<p><strong>ಮುದ್ದೇಬಿಹಾಳ</strong>: ರಂಜಾನ್ ಮಾಸದಲ್ಲಿ ಈದ್ ಸೌಹಾರ್ದ ಕೂಟ ಏರ್ಪಡಿಸಿದಂತೆ ಈ ಬಾರಿ ಮನಿಯಾರ ಚಾರಿಟಬಲ್ ಟ್ರಸ್ಟ್ನಿಂದ ಶ್ರಾವಣ ಮಾಸದ ಸೌಹಾರ್ದ ಕೂಟ ಹಮ್ಮಿಕೊಂಡಿದ್ದೇವೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿ, ‘ಎಲ್ಲ ಧರ್ಮೀಯರಿಗೂ ಕಣ್ಣಿನ ಉಚಿತ ತಪಾಸಣಾ ಶಿಬಿರ, ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಟ್ರಸ್ಟ್ನಿಂದಲೇ ಚಿಕಿತ್ಸೆಗೆ ಕಳಿಸಿಕೊಡುವ ಕಾರ್ಯ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಆ.9ರಂದು ತಾಳಿಕೋಟೆಯಲ್ಲಿ , 10ರಂದು ಮುದ್ದೇಬಿಹಾಳ ತಾಲ್ಲೂಕು, ನಾಲತವಾಡ ಪಟ್ಟಣದ ಜನತೆಗೆ ಆಯಾ ಭಾಗದಲ್ಲಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ತಪಾಸಣಾ ಶಿಬಿರ ನಡೆಸಲಾಗುವುದು. 11ರಿಂದ 14ರವರೆಗೆ ವಿಜಯಪುರದ ಪ್ರಭುಗೌಡ ಲಿಂಗದಳ್ಳಿ ಅವರ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘20ರಂದು ಬಿದರಕುಂದಿಯಲ್ಲಿರುವ ಮನಿಯಾರ ಅವರ ಶಾಲಾ ಕಟ್ಟಡದಲ್ಲಿ ಶ್ರಾವಣ ಮಾಸದ ಸೌಹಾರ್ದ ಕೂಟ ಜರುಗಲಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿಗಳಿಗೆ ಅಲ್ಲಿ ಔಷಧ ವಿತರಣೆ ಮಾಡಲಾಗುತ್ತದೆ’ ಎಂದು ತಿಳಿಸಿದರು.</p>.<p>ಆಸಕ್ತರು 81232 77124 ಸಂಖ್ಯೆ ಸಂಪರ್ಕಿಸಬಹುದು.</p>.<p>ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಮುಖಂಡರಾದ ಹಾಜಿ ಮಹೆಬೂಬ ಹಡಲಗೇರಿ, ರೂಪಸಿಂಗ ಲೋಣಾರಿ, ದಾದಾ ಎತ್ತಿನಮನಿ, ಐ.ಎಲ್. ಮಮದಾಪೂರ, ಫಯಾಜ ಸಾಸನೂರ, ಎಂ.ಎಲ್.ಗೋಲಂದಾಜ, ಅಫ್ತಾಬ ಮನಿಯಾರ, ಹಾಜಿಮಲಂಗ ಯಕೀನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದ್ದೇಬಿಹಾಳ</strong>: ರಂಜಾನ್ ಮಾಸದಲ್ಲಿ ಈದ್ ಸೌಹಾರ್ದ ಕೂಟ ಏರ್ಪಡಿಸಿದಂತೆ ಈ ಬಾರಿ ಮನಿಯಾರ ಚಾರಿಟಬಲ್ ಟ್ರಸ್ಟ್ನಿಂದ ಶ್ರಾವಣ ಮಾಸದ ಸೌಹಾರ್ದ ಕೂಟ ಹಮ್ಮಿಕೊಂಡಿದ್ದೇವೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿ, ‘ಎಲ್ಲ ಧರ್ಮೀಯರಿಗೂ ಕಣ್ಣಿನ ಉಚಿತ ತಪಾಸಣಾ ಶಿಬಿರ, ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಟ್ರಸ್ಟ್ನಿಂದಲೇ ಚಿಕಿತ್ಸೆಗೆ ಕಳಿಸಿಕೊಡುವ ಕಾರ್ಯ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಆ.9ರಂದು ತಾಳಿಕೋಟೆಯಲ್ಲಿ , 10ರಂದು ಮುದ್ದೇಬಿಹಾಳ ತಾಲ್ಲೂಕು, ನಾಲತವಾಡ ಪಟ್ಟಣದ ಜನತೆಗೆ ಆಯಾ ಭಾಗದಲ್ಲಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ತಪಾಸಣಾ ಶಿಬಿರ ನಡೆಸಲಾಗುವುದು. 11ರಿಂದ 14ರವರೆಗೆ ವಿಜಯಪುರದ ಪ್ರಭುಗೌಡ ಲಿಂಗದಳ್ಳಿ ಅವರ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘20ರಂದು ಬಿದರಕುಂದಿಯಲ್ಲಿರುವ ಮನಿಯಾರ ಅವರ ಶಾಲಾ ಕಟ್ಟಡದಲ್ಲಿ ಶ್ರಾವಣ ಮಾಸದ ಸೌಹಾರ್ದ ಕೂಟ ಜರುಗಲಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿಗಳಿಗೆ ಅಲ್ಲಿ ಔಷಧ ವಿತರಣೆ ಮಾಡಲಾಗುತ್ತದೆ’ ಎಂದು ತಿಳಿಸಿದರು.</p>.<p>ಆಸಕ್ತರು 81232 77124 ಸಂಖ್ಯೆ ಸಂಪರ್ಕಿಸಬಹುದು.</p>.<p>ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಮುಖಂಡರಾದ ಹಾಜಿ ಮಹೆಬೂಬ ಹಡಲಗೇರಿ, ರೂಪಸಿಂಗ ಲೋಣಾರಿ, ದಾದಾ ಎತ್ತಿನಮನಿ, ಐ.ಎಲ್. ಮಮದಾಪೂರ, ಫಯಾಜ ಸಾಸನೂರ, ಎಂ.ಎಲ್.ಗೋಲಂದಾಜ, ಅಫ್ತಾಬ ಮನಿಯಾರ, ಹಾಜಿಮಲಂಗ ಯಕೀನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>