<p><strong>ವಿಜಯಪುರ</strong>: ಬಬಲೇಶ್ವರ ಕ್ಷೇತ್ರದ ಹಾಲಿ ಶಾಸಕರು ಸೋಲುವ ಭೀತಿಯಲ್ಲಿ ಮತದಾರರಿಗೆ ಸೀರೆ, ಮೊಬೈಲ್ ಹಂಚುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಆರೋಪಿಸಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಬಲೇಶ್ವರದಲ್ಲಿ ನಡೆಯಲಿರುವ ಪ್ರಜಾಧ್ವನಿ ಸಮಾವೇಶಕ್ಕೆ ಜನ ಸೇರುವುದಿಲ್ಲ ಎಂಬುದು ಕಾಂಗ್ರೆಸ್ನವರಿಗೆ ಮನವರಿಕೆಯಾಗಿದೆ. ಹೀಗಾಗಿ ಜನರಿಗೆ ಆಮಿಷ ಒಡ್ಡಿ ಸಮಾವೇಶಕ್ಕೆ ಆಹ್ವಾನಿಸತೊಡಗಿದ್ದಾರೆ ಎಂದರು.</p>.<p>ಸೀರೆ, ಮೊಬೈಲ್, ಹಣ ಸೇರಿದಂತೆ ಎಷ್ಟೇ ಆಸೆ, ಆಮಿಷ ಒಡ್ಡಿದರೂ, ತಿಮ್ಮರಲಾಗ ಹೊಡೆದರೂ ಕ್ಷೇತ್ರದ ಜನ ಒಳಗಾಗುವುದಿಲ್ಲ. ಈ ಬಾರಿ ಮತದಾರರು ನನ್ನ ಮತ್ತು ಬಿಜೆಪಿ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕ್ಷೇತ್ರದ ಮತದಾರರು ಈ ಬಾರಿ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿದರು.</p>.<p>ಕಳೆದ ಐದು ವರ್ಷದಲ್ಲಿ ‘ಆಧುನಿಕ ಭಗೀರಥ’ ಕ್ಷೇತ್ರದ ಗ್ರಾಮಗಳಿಗೆ ಒಂದು ದಿನವೂ ಬಂದಿಲ್ಲ. ಕೋವಿಡ್ ಸಂದರ್ಭದಲ್ಲೂ ಜನರ ಸಂಕಷ್ಟಕ್ಕೆ ಸ್ಪಂದಿಸಲಿಲ್ಲ, ಕ್ಷೇತ್ರದಲ್ಲಿ ಯಾವೊಂದು ರಸ್ತೆಯೂ ಸಂಚಾರಕ್ಕೆ ಯೋಗ್ಯವಾಗಿಲ್ಲ ಎಂದು ದೂರಿದರು.</p>.<p>ಕ್ಷೇತ್ರದಲ್ಲಿ 15 ವರ್ಷಗಳಿಂದ ಅಧಿಕಾರ ಇಲ್ಲದೇ ಇದ್ದರೂ ಜನರಿಗೆ ಕೈಲಾದ ಸೇವೆ ಸಲ್ಲಿಸಿದ್ದೇನೆ. ಬೀಜ ನಿಗಮದ ಅಧ್ಯಕ್ಷನಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದೇನೆ ಎಂದರು.</p>.<p>ಕ್ಷೇತ್ರದಲ್ಲಿ ಅದು ಮಾಡಿದ್ದೇನೆ, ಇದು ಮಾಡಿದ್ದೇನೆ ಎನ್ನುವವರು ಸೀರೆ, ಮೊಬೈಲ್ ಹಂಚುವಂತ ಸಣ್ಣ ಕೆಲಸ ಏಕೆ ಮಾಡುತ್ತಿದ್ದಾರೆ. ಸ್ವಯಂ ಪ್ರೇರಣೆಯಿಂದ ಜನರು ಸಮಾವೇಶಕ್ಕೆ ಬರುವಂತೆ ಮಾಡಬೇಕು ಎಂದು ಹೇಳಿದರು.</p>.<p>₹ 9 ಸಾವಿರ ಮೊತ್ತದ ಮನೆ ಬಳಕೆ ಹಿಟ್ಟಿನಗಿರಣಿಯನ್ನು ಮತದಾರರಿಗೆ ತಮ್ಮ ಹಿಂಬಾಲಕರ ಮೂಲಕ ₹ 12 ಸಾವಿರಕ್ಕೆ ಮಾರಿಕೊಳ್ಳುತ್ತಿದ್ದಾರೆ. ಅಲ್ಲದೇ, ರಿಯಾಯಿತಿ ದರದ ಹೆಸರಲ್ಲಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಚುನಾವಣೆ ಸಂದರ್ಭದಲ್ಲಿ ನಮ್ಮ ರಾಜ್ಯ, ರಾಷ್ಟ್ರ ನಾಯಕರು ಬಬಲೇಶ್ವರಕ್ಕೆ ಬರಲಿದ್ದಾರೆ. ಸಮಾವೇಶಕ್ಕೆ ಬರುವಂತೆ ಜನರಿಗೆ ನಾವು ಯಾವುದೇ ಆಸೆ, ಆಮಿಷ ಒಡ್ಡುವುದಿಲ್ಲ, ಹಾಗೆಯೇ ಬರಲಿದ್ದಾರೆ ಎಂದರು.</p>.<p class="Subhead"><strong>ಟಿಕೆಟ್ ಖಚಿತ: </strong>ಈಗಾಗಲೇ ಪಕ್ಷದಿಂದ ಕ್ಷೇತ್ರದಲ್ಲಿ ಸಮೀಕ್ಷೆ ನಡೆದಿದೆ. ಶೀಘ್ರದಲ್ಲೇ ಟಿಕೆಟ್ ಘೋಷಣೆ ಮಾಡಲಿದ್ದಾರೆ. ನನಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ. ಕ್ಷೇತ್ರದ ಮತದಾರರು ಈ ಬಾರಿ ಬಿಜೆಪಿಗೆ ನೂರಕ್ಕೆ ನೂರು ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. </p>.<p>***</p>.<p>ಯಾವುದೇ ಆಸೆ, ಆಮಿಷ ತೋರದೇ ಈ ಬಾರಿಯ ಚುನಾವಣೆಯಲ್ಲಿ ತಮ್ಮ ತಾಕತ್ತು ತೋರಿಸಲಿ, ನೀರಾವರಿ ಹರಿಕಾರ ಎಂಬುದು ಸಾಬೀತು ಪಡಿಸಲಿ.<br /><em><strong>–ವಿಜುಗೌಡ ಪಾಟೀಲ, ಅಧ್ಯಕ್ಷ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ </strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಬಬಲೇಶ್ವರ ಕ್ಷೇತ್ರದ ಹಾಲಿ ಶಾಸಕರು ಸೋಲುವ ಭೀತಿಯಲ್ಲಿ ಮತದಾರರಿಗೆ ಸೀರೆ, ಮೊಬೈಲ್ ಹಂಚುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಆರೋಪಿಸಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಬಲೇಶ್ವರದಲ್ಲಿ ನಡೆಯಲಿರುವ ಪ್ರಜಾಧ್ವನಿ ಸಮಾವೇಶಕ್ಕೆ ಜನ ಸೇರುವುದಿಲ್ಲ ಎಂಬುದು ಕಾಂಗ್ರೆಸ್ನವರಿಗೆ ಮನವರಿಕೆಯಾಗಿದೆ. ಹೀಗಾಗಿ ಜನರಿಗೆ ಆಮಿಷ ಒಡ್ಡಿ ಸಮಾವೇಶಕ್ಕೆ ಆಹ್ವಾನಿಸತೊಡಗಿದ್ದಾರೆ ಎಂದರು.</p>.<p>ಸೀರೆ, ಮೊಬೈಲ್, ಹಣ ಸೇರಿದಂತೆ ಎಷ್ಟೇ ಆಸೆ, ಆಮಿಷ ಒಡ್ಡಿದರೂ, ತಿಮ್ಮರಲಾಗ ಹೊಡೆದರೂ ಕ್ಷೇತ್ರದ ಜನ ಒಳಗಾಗುವುದಿಲ್ಲ. ಈ ಬಾರಿ ಮತದಾರರು ನನ್ನ ಮತ್ತು ಬಿಜೆಪಿ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕ್ಷೇತ್ರದ ಮತದಾರರು ಈ ಬಾರಿ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿದರು.</p>.<p>ಕಳೆದ ಐದು ವರ್ಷದಲ್ಲಿ ‘ಆಧುನಿಕ ಭಗೀರಥ’ ಕ್ಷೇತ್ರದ ಗ್ರಾಮಗಳಿಗೆ ಒಂದು ದಿನವೂ ಬಂದಿಲ್ಲ. ಕೋವಿಡ್ ಸಂದರ್ಭದಲ್ಲೂ ಜನರ ಸಂಕಷ್ಟಕ್ಕೆ ಸ್ಪಂದಿಸಲಿಲ್ಲ, ಕ್ಷೇತ್ರದಲ್ಲಿ ಯಾವೊಂದು ರಸ್ತೆಯೂ ಸಂಚಾರಕ್ಕೆ ಯೋಗ್ಯವಾಗಿಲ್ಲ ಎಂದು ದೂರಿದರು.</p>.<p>ಕ್ಷೇತ್ರದಲ್ಲಿ 15 ವರ್ಷಗಳಿಂದ ಅಧಿಕಾರ ಇಲ್ಲದೇ ಇದ್ದರೂ ಜನರಿಗೆ ಕೈಲಾದ ಸೇವೆ ಸಲ್ಲಿಸಿದ್ದೇನೆ. ಬೀಜ ನಿಗಮದ ಅಧ್ಯಕ್ಷನಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದೇನೆ ಎಂದರು.</p>.<p>ಕ್ಷೇತ್ರದಲ್ಲಿ ಅದು ಮಾಡಿದ್ದೇನೆ, ಇದು ಮಾಡಿದ್ದೇನೆ ಎನ್ನುವವರು ಸೀರೆ, ಮೊಬೈಲ್ ಹಂಚುವಂತ ಸಣ್ಣ ಕೆಲಸ ಏಕೆ ಮಾಡುತ್ತಿದ್ದಾರೆ. ಸ್ವಯಂ ಪ್ರೇರಣೆಯಿಂದ ಜನರು ಸಮಾವೇಶಕ್ಕೆ ಬರುವಂತೆ ಮಾಡಬೇಕು ಎಂದು ಹೇಳಿದರು.</p>.<p>₹ 9 ಸಾವಿರ ಮೊತ್ತದ ಮನೆ ಬಳಕೆ ಹಿಟ್ಟಿನಗಿರಣಿಯನ್ನು ಮತದಾರರಿಗೆ ತಮ್ಮ ಹಿಂಬಾಲಕರ ಮೂಲಕ ₹ 12 ಸಾವಿರಕ್ಕೆ ಮಾರಿಕೊಳ್ಳುತ್ತಿದ್ದಾರೆ. ಅಲ್ಲದೇ, ರಿಯಾಯಿತಿ ದರದ ಹೆಸರಲ್ಲಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ಚುನಾವಣೆ ಸಂದರ್ಭದಲ್ಲಿ ನಮ್ಮ ರಾಜ್ಯ, ರಾಷ್ಟ್ರ ನಾಯಕರು ಬಬಲೇಶ್ವರಕ್ಕೆ ಬರಲಿದ್ದಾರೆ. ಸಮಾವೇಶಕ್ಕೆ ಬರುವಂತೆ ಜನರಿಗೆ ನಾವು ಯಾವುದೇ ಆಸೆ, ಆಮಿಷ ಒಡ್ಡುವುದಿಲ್ಲ, ಹಾಗೆಯೇ ಬರಲಿದ್ದಾರೆ ಎಂದರು.</p>.<p class="Subhead"><strong>ಟಿಕೆಟ್ ಖಚಿತ: </strong>ಈಗಾಗಲೇ ಪಕ್ಷದಿಂದ ಕ್ಷೇತ್ರದಲ್ಲಿ ಸಮೀಕ್ಷೆ ನಡೆದಿದೆ. ಶೀಘ್ರದಲ್ಲೇ ಟಿಕೆಟ್ ಘೋಷಣೆ ಮಾಡಲಿದ್ದಾರೆ. ನನಗೆ ಟಿಕೆಟ್ ಸಿಗುವ ನಿರೀಕ್ಷೆ ಇದೆ. ಕ್ಷೇತ್ರದ ಮತದಾರರು ಈ ಬಾರಿ ಬಿಜೆಪಿಗೆ ನೂರಕ್ಕೆ ನೂರು ಆಶೀರ್ವಾದ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. </p>.<p>***</p>.<p>ಯಾವುದೇ ಆಸೆ, ಆಮಿಷ ತೋರದೇ ಈ ಬಾರಿಯ ಚುನಾವಣೆಯಲ್ಲಿ ತಮ್ಮ ತಾಕತ್ತು ತೋರಿಸಲಿ, ನೀರಾವರಿ ಹರಿಕಾರ ಎಂಬುದು ಸಾಬೀತು ಪಡಿಸಲಿ.<br /><em><strong>–ವಿಜುಗೌಡ ಪಾಟೀಲ, ಅಧ್ಯಕ್ಷ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ </strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>