<p>ವಿಜಯಪುರ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸಚಿವ ಸಂಪುಟದಲ್ಲಿ ಇರುವ ಏಕೈಕ ಮಹಿಳೆ ನಾನಾಗಿದ್ದು, ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಚಿವಳಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಒಂದು ವೇಳೆ ಸಂಪುಟದಿಂದ ಕೈಬಿಡುವ ತೀರ್ಮಾನ ಕೈಗೊಂಡರೂ ಪಕ್ಷದ ಸಾಮಾನ್ಯ ಕಾರ್ಯಕರ್ತಳಾಗಿ ಕೆಲಸ ಮಾಡಲು ಸಿದ್ಧಳಿದ್ದೇನೆ. ಪಕ್ಷದ ತೀರ್ಮಾನಕ್ಕೆ ಬದ್ಧಳಾಗಿದ್ದೇನೆ’ ಎಂದು ಹೇಳಿದರು.</p>.<p><strong>ಉತ್ತಮ ಆಡಳಿತ: </strong>‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಘೋಷಣೆಯಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆರು ವರ್ಷಗಳ ಆಡಳಿತಾವಧಿಯಲ್ಲಿ ದೇಶದಲ್ಲಿ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಹತ್ತು, ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದು ಶ್ಲಾಘಿಸಿದರು.</p>.<p>ಜನಧನ್, ತ್ರಿವಳಿ ತಲಾಕ್ ರದ್ದು, ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ, ಆಯುಷ್ಮಾನ್ ಭಾರತ್, ಪ್ರಧಾನಿ ಜನೌಷಧ ಕೇಂದ್ರ, ಹೃದ್ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಸ್ಟಂಟ್ ಅಳವಡಿಕೆ, ರಾಮ ಮಂದಿರ ವಿವಾದ ಬಗೆಹರಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.</p>.<p><strong>ಅನಾರೋಗ್ಯದಿಂದ ಸಾಧ್ಯವಾಗಲಿಲ್ಲ: </strong>ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಲಾಕ್ಡೌನ್ ಸಂದರ್ಭದಲ್ಲಿ ಅನಾರೋಗ್ಯ ಪೀಡಿತನಾಗಿದ್ದೆ. ಅಲ್ಲದೇ, ಈ ಸಂದರ್ಭದಲ್ಲಿ ಹೊರಗೆ ಅಡ್ಡಾಡದಂತೆ ವೈದ್ಯರು ಸಲಹೆ ನೀಡಿದ್ದ ಕಾರಣ ಸಂಕಷ್ಟದ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಯಾವುದೇ ನೆರವು ನೀಡಲು ಸಾಧ್ಯವಾಗಲಿಲ್ಲ. ನೆರವು ನೀಡಲು ನನ್ನ ಬಳಿ ಹಣವಿವೂ ಇರಲಿಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.</p>.<p>ಶೀಘ್ರದಲ್ಲೇ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.</p>.<p>ಶಾಸಕ ಸೋಮಗೌಡ ಪಾಟೀಲ ಸಾಸನೂರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮುಖಂಡರಾದ ವಿಜುಗೌಡ ಪಾಟೀಲ, ಸುರೇಶ ಬಿರಾದಾರ, ವಿಜಯ ಜೋಶಿ, ಚಂದ್ರಶೇಖರ ಕವಟಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸಚಿವ ಸಂಪುಟದಲ್ಲಿ ಇರುವ ಏಕೈಕ ಮಹಿಳೆ ನಾನಾಗಿದ್ದು, ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಚಿವಳಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ಒಂದು ವೇಳೆ ಸಂಪುಟದಿಂದ ಕೈಬಿಡುವ ತೀರ್ಮಾನ ಕೈಗೊಂಡರೂ ಪಕ್ಷದ ಸಾಮಾನ್ಯ ಕಾರ್ಯಕರ್ತಳಾಗಿ ಕೆಲಸ ಮಾಡಲು ಸಿದ್ಧಳಿದ್ದೇನೆ. ಪಕ್ಷದ ತೀರ್ಮಾನಕ್ಕೆ ಬದ್ಧಳಾಗಿದ್ದೇನೆ’ ಎಂದು ಹೇಳಿದರು.</p>.<p><strong>ಉತ್ತಮ ಆಡಳಿತ: </strong>‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಘೋಷಣೆಯಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆರು ವರ್ಷಗಳ ಆಡಳಿತಾವಧಿಯಲ್ಲಿ ದೇಶದಲ್ಲಿ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಹತ್ತು, ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದು ಶ್ಲಾಘಿಸಿದರು.</p>.<p>ಜನಧನ್, ತ್ರಿವಳಿ ತಲಾಕ್ ರದ್ದು, ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ, ಆಯುಷ್ಮಾನ್ ಭಾರತ್, ಪ್ರಧಾನಿ ಜನೌಷಧ ಕೇಂದ್ರ, ಹೃದ್ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಸ್ಟಂಟ್ ಅಳವಡಿಕೆ, ರಾಮ ಮಂದಿರ ವಿವಾದ ಬಗೆಹರಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.</p>.<p><strong>ಅನಾರೋಗ್ಯದಿಂದ ಸಾಧ್ಯವಾಗಲಿಲ್ಲ: </strong>ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಲಾಕ್ಡೌನ್ ಸಂದರ್ಭದಲ್ಲಿ ಅನಾರೋಗ್ಯ ಪೀಡಿತನಾಗಿದ್ದೆ. ಅಲ್ಲದೇ, ಈ ಸಂದರ್ಭದಲ್ಲಿ ಹೊರಗೆ ಅಡ್ಡಾಡದಂತೆ ವೈದ್ಯರು ಸಲಹೆ ನೀಡಿದ್ದ ಕಾರಣ ಸಂಕಷ್ಟದ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಯಾವುದೇ ನೆರವು ನೀಡಲು ಸಾಧ್ಯವಾಗಲಿಲ್ಲ. ನೆರವು ನೀಡಲು ನನ್ನ ಬಳಿ ಹಣವಿವೂ ಇರಲಿಲ್ಲ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.</p>.<p>ಶೀಘ್ರದಲ್ಲೇ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.</p>.<p>ಶಾಸಕ ಸೋಮಗೌಡ ಪಾಟೀಲ ಸಾಸನೂರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮುಖಂಡರಾದ ವಿಜುಗೌಡ ಪಾಟೀಲ, ಸುರೇಶ ಬಿರಾದಾರ, ವಿಜಯ ಜೋಶಿ, ಚಂದ್ರಶೇಖರ ಕವಟಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>