ವಿಜಯಪುರ: ಅನಾರೋಗ್ಯದಿಂದ ನಿತ್ರಾಣವಾಗಿರುವ ಇಲ್ಲಿನ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ, ಶಾಸಕರಾದ ಯಶವಂತ ರಾಯಗೌಡ ಪಾಟೀಲ, ಶಿವಾನಂದ ಪಾಟೀಲ ಮತ್ತು ಕಾಂಗ್ರೆಸ್ ಮುಖಂಡರು ಭೇಟಿಯಾಗಿ, ಆರೋಗ್ಯ ವಿಚಾರಿಸಿದರು.