<p>ಸಿಂದಗಿ: ‘ಬಂದಾಳ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಮದಿಂದ ಸಿಂದಗಿ ನಗರಕ್ಕೆ ಹೋಗುವ ರಸ್ತೆಗೆ ಅಡ್ಡಲಾಗಿ ಹಳ್ಳಕ್ಕೆ ಸೇತುವೆ ನಿರ್ಮಾಣಕ್ಕಾಗಿ ಸಣ್ಣ ನೀರಾವರಿ ಇಲಾಖೆ ₹1.81 ಕೋಟಿ ಅನುದಾನ ಬಿಡುಗಡೆಗೊಳಿಸಿದೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ತಾಲ್ಲೂಕಿನ ಬಂದಾಳ ಗ್ರಾಮದಲ್ಲಿ ಸೋಮವಾರ ಸಂಜೆ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಗ್ರಾಮೀಣ ಏಳ್ಗೆಯೇ ದೇಶದ ನಿಜವಾದ ಅಭಿವೃದ್ಧಿಯಾಗಿದೆ. ಗುತ್ತಿಗೆದಾರರು, ಸರ್ಕಾರದ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಗುಣಮಟ್ಟದ ಕಾಮಗಾರಿಯಾಗುವಂತೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ದಿಸೆಯಲ್ಲಿ ಸಾರ್ವಜನಿಕರು ಕಳಪೆ ಕಾಮಗಾರಿ ನಡೆಯದಂತೆ ನೋಡಿಕೊಳ್ಳಬೇಕು’ ಎಂದರು.</p>.<p>ಪ್ರಥಮ ದರ್ಜೆ ಗುತ್ತಿಗೆದಾರ ನಾರಾಯಣ ಕುಲಕರ್ಣಿ, ಮುತ್ತು ಮುಂಡೇವಾಡಗಿ, ಬಸಯ್ಯ ಹಿರೇಮಠ, ವಿ.ಬಿ.ಕುರಡೆ, ಕುಮಾರ ದೇಸಾಯಿ, ಷಣ್ಮುಖಯ್ಯ ಹಿರೇಮಠ, ದುಂಡಪ್ಪ ಬಿರಾದಾರ, ದಯಾನಂದ ಹಿರೇಮಠ, ಧರ್ಮರಾಜ ಬಡಾನೂರ, ಗೊಲ್ಲಾಳಪ್ಪ ನಾಯ್ಕೋಡಿ, ಶರಣಪ್ಪ ಜಮಾದಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-26-896968988</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂದಗಿ: ‘ಬಂದಾಳ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಮದಿಂದ ಸಿಂದಗಿ ನಗರಕ್ಕೆ ಹೋಗುವ ರಸ್ತೆಗೆ ಅಡ್ಡಲಾಗಿ ಹಳ್ಳಕ್ಕೆ ಸೇತುವೆ ನಿರ್ಮಾಣಕ್ಕಾಗಿ ಸಣ್ಣ ನೀರಾವರಿ ಇಲಾಖೆ ₹1.81 ಕೋಟಿ ಅನುದಾನ ಬಿಡುಗಡೆಗೊಳಿಸಿದೆ’ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ತಾಲ್ಲೂಕಿನ ಬಂದಾಳ ಗ್ರಾಮದಲ್ಲಿ ಸೋಮವಾರ ಸಂಜೆ ಸೇತುವೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಗ್ರಾಮೀಣ ಏಳ್ಗೆಯೇ ದೇಶದ ನಿಜವಾದ ಅಭಿವೃದ್ಧಿಯಾಗಿದೆ. ಗುತ್ತಿಗೆದಾರರು, ಸರ್ಕಾರದ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಗುಣಮಟ್ಟದ ಕಾಮಗಾರಿಯಾಗುವಂತೆ ಹೆಚ್ಚಿನ ಕಾಳಜಿ ವಹಿಸಬೇಕು. ಈ ದಿಸೆಯಲ್ಲಿ ಸಾರ್ವಜನಿಕರು ಕಳಪೆ ಕಾಮಗಾರಿ ನಡೆಯದಂತೆ ನೋಡಿಕೊಳ್ಳಬೇಕು’ ಎಂದರು.</p>.<p>ಪ್ರಥಮ ದರ್ಜೆ ಗುತ್ತಿಗೆದಾರ ನಾರಾಯಣ ಕುಲಕರ್ಣಿ, ಮುತ್ತು ಮುಂಡೇವಾಡಗಿ, ಬಸಯ್ಯ ಹಿರೇಮಠ, ವಿ.ಬಿ.ಕುರಡೆ, ಕುಮಾರ ದೇಸಾಯಿ, ಷಣ್ಮುಖಯ್ಯ ಹಿರೇಮಠ, ದುಂಡಪ್ಪ ಬಿರಾದಾರ, ದಯಾನಂದ ಹಿರೇಮಠ, ಧರ್ಮರಾಜ ಬಡಾನೂರ, ಗೊಲ್ಲಾಳಪ್ಪ ನಾಯ್ಕೋಡಿ, ಶರಣಪ್ಪ ಜಮಾದಾರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-26-896968988</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>