<p><strong>ವಿಜಯಪುರ</strong>: ಕನೇರಿ ಸ್ವಾಮೀಜಿಗಳು ಆಡುಭಾಷೆಯಲ್ಲಿ ಬಾಯಿತಪ್ಪಿ ಆಡಿರುವ ಮಾತನ್ನು ದೀರ್ಘಕ್ಕೆ ಒಯ್ಯಬಾರದು, ಈ ವಿಚಾರ ಇಲ್ಲಿಗೆ ಮುಗಿಸುವುದು ಒಳ್ಳೆಯದು. ಅವರಾಡಿದ ಮಾತನ್ನೇ ಇಟ್ಟುಕೊಂಡು ನಿರ್ಬಂಧ ಹೇರುವುದರಲ್ಲಿ ಅರ್ಥವಿಲ್ಲ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.</p><p>ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಭ್ಯ, ಅಶ್ಲೀಲ ಪದಗಳನ್ನ ಸ್ವಾಮೀಜಿಗಳು, ಮಠಾಧೀಶರು ಸೇರಿದಂತೆ ಯಾರ ಬಾಯಿಂದಲೂ ಬರಬಾರದು ಎಂದರು.</p><p>ಇತ್ತೀಚಿನ ದಿನಗಳಲ್ಲಿ ವೀರಶೈವ-ಲಿಂಗಾಯತ ಎಂದೆಲ್ಲ ಭಿನ್ನಾಭಿಪ್ರಾಯ ಕೇಳಿ ಬರುತ್ತಿರುವುದು ದುರದೃಷ್ಟಕರ. ಲಿಂಗಾಯತ-ವೀರಶೈವ ಬೇರೆ, ಬೇರೆಯಲ್ಲ. ಕಾಯಕ-ದಾಸೋಹ ತತ್ವ ಸಾರಿರುವ ಬಸವಾದಿ ಶರಣರ ಆಶಯ ಈಡೇರಿಸುವಲ್ಲಿ ಎಲ್ಲ ಮಠಾಧೀಶರು ಸೇರಿ ಸಾಮರಸ್ಯದಿಂದ ಹೋಗಬೇಕು ಎಂಬುದು ನನ್ನ ವಿನಂತಿ ಎಂದರು.</p>.ಕನ್ಹೇರಿ ಸ್ವಾಮೀಜಿ ಹೇಳಿಕೆ ಅವಿವೇಕದ ಪರಮಾವಧಿ: ಶಿವಾನಂದ ಸ್ವಾಮೀಜಿ.ವಿಜಯಪುರ ಪ್ರವೇಶ ನಿರ್ಬಂಧ ಪ್ರಶ್ನಿಸಿದ್ದ ಕಾಡಸಿದ್ದೇಶ್ವರ ಸ್ವಾಮೀಜಿ ಅರ್ಜಿ ವಜಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಕನೇರಿ ಸ್ವಾಮೀಜಿಗಳು ಆಡುಭಾಷೆಯಲ್ಲಿ ಬಾಯಿತಪ್ಪಿ ಆಡಿರುವ ಮಾತನ್ನು ದೀರ್ಘಕ್ಕೆ ಒಯ್ಯಬಾರದು, ಈ ವಿಚಾರ ಇಲ್ಲಿಗೆ ಮುಗಿಸುವುದು ಒಳ್ಳೆಯದು. ಅವರಾಡಿದ ಮಾತನ್ನೇ ಇಟ್ಟುಕೊಂಡು ನಿರ್ಬಂಧ ಹೇರುವುದರಲ್ಲಿ ಅರ್ಥವಿಲ್ಲ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.</p><p>ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಭ್ಯ, ಅಶ್ಲೀಲ ಪದಗಳನ್ನ ಸ್ವಾಮೀಜಿಗಳು, ಮಠಾಧೀಶರು ಸೇರಿದಂತೆ ಯಾರ ಬಾಯಿಂದಲೂ ಬರಬಾರದು ಎಂದರು.</p><p>ಇತ್ತೀಚಿನ ದಿನಗಳಲ್ಲಿ ವೀರಶೈವ-ಲಿಂಗಾಯತ ಎಂದೆಲ್ಲ ಭಿನ್ನಾಭಿಪ್ರಾಯ ಕೇಳಿ ಬರುತ್ತಿರುವುದು ದುರದೃಷ್ಟಕರ. ಲಿಂಗಾಯತ-ವೀರಶೈವ ಬೇರೆ, ಬೇರೆಯಲ್ಲ. ಕಾಯಕ-ದಾಸೋಹ ತತ್ವ ಸಾರಿರುವ ಬಸವಾದಿ ಶರಣರ ಆಶಯ ಈಡೇರಿಸುವಲ್ಲಿ ಎಲ್ಲ ಮಠಾಧೀಶರು ಸೇರಿ ಸಾಮರಸ್ಯದಿಂದ ಹೋಗಬೇಕು ಎಂಬುದು ನನ್ನ ವಿನಂತಿ ಎಂದರು.</p>.ಕನ್ಹೇರಿ ಸ್ವಾಮೀಜಿ ಹೇಳಿಕೆ ಅವಿವೇಕದ ಪರಮಾವಧಿ: ಶಿವಾನಂದ ಸ್ವಾಮೀಜಿ.ವಿಜಯಪುರ ಪ್ರವೇಶ ನಿರ್ಬಂಧ ಪ್ರಶ್ನಿಸಿದ್ದ ಕಾಡಸಿದ್ದೇಶ್ವರ ಸ್ವಾಮೀಜಿ ಅರ್ಜಿ ವಜಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>