<p><strong>ವಿಜಯಪುರ</strong>: ಆಧುನಿಕತೆ ಬೆಳದಂತೆ ಮೊಬೈಲ್, ದೂರದರ್ಶನ ಮತ್ತು ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಗ್ರಾಮೀಣ ಜಾನಪದ ಸಂಸ್ಕೃತಿ, ನೃತ್ಯ, ಯಕ್ಷಗಾನ, ಮಹಾಭಾರತ-ರಾಮಾಯಣದಂತಹ ಕಥಾರೂಪಕಗಳು ಮಾಯವಾಗುತ್ತಿರುವದು ಆತಂಕಕಾರಿ. ಮಕ್ಕಳಲ್ಲಿರುವ ಅಭಿರುಚಿ, ಆಸಕ್ತಿ ಮತ್ತು ಪ್ರತಿಭೆ ಗುರುತಿಸಿ ಅದನ್ನು ಅನಾವರಣಗೊಳಿಸಲು ಸಾಂಸ್ಕೃತಿಕ ವೇದಿಕೆಗಳು ಅಗತ್ಯ ಎಂದು ನಿವೃತ್ತ ಪ್ರಾಂಶುಪಾಲೆ ಶಾಂತಾ ಹೆರಕಲ್ ಅಭಿಪ್ರಾಯಪಟ್ಟರು.</p>.<p>ನಗರದ ಎನ್.ಜಿ.ಓ ಕಾಲೋನಿಯಲ್ಲಿರುವ ಆಂಜನೇಯ ದೇವಸ್ಥಾನದ 6ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ನಟರಾಜ ಡ್ಯಾನ್ಸ್ ಅಕ್ಯಾಡೆಮಿಯ ಸುಮಾರು 60 ಕ್ಕೂ ಹೆಚ್ಚು ಮಕ್ಕಳಿಂದ ನಾಟ್ಯ ಮತ್ತು ಕಿರು ನಾಟಕ ಜರುಗಿದವು. </p>.<p>ಥಾಯ್ಲೆಂಡ್ನಲ್ಲಿ ನಡೆದ ಅಂತರರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದ ಪ್ರತೀಕ್ಷಾ, ಸಾಧನಾ ಹಾಗೂ ಮೂರನೇ ಸ್ಥಾನ ಪಡೆದ ಮನಸ್ವಿ ಅವರಿಗೆ ಹಾಗೂ ಪುಣೆಯಲ್ಲಿ ಜರುಗಿದ ಯುನೆಸ್ಕೋ ನೃತ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಸಾನ್ವೀ, ವೇದಿಕಾ ಇವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.</p>.<p>ಭೀಮರಾಯ ಬಿರಾದಾರ, ಎಸ್.ಜಿ.ನಿಂಗನಗೌಡ್ರ, ಶಿವಪ್ಪ ಸಾವಳಗಿ, ಆಶಾ ಬಾಸೂತಕರ, ಶಿವಾನಂದ ಬಿಜ್ಜರಗಿ, ಬಾಬು ಕೋಲಕಾರ, ಆರ್.ಎಸ್.ಹಡಪದ, ಅಪ್ಪು ಬಿರಾದಾರ ಮತ್ತಿತರರು ಭಾಗವಹಿಸಿದ್ದರು.</p>.<p><strong>ಫೋಟೋ ಕ್ಯಾಪ್ಶನ್</strong></p>.<p>ವಿಜಯಪುರದ ಆಂಜನೇಯ ದೇವಸ್ಥಾನದ 6ನೇ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಆಧುನಿಕತೆ ಬೆಳದಂತೆ ಮೊಬೈಲ್, ದೂರದರ್ಶನ ಮತ್ತು ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಗ್ರಾಮೀಣ ಜಾನಪದ ಸಂಸ್ಕೃತಿ, ನೃತ್ಯ, ಯಕ್ಷಗಾನ, ಮಹಾಭಾರತ-ರಾಮಾಯಣದಂತಹ ಕಥಾರೂಪಕಗಳು ಮಾಯವಾಗುತ್ತಿರುವದು ಆತಂಕಕಾರಿ. ಮಕ್ಕಳಲ್ಲಿರುವ ಅಭಿರುಚಿ, ಆಸಕ್ತಿ ಮತ್ತು ಪ್ರತಿಭೆ ಗುರುತಿಸಿ ಅದನ್ನು ಅನಾವರಣಗೊಳಿಸಲು ಸಾಂಸ್ಕೃತಿಕ ವೇದಿಕೆಗಳು ಅಗತ್ಯ ಎಂದು ನಿವೃತ್ತ ಪ್ರಾಂಶುಪಾಲೆ ಶಾಂತಾ ಹೆರಕಲ್ ಅಭಿಪ್ರಾಯಪಟ್ಟರು.</p>.<p>ನಗರದ ಎನ್.ಜಿ.ಓ ಕಾಲೋನಿಯಲ್ಲಿರುವ ಆಂಜನೇಯ ದೇವಸ್ಥಾನದ 6ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ನಟರಾಜ ಡ್ಯಾನ್ಸ್ ಅಕ್ಯಾಡೆಮಿಯ ಸುಮಾರು 60 ಕ್ಕೂ ಹೆಚ್ಚು ಮಕ್ಕಳಿಂದ ನಾಟ್ಯ ಮತ್ತು ಕಿರು ನಾಟಕ ಜರುಗಿದವು. </p>.<p>ಥಾಯ್ಲೆಂಡ್ನಲ್ಲಿ ನಡೆದ ಅಂತರರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದ ಪ್ರತೀಕ್ಷಾ, ಸಾಧನಾ ಹಾಗೂ ಮೂರನೇ ಸ್ಥಾನ ಪಡೆದ ಮನಸ್ವಿ ಅವರಿಗೆ ಹಾಗೂ ಪುಣೆಯಲ್ಲಿ ಜರುಗಿದ ಯುನೆಸ್ಕೋ ನೃತ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಸಾನ್ವೀ, ವೇದಿಕಾ ಇವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.</p>.<p>ಭೀಮರಾಯ ಬಿರಾದಾರ, ಎಸ್.ಜಿ.ನಿಂಗನಗೌಡ್ರ, ಶಿವಪ್ಪ ಸಾವಳಗಿ, ಆಶಾ ಬಾಸೂತಕರ, ಶಿವಾನಂದ ಬಿಜ್ಜರಗಿ, ಬಾಬು ಕೋಲಕಾರ, ಆರ್.ಎಸ್.ಹಡಪದ, ಅಪ್ಪು ಬಿರಾದಾರ ಮತ್ತಿತರರು ಭಾಗವಹಿಸಿದ್ದರು.</p>.<p><strong>ಫೋಟೋ ಕ್ಯಾಪ್ಶನ್</strong></p>.<p>ವಿಜಯಪುರದ ಆಂಜನೇಯ ದೇವಸ್ಥಾನದ 6ನೇ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>