ಕುಲಕರ್ಣಿ, ಪಿ.ಆರ್.ಕುಲಕರ್ಣಿ, ಶ್ರೀಧರ ನಾಡಗೌಡ, ಸುಧೀರ ಕುಲಕರ್ಣಿ, ಪ್ರವೀಣ ಕುಲಕರ್ಣಿ ಸಿಬ್ಬಂದಿ ಚನ್ನಬಸು ಹೊಸಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>