<p>ಪ್ರಜಾವಾಣಿ ವಾರ್ತೆ</p>.<p><strong>ಬಸವನಬಾಗೇವಾಡಿ</strong>: ಬಸವಣ್ಣವರ ಕ್ರಾಂತಿಗೆ 12ನೇ ಶತಮಾನದಲ್ಲಿ ಹಲವಾರು ಶರಣರು ಕೈ ಜೋಡಿಸಿದ್ದರು. ಅದರಲ್ಲಿ ನುಲಿಯ ಚಂದಯ್ಯ ಕೂಡ ಪ್ರಮುಖರು. ಕಾಯಕಕ್ಕೆ ಹೆಚ್ಚಿನ ಮಹತ್ವ ನೀಡಿದ ಚಂದಯ್ಯನವರು ಸರ್ವಕಾಲಕ್ಕೂ ನಮಗೆ ಪ್ರೇರಣೆಯಾಗಿ ನಿಲ್ಲುತ್ತಾರೆ ಎಂದು ತಹಶೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ಮಾತನಾಡಿ, ನುಲಿಯ ಚಂದಯ್ಯನವರು ಸಮಾಜದ ಓರೆ ಕೋರೆಗಳನ್ನು ಮುಚ್ಚು ಮರೆ ಇಲ್ಲದೆ ತಮ್ಮ ವಚನಗಳ ಮೂಲಕ ತಿಳಿಸಿದವರು ಎಂದು ಹೇಳಿದರು.</p>.<p>ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಹಿರೇಮನಿ, ಎಂ.ಎಂ.ದಫೇದಾರ, ಸಿ.ಡಿ.ಪಿ.ಓ ಕಚೇರಿ ಅಧೀಕ್ಷಕ ಬೋರಮ್ಮ ಬಿರಾದಾರ, ಮುಖಂಡರಾದ ಬಸವರಾಜ ಭಜಂತ್ರಿ, ಸೀತಾರಾಮ ಭಜಂತ್ರಿ, ಸಿದ್ಧರಾಮ ಭಜಂತ್ರಿ ಇದ್ದರು.</p>.<p>ವೀರೇಶ ಗೂಡ್ಲಮನಿ ನಿರೂಪಿಸಿದರು, ಮಂಜುನಾಥ ಹಳ್ಳೂರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಬಸವನಬಾಗೇವಾಡಿ</strong>: ಬಸವಣ್ಣವರ ಕ್ರಾಂತಿಗೆ 12ನೇ ಶತಮಾನದಲ್ಲಿ ಹಲವಾರು ಶರಣರು ಕೈ ಜೋಡಿಸಿದ್ದರು. ಅದರಲ್ಲಿ ನುಲಿಯ ಚಂದಯ್ಯ ಕೂಡ ಪ್ರಮುಖರು. ಕಾಯಕಕ್ಕೆ ಹೆಚ್ಚಿನ ಮಹತ್ವ ನೀಡಿದ ಚಂದಯ್ಯನವರು ಸರ್ವಕಾಲಕ್ಕೂ ನಮಗೆ ಪ್ರೇರಣೆಯಾಗಿ ನಿಲ್ಲುತ್ತಾರೆ ಎಂದು ತಹಶೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಚನ್ನಬಸವೇಶ್ವರ ಪ್ರತಿಷ್ಠಾನದ ಅಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ಮಾತನಾಡಿ, ನುಲಿಯ ಚಂದಯ್ಯನವರು ಸಮಾಜದ ಓರೆ ಕೋರೆಗಳನ್ನು ಮುಚ್ಚು ಮರೆ ಇಲ್ಲದೆ ತಮ್ಮ ವಚನಗಳ ಮೂಲಕ ತಿಳಿಸಿದವರು ಎಂದು ಹೇಳಿದರು.</p>.<p>ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ ಹಿರೇಮನಿ, ಎಂ.ಎಂ.ದಫೇದಾರ, ಸಿ.ಡಿ.ಪಿ.ಓ ಕಚೇರಿ ಅಧೀಕ್ಷಕ ಬೋರಮ್ಮ ಬಿರಾದಾರ, ಮುಖಂಡರಾದ ಬಸವರಾಜ ಭಜಂತ್ರಿ, ಸೀತಾರಾಮ ಭಜಂತ್ರಿ, ಸಿದ್ಧರಾಮ ಭಜಂತ್ರಿ ಇದ್ದರು.</p>.<p>ವೀರೇಶ ಗೂಡ್ಲಮನಿ ನಿರೂಪಿಸಿದರು, ಮಂಜುನಾಥ ಹಳ್ಳೂರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>