<p><strong>ಸಿಂದಗಿ</strong>: ‘ಗ್ರಾಮಗಳ ಏಳ್ಗೆಯೇ ಮತಕ್ಷೇತ್ರದ ಸಮಗ್ರ ಅಭಿವೃದ್ಧಿ, ನನ್ನ ಮೂಲಮಂತ್ರ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ತಾಲ್ಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹25 ಲಕ್ಷ ವೆಚ್ಚದಲ್ಲಿ ಲಕ್ಷ್ಮಿ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣ, ₹65 ಲಕ್ಷ ವೆಚ್ಚದ ಆರೋಗ್ಯ ಇಲಾಖೆಯ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಆರೋಗ್ಯ ಕೇಂದ್ರದ ಕಟ್ಟಡ, ಸಮುದಾಯ ಭವನ ನಿರ್ಮಾಣ ಕುರಿತು ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಲಿದೆ. ಅಭಿವೃದ್ಧಿ ಕಾಮಗಾರಿಗಳನ್ನು ಹಂತ, ಹಂತವಾಗಿ ಪೂರ್ಣಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಗಾಂಧೀಜಿ ಅವರು ಕಂಡ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸುವಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮಗಳ ಸಬಲೀಕರಣದಲ್ಲಿ ರಾಜ್ಯವು ದೇಶಕ್ಕೇ ಮಾದರಿಯಾಗಿದೆ’ ಎಂದರು.</p>.<p>ಪ್ರಮುಖರಾದ ವಿಜುಗೌಡ ಪಾಟೀಲ, ವಿಶ್ವನಾಥ ಪಾಟೀಲ, ದೊಡ್ಡಪ್ಪ ಮಂಗೊಂಡಿ, ಕಂಠೆಪ್ಪ ಕಲ್ಲೂರ, ಶಿವಶಂಕರ ನಾಗಠಾಣ, ಯಮನಪ್ಪ ಚೌಧರಿ, ದಯಾನಂದ ಕಲ್ಲೂರ, ಶಂಕರ ಬಗಲಿ, ಭಾಗಣ್ಣ ನಾಗಠಾಣ, ಸಿದ್ದಣ್ಣ ಚೌಧರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-26-151850532</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ</strong>: ‘ಗ್ರಾಮಗಳ ಏಳ್ಗೆಯೇ ಮತಕ್ಷೇತ್ರದ ಸಮಗ್ರ ಅಭಿವೃದ್ಧಿ, ನನ್ನ ಮೂಲಮಂತ್ರ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ತಾಲ್ಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹25 ಲಕ್ಷ ವೆಚ್ಚದಲ್ಲಿ ಲಕ್ಷ್ಮಿ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣ, ₹65 ಲಕ್ಷ ವೆಚ್ಚದ ಆರೋಗ್ಯ ಇಲಾಖೆಯ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಆರೋಗ್ಯ ಕೇಂದ್ರದ ಕಟ್ಟಡ, ಸಮುದಾಯ ಭವನ ನಿರ್ಮಾಣ ಕುರಿತು ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಲಿದೆ. ಅಭಿವೃದ್ಧಿ ಕಾಮಗಾರಿಗಳನ್ನು ಹಂತ, ಹಂತವಾಗಿ ಪೂರ್ಣಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>‘ಗಾಂಧೀಜಿ ಅವರು ಕಂಡ ಗ್ರಾಮ ಸ್ವರಾಜ್ಯದ ಕನಸನ್ನು ನನಸಾಗಿಸುವಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮಗಳ ಸಬಲೀಕರಣದಲ್ಲಿ ರಾಜ್ಯವು ದೇಶಕ್ಕೇ ಮಾದರಿಯಾಗಿದೆ’ ಎಂದರು.</p>.<p>ಪ್ರಮುಖರಾದ ವಿಜುಗೌಡ ಪಾಟೀಲ, ವಿಶ್ವನಾಥ ಪಾಟೀಲ, ದೊಡ್ಡಪ್ಪ ಮಂಗೊಂಡಿ, ಕಂಠೆಪ್ಪ ಕಲ್ಲೂರ, ಶಿವಶಂಕರ ನಾಗಠಾಣ, ಯಮನಪ್ಪ ಚೌಧರಿ, ದಯಾನಂದ ಕಲ್ಲೂರ, ಶಂಕರ ಬಗಲಿ, ಭಾಗಣ್ಣ ನಾಗಠಾಣ, ಸಿದ್ದಣ್ಣ ಚೌಧರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-26-151850532</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>