<p><strong>ವಿಜಯಪುರ</strong>: ಗೋಳಗುಮ್ಮಟ ಪೊಲೀಸ್ ಠಾಣೆ ವ್ಯಾಪ್ತಿಯ ವಡ್ಡರ ಒಣಿಯಲ್ಲಿ ಶುಕ್ರವಾರ ಸಂಜೆ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದಾರೆ.</p><p>ಘಟನೆಯಲ್ಲಿ ಶೋಯಬ್ ಕಕ್ಕಳಮೇಲಿ ಎಂಬುವವರ ಕಿವಿಗೆ ಗುಂಡು ತಾಗಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಮೂರು ಬೈಕುಗಳಲ್ಲಿ ಬಂದು ದುಷ್ಕರ್ಮಿಗಳು ಸ್ನೇಹಿತರೊಂದಿಗೆ ಹೋಗುತ್ತಿದ್ದ ಶೋಯಬ್ ಕಕ್ಕಳಮೇಲಿ ಮೇಲೆ ಎರಡು ಸುತ್ತು ಗುಂಡಿನ ದಾಳಿ ನಡೆಸಿ, ಬಳಿಕ ಸ್ಥಳದಲ್ಲೇ ಬೈಕುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.</p>.<p>ಮೇ 6ರಂದು ಮಹಾನಗರ ಪಾಲಿಕೆ ಸದಸ್ಯೆ ನಿಶಾತಾ ನದಾಫ್ ಅವರ ಪತಿ ಹೈದರ್ ನದಾಫ್ ಎಂಬುವವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಹೈದರ್ ಸಹಚರರು ಇದೀಗ ಪ್ರತಿಕಾರವಾಗಿ ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.</p><p>‘ಹೈದರ್ ನದಾಫ್ ಸಹೋದರ ಮೊಹಮ್ಮದ್ ನದಾಫ್ ಹಾಗೂ ಚಾರ್ಲೆ ಸಮೀರ್ ಗುಂಡಿನ ದಾಳಿ ಮಾಡಿದ್ದಾರೆ‘ ಎಂದು ಗಾಯಗೊಂಡಿರುವ ಶೊಯೇಬ್ ಕಕ್ಕಳಮೇಲಿ ಜೊತೆಗಿದ್ದ ಅಮನ್ವುಲ್ಲಾ ಲೋಣಿ ಪೊಲೀಸರ ಬಳಿ ಹೇಳಿಕೆ ನೀಡಿದ್ದಾನೆ.</p><p>ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಶೋಯಬ್ ಕಕ್ಕಳಮೇಲಿ ಅವರು ಹೈದರ್ ನದಾಫ್ ಹತ್ಯೆಯ ಮುಖ್ಯ ಆರೋಪಿಯಾದ ಶೇಕ್ ಅಹ್ಮದ ಮೋದಿ ಅಳಿಯನಾಗಿದ್ದಾನೆ.</p><p>ಹೈದರ್ ನದಾಫ್ ಹತ್ಯೆ ಪ್ರಕರಣದಲ್ಲಿ ಶೇಕ್ ಅಹ್ಮದ ಮೋದಿ ಸಹಿತ ಏಳು ಆರೋಪಿಗಳ ಬಂಧನವಾಗಿತ್ತು. ಈ ಪೈಕಿ ನಾಲ್ವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. </p><p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಗೋಳಗುಮ್ಮಟ ಪೊಲೀಸ್ ಠಾಣೆ ವ್ಯಾಪ್ತಿಯ ವಡ್ಡರ ಒಣಿಯಲ್ಲಿ ಶುಕ್ರವಾರ ಸಂಜೆ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದಾರೆ.</p><p>ಘಟನೆಯಲ್ಲಿ ಶೋಯಬ್ ಕಕ್ಕಳಮೇಲಿ ಎಂಬುವವರ ಕಿವಿಗೆ ಗುಂಡು ತಾಗಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಮೂರು ಬೈಕುಗಳಲ್ಲಿ ಬಂದು ದುಷ್ಕರ್ಮಿಗಳು ಸ್ನೇಹಿತರೊಂದಿಗೆ ಹೋಗುತ್ತಿದ್ದ ಶೋಯಬ್ ಕಕ್ಕಳಮೇಲಿ ಮೇಲೆ ಎರಡು ಸುತ್ತು ಗುಂಡಿನ ದಾಳಿ ನಡೆಸಿ, ಬಳಿಕ ಸ್ಥಳದಲ್ಲೇ ಬೈಕುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.</p>.<p>ಮೇ 6ರಂದು ಮಹಾನಗರ ಪಾಲಿಕೆ ಸದಸ್ಯೆ ನಿಶಾತಾ ನದಾಫ್ ಅವರ ಪತಿ ಹೈದರ್ ನದಾಫ್ ಎಂಬುವವರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು. ಹೈದರ್ ಸಹಚರರು ಇದೀಗ ಪ್ರತಿಕಾರವಾಗಿ ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.</p><p>‘ಹೈದರ್ ನದಾಫ್ ಸಹೋದರ ಮೊಹಮ್ಮದ್ ನದಾಫ್ ಹಾಗೂ ಚಾರ್ಲೆ ಸಮೀರ್ ಗುಂಡಿನ ದಾಳಿ ಮಾಡಿದ್ದಾರೆ‘ ಎಂದು ಗಾಯಗೊಂಡಿರುವ ಶೊಯೇಬ್ ಕಕ್ಕಳಮೇಲಿ ಜೊತೆಗಿದ್ದ ಅಮನ್ವುಲ್ಲಾ ಲೋಣಿ ಪೊಲೀಸರ ಬಳಿ ಹೇಳಿಕೆ ನೀಡಿದ್ದಾನೆ.</p><p>ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಶೋಯಬ್ ಕಕ್ಕಳಮೇಲಿ ಅವರು ಹೈದರ್ ನದಾಫ್ ಹತ್ಯೆಯ ಮುಖ್ಯ ಆರೋಪಿಯಾದ ಶೇಕ್ ಅಹ್ಮದ ಮೋದಿ ಅಳಿಯನಾಗಿದ್ದಾನೆ.</p><p>ಹೈದರ್ ನದಾಫ್ ಹತ್ಯೆ ಪ್ರಕರಣದಲ್ಲಿ ಶೇಕ್ ಅಹ್ಮದ ಮೋದಿ ಸಹಿತ ಏಳು ಆರೋಪಿಗಳ ಬಂಧನವಾಗಿತ್ತು. ಈ ಪೈಕಿ ನಾಲ್ವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. </p><p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>