<p><strong>ವಿಜಯಪುರ: </strong>ಕಾಂಗ್ರೆಸ್ ಮುಖಂಡ ಮಹಾದೇವ ಸಾಹುಕಾರ ಭೈರಗೊಂಡ ಚಲಿಸುತ್ತಿದ್ದ ಕಾರಿಗೆ ಟಿಪ್ಪರ್ನಿಂದ ಡಿಕ್ಕಿ ಹೊಡೆಸಿ, ಗುಂಡಿನ ದಾಳಿ ನಡೆಸಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ಭೈರಗೊಂಡ ಅವರ ಕಾರಿಗೆ ಗುದ್ದಿದ ಟಿಪ್ಪರ್ ಚಾಲಕ ಹಾಗೂ ಮಾಹಿತಿ ನೀಡಿದ ಆರೋಪಿಯನ್ನು ಬಂಧಿಸಿರುವುದಾಗಿಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಗುರುವಾರ ರಾತ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಟಿಪ್ಪರ್ ಚಾಲಕ ಉಮರಾಣಿ ನಾಗಪ್ಪ ಪೀರಗೊಂಡ(28) ಹಾಗೂ ಭೈರಗೊಂಡ ಅವರ ಚಲನವಲನದ ಬಗ್ಗೆ ಮಾಹಿತಿ ನೀಡುತ್ತಿದ್ದ ವಿಜಯಪುರದ ವಿಜಯ ತಾಳಿಕೋಟೆ(27) ಎಂಬುವವರನ್ನು ಬಂಧಿಸಲಾಗಿದೆ ಎಂದು ಹೇಳಿದರು.</p>.<p>ರೌಡಿ ಗ್ಯಾಂಗ್ ಕಟ್ಟಿಕೊಳ್ಳಬೇಕು ಎಂಬ ಉದ್ದೇಶ ಹಾಗೂ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಮಡಿವಾಳ ಹಿರೇಮಠ ಸ್ವಾಮಿ ಎಂಬ ವ್ಯಕ್ತಿ ಈ ಪ್ರಕರಣದ ಕೇಂದ್ರ ಬಿಂದುವಾಗಿದ್ದಾನೆ. ಕಳೆದ ಆರೇಳು ತಿಂಗಳಿಂದ ಈ ಸಂಬಂಧ ಗ್ಯಾಂಗ್ ಕಟ್ಟಿಕೊಂಡಿರುವುದಾಗಿ ತಿಳಿಸಿದರು.</p>.<p>ಧರ್ಮರಾಜ್ ಚಡಚಣನ ಹಳೆಯ ಸಹಚರರು ಸಹ ಈ ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದು ಬಂದಿದೆ. ಕಾತ್ರಾಳ ಗ್ರಾಮದಲ್ಲಿ ನಡೆದ ಸತ್ಸಂಗ ಸಂದರ್ಭದಲ್ಲಿಯೂ ಮಹಾದೇವ ಸಾಹುಕಾರ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದ್ದರು. ಆದರೆ, ಕಾರ್ಯಕ್ರಮ ರದ್ದಾದ ಕಾರಣ ಸಾಧ್ಯವಾಗಲಿಲ್ಲ ಎಂದರು.</p>.<p>ಪ್ರಕರಣದ ಮುಖ್ಯ ಆರೋಪಿ ಮಡಿವಾಳ ಹಿರೇಮಠ ಸ್ವಾಮಿ ಬಂಧನಕ್ಕೆ ಕಾರ್ಯಾಚರಣೆ ನಡೆದಿದೆ ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಕಾಂಗ್ರೆಸ್ ಮುಖಂಡ ಮಹಾದೇವ ಸಾಹುಕಾರ ಭೈರಗೊಂಡ ಚಲಿಸುತ್ತಿದ್ದ ಕಾರಿಗೆ ಟಿಪ್ಪರ್ನಿಂದ ಡಿಕ್ಕಿ ಹೊಡೆಸಿ, ಗುಂಡಿನ ದಾಳಿ ನಡೆಸಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ಭೈರಗೊಂಡ ಅವರ ಕಾರಿಗೆ ಗುದ್ದಿದ ಟಿಪ್ಪರ್ ಚಾಲಕ ಹಾಗೂ ಮಾಹಿತಿ ನೀಡಿದ ಆರೋಪಿಯನ್ನು ಬಂಧಿಸಿರುವುದಾಗಿಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಗುರುವಾರ ರಾತ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಟಿಪ್ಪರ್ ಚಾಲಕ ಉಮರಾಣಿ ನಾಗಪ್ಪ ಪೀರಗೊಂಡ(28) ಹಾಗೂ ಭೈರಗೊಂಡ ಅವರ ಚಲನವಲನದ ಬಗ್ಗೆ ಮಾಹಿತಿ ನೀಡುತ್ತಿದ್ದ ವಿಜಯಪುರದ ವಿಜಯ ತಾಳಿಕೋಟೆ(27) ಎಂಬುವವರನ್ನು ಬಂಧಿಸಲಾಗಿದೆ ಎಂದು ಹೇಳಿದರು.</p>.<p>ರೌಡಿ ಗ್ಯಾಂಗ್ ಕಟ್ಟಿಕೊಳ್ಳಬೇಕು ಎಂಬ ಉದ್ದೇಶ ಹಾಗೂ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಮಡಿವಾಳ ಹಿರೇಮಠ ಸ್ವಾಮಿ ಎಂಬ ವ್ಯಕ್ತಿ ಈ ಪ್ರಕರಣದ ಕೇಂದ್ರ ಬಿಂದುವಾಗಿದ್ದಾನೆ. ಕಳೆದ ಆರೇಳು ತಿಂಗಳಿಂದ ಈ ಸಂಬಂಧ ಗ್ಯಾಂಗ್ ಕಟ್ಟಿಕೊಂಡಿರುವುದಾಗಿ ತಿಳಿಸಿದರು.</p>.<p>ಧರ್ಮರಾಜ್ ಚಡಚಣನ ಹಳೆಯ ಸಹಚರರು ಸಹ ಈ ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದು ಬಂದಿದೆ. ಕಾತ್ರಾಳ ಗ್ರಾಮದಲ್ಲಿ ನಡೆದ ಸತ್ಸಂಗ ಸಂದರ್ಭದಲ್ಲಿಯೂ ಮಹಾದೇವ ಸಾಹುಕಾರ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಿದ್ದರು. ಆದರೆ, ಕಾರ್ಯಕ್ರಮ ರದ್ದಾದ ಕಾರಣ ಸಾಧ್ಯವಾಗಲಿಲ್ಲ ಎಂದರು.</p>.<p>ಪ್ರಕರಣದ ಮುಖ್ಯ ಆರೋಪಿ ಮಡಿವಾಳ ಹಿರೇಮಠ ಸ್ವಾಮಿ ಬಂಧನಕ್ಕೆ ಕಾರ್ಯಾಚರಣೆ ನಡೆದಿದೆ ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>