<p><strong>ಚಡಚಣ:</strong> ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಬಂದ್ ಮಾಡುವಂತೆ ಸರ್ಕಾರವು ಆದೇಶಿಸಿರುವುದು ಖಂಡನೀಯ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಆಯೋಜಿಸಲಾದ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ರಾಜ್ಯದ 200ಕ್ಕೂ ಅಧಿಕ ಜನೌಷಧ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಘಟಕ, ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳ ಆವರಣಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಈ ಕೇಂದ್ರಗಳು ಸಾಮಾನ್ಯ ಬಡ ಜನತೆಗೆ ಅತ್ಯಂತ ರಿಯಾಯಿತಿ ದರಗಳಲ್ಲಿಔಷಧಗಳನ್ನು ಪೂರೈಕೆ ಮಾಡುತ್ತಿದ್ದವು. ಜನವಿರೋಧಿ ಸರ್ಕಾರದ ನೀತಿಯಿಂದಾಗಿ ಬಡ, ಮಧ್ಯಮ ವರ್ಗದ ಜನತೆಗೆ ಸಂಕಟ ತಂದೊಡ್ಡಿದೆ ಎಂದರು.</p>.<p>ಕೂಡಲೇ ಈ ನಿರ್ಧಾರವನ್ನು ಮರು ಪರಿಶೀಲಿಸಿ, ಈ ಆದೇಶವನ್ನು ಹಿಂಪಡೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ರಾಜ್ಯದ ಆರೋಗ್ಯ ಸಚಿವ ದಿನೇಶ ಗುಂಡುರಾವ ಅವರಿಗೆ ಸಂಸದ ಜಿಗಜಿಣಗಿ ಒತ್ತಾಯಿಸಿದರು.</p>.<p>ಬಿಜೆಪಿ ಮಂಡಳ ಅಧ್ಯಕ್ಷ ಕಾಂತುಗೌಡ ಪಾಟೀಲ, ಮುಖಂಡ ಸಂಜೀವ ಐಹೊಳಿ, ಮಹೇಂದ್ರಕುಮಾರ ನಾಯಕ್, ಚಿದಾನಂದ ಚಲುವಾದಿ, ಮಲಗೊಂಡ ಪಾಟೀಲ, ಮಲ್ಲು ಧೋತ್ರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಡಚಣ:</strong> ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಬಂದ್ ಮಾಡುವಂತೆ ಸರ್ಕಾರವು ಆದೇಶಿಸಿರುವುದು ಖಂಡನೀಯ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.</p>.<p>ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಆಯೋಜಿಸಲಾದ ಪತ್ರಿಕಾಗೊಷ್ಠಿಯಲ್ಲಿ ಅವರು ಮಾತನಾಡಿದರು.</p>.<p>ರಾಜ್ಯದ 200ಕ್ಕೂ ಅಧಿಕ ಜನೌಷಧ ಕೇಂದ್ರಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಘಟಕ, ತಾಲ್ಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳ ಆವರಣಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಈ ಕೇಂದ್ರಗಳು ಸಾಮಾನ್ಯ ಬಡ ಜನತೆಗೆ ಅತ್ಯಂತ ರಿಯಾಯಿತಿ ದರಗಳಲ್ಲಿಔಷಧಗಳನ್ನು ಪೂರೈಕೆ ಮಾಡುತ್ತಿದ್ದವು. ಜನವಿರೋಧಿ ಸರ್ಕಾರದ ನೀತಿಯಿಂದಾಗಿ ಬಡ, ಮಧ್ಯಮ ವರ್ಗದ ಜನತೆಗೆ ಸಂಕಟ ತಂದೊಡ್ಡಿದೆ ಎಂದರು.</p>.<p>ಕೂಡಲೇ ಈ ನಿರ್ಧಾರವನ್ನು ಮರು ಪರಿಶೀಲಿಸಿ, ಈ ಆದೇಶವನ್ನು ಹಿಂಪಡೆದು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ರಾಜ್ಯದ ಆರೋಗ್ಯ ಸಚಿವ ದಿನೇಶ ಗುಂಡುರಾವ ಅವರಿಗೆ ಸಂಸದ ಜಿಗಜಿಣಗಿ ಒತ್ತಾಯಿಸಿದರು.</p>.<p>ಬಿಜೆಪಿ ಮಂಡಳ ಅಧ್ಯಕ್ಷ ಕಾಂತುಗೌಡ ಪಾಟೀಲ, ಮುಖಂಡ ಸಂಜೀವ ಐಹೊಳಿ, ಮಹೇಂದ್ರಕುಮಾರ ನಾಯಕ್, ಚಿದಾನಂದ ಚಲುವಾದಿ, ಮಲಗೊಂಡ ಪಾಟೀಲ, ಮಲ್ಲು ಧೋತ್ರೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>