<p>ವಿಜಯಪುರ: 12ನೇ ಶತಮಾನದ ಶರಣರು ಮೌಲ್ಯಯುತ ಕಾಯಕ ಜೀವನ ನಡೆಸುವ ಮೂಲಕ ಸಮಾಜಕ್ಕೆ ಜ್ಞಾನದ, ಸುಜ್ಞಾನದ ಬೆಳಕು ತೋರಿದ್ದಾರೆ. ಕಾಯಕ ಶರಣರ ಆದರ್ಶ ವಿಚಾರಗಳು ಹಾಗೂ ಅವರು ನೀಡಿದ ವಚನಗಳೂ ಸಮಾಜಕ್ಕೆ ದಾರಿದೀಪವಾಗುವುದರೊಂದಿಗೆ ಇಂದಿಗೂ ಪ್ರಸ್ತುತವಾಗಿವೆ ಎಂದು ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕಾಯಕ ಶರಣರ' ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕಾಯಕ ಶರಣರು ಜನಸಾಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ನೀಡಿದ್ದಾರೆ. ಇಂತಹ ಶರಣರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಅವರು ಹೇಳಿದರು.</p>.<p>ಉಪನ್ಯಾಸ ನೀಡಿದ ಸಾಹಿತಿ ಜಂಬುನಾಥ ಕಂಚ್ಯಾಣಿ, 12ನೇ ಶತಮಾನದಲ್ಲಿನ ಬಸವಾದಿ ಶರಣರ ಅನುಭವ ಮಂಟಪವೂ ಇಂದಿನ ಸಂಸತ್ತಿನ ಮಾದರಿ. ಅಲ್ಲಿ ಆಧ್ಯಾತ್ಮಿಕ, ಆರ್ಥಿಕ, ಸಾಮಾಜಿಕ ಹಲವು ಕ್ಷೇತ್ರದ ವಿಷಯಗಳ ಚರ್ಚೆ, ಚಿಂತನ ಮಂಥನ ನಡೆಯುತ್ತಿತ್ತು. ಸಮಾಜದಲ್ಲಿನ ಮೌಢ್ಯತೆಯನ್ನು ತೊಡೆದು ಹಾಕಲು ಬಸವಾದಿ ಶರಣರು ತಮ್ಮ ವಚನಗಳ ಮೂಲಕ ತಿಳಿಸಿದರು. ಎಲ್ಲ ಶರಣರು ತಮ್ಮ ಕಾಯಕ ನಿಷ್ಠೆಯೊಂದಿಗೆ ವಚನಗಳ ಮೂಲಕ ಜ್ಞಾನದ ದೀವಿಗೆಯಾಗಿದ್ದರು ಎಂದರು.</p>.<p>ತಾಳಿಕೋಟೆಯ ಎಸ್. ಕೆ. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಸುಜಾತ ಚಲವಾದಿ ಮಾತನಾಡಿ, ಸತ್ಯ, ಶುದ್ಧ, ಕಾಯಕದ ಮೂಲಕ ಜೀವನ ನಡೆಸಿದ ಶರಣರು ಕಾಯಕ, ಶಾಂತಿಮಂತ್ರ, ವಚನಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ. ಇಂದಿಗೂ ವಚನಗಳು ಪ್ರಸ್ತುತವಾಗಿವೆ ಎಂದು ಹೇಳಿದರು.</p>.<p>ವಿಜಯಪುರ ತಹಶೀಲ್ದಾರ್ ಸುರೇಶ ಮುಂಜೆ, ಜಿಲ್ಲಾ ಪಂಚಾಯ್ತಿ ಸಹಾಯಕ ಕಾರ್ಯದರ್ಶಿ ಅನುಸೂಯ ಕೆ.ಚಲವಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್, ವಿವಿಧ ಸಮಾಜದ ಮುಖಂಡರಾದ ಭೀಮರಾಯ ಜಿಗಜಿಣಗಿ, ದೇವೇಂದ್ರ ಮಿರೇಕರ, ಗಿರಿಶ ಕುಲಕರ್ಣಿ, ಅಶೋಕ ಸೌದಾಗರ, ಆರ್.ವೈ.ಕಟ್ಟಿಮನಿ, ಎಂ.ಆರ್.ಸೌದಾಗರ, ಹೊನ್ನಕಾಂಬಳೆ, ಮಹಾದೇವ ಬಿಜಾಪುರ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: 12ನೇ ಶತಮಾನದ ಶರಣರು ಮೌಲ್ಯಯುತ ಕಾಯಕ ಜೀವನ ನಡೆಸುವ ಮೂಲಕ ಸಮಾಜಕ್ಕೆ ಜ್ಞಾನದ, ಸುಜ್ಞಾನದ ಬೆಳಕು ತೋರಿದ್ದಾರೆ. ಕಾಯಕ ಶರಣರ ಆದರ್ಶ ವಿಚಾರಗಳು ಹಾಗೂ ಅವರು ನೀಡಿದ ವಚನಗಳೂ ಸಮಾಜಕ್ಕೆ ದಾರಿದೀಪವಾಗುವುದರೊಂದಿಗೆ ಇಂದಿಗೂ ಪ್ರಸ್ತುತವಾಗಿವೆ ಎಂದು ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕಾಯಕ ಶರಣರ' ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕಾಯಕ ಶರಣರು ಜನಸಾಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ನೀಡಿದ್ದಾರೆ. ಇಂತಹ ಶರಣರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಅವರು ಹೇಳಿದರು.</p>.<p>ಉಪನ್ಯಾಸ ನೀಡಿದ ಸಾಹಿತಿ ಜಂಬುನಾಥ ಕಂಚ್ಯಾಣಿ, 12ನೇ ಶತಮಾನದಲ್ಲಿನ ಬಸವಾದಿ ಶರಣರ ಅನುಭವ ಮಂಟಪವೂ ಇಂದಿನ ಸಂಸತ್ತಿನ ಮಾದರಿ. ಅಲ್ಲಿ ಆಧ್ಯಾತ್ಮಿಕ, ಆರ್ಥಿಕ, ಸಾಮಾಜಿಕ ಹಲವು ಕ್ಷೇತ್ರದ ವಿಷಯಗಳ ಚರ್ಚೆ, ಚಿಂತನ ಮಂಥನ ನಡೆಯುತ್ತಿತ್ತು. ಸಮಾಜದಲ್ಲಿನ ಮೌಢ್ಯತೆಯನ್ನು ತೊಡೆದು ಹಾಕಲು ಬಸವಾದಿ ಶರಣರು ತಮ್ಮ ವಚನಗಳ ಮೂಲಕ ತಿಳಿಸಿದರು. ಎಲ್ಲ ಶರಣರು ತಮ್ಮ ಕಾಯಕ ನಿಷ್ಠೆಯೊಂದಿಗೆ ವಚನಗಳ ಮೂಲಕ ಜ್ಞಾನದ ದೀವಿಗೆಯಾಗಿದ್ದರು ಎಂದರು.</p>.<p>ತಾಳಿಕೋಟೆಯ ಎಸ್. ಕೆ. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಸುಜಾತ ಚಲವಾದಿ ಮಾತನಾಡಿ, ಸತ್ಯ, ಶುದ್ಧ, ಕಾಯಕದ ಮೂಲಕ ಜೀವನ ನಡೆಸಿದ ಶರಣರು ಕಾಯಕ, ಶಾಂತಿಮಂತ್ರ, ವಚನಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ. ಇಂದಿಗೂ ವಚನಗಳು ಪ್ರಸ್ತುತವಾಗಿವೆ ಎಂದು ಹೇಳಿದರು.</p>.<p>ವಿಜಯಪುರ ತಹಶೀಲ್ದಾರ್ ಸುರೇಶ ಮುಂಜೆ, ಜಿಲ್ಲಾ ಪಂಚಾಯ್ತಿ ಸಹಾಯಕ ಕಾರ್ಯದರ್ಶಿ ಅನುಸೂಯ ಕೆ.ಚಲವಾದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್, ವಿವಿಧ ಸಮಾಜದ ಮುಖಂಡರಾದ ಭೀಮರಾಯ ಜಿಗಜಿಣಗಿ, ದೇವೇಂದ್ರ ಮಿರೇಕರ, ಗಿರಿಶ ಕುಲಕರ್ಣಿ, ಅಶೋಕ ಸೌದಾಗರ, ಆರ್.ವೈ.ಕಟ್ಟಿಮನಿ, ಎಂ.ಆರ್.ಸೌದಾಗರ, ಹೊನ್ನಕಾಂಬಳೆ, ಮಹಾದೇವ ಬಿಜಾಪುರ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>