ಜಿಲ್ಲೆಯ ಎಂಟು ವಿಧಾನಸಭಾ ಮತಕ್ಷೇತ್ರಗಳಲ್ಲಿ ನಾಗಠಾಣ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ವಿಜಯಪುರ ನಗರ ಕ್ಷೇತ್ರ ಅಲ್ಪಸಂಖ್ಯಾತರಿಗೆ ಹಾಗೂ ಸಿಂದಗಿ ಕ್ಷೇತ್ರ ಹಿಂದುಳಿದ ವರ್ಗಕ್ಕೆ, ಉಳಿದ ಐದು ಕ್ಷೇತ್ರಗಳಿಗೆ ಸಾಮಾನ್ಯ ವರ್ಗಕ್ಕೆ ಸಾಮಾಜಿಕ ನ್ಯಾಯದಡಿಯಲ್ಲಿ ಟಿಕೆಟ್ ನೀಡುತ್ತಾ ಬರಲಾಗಿದೆ. ಈಗ ಲಿಂಗಾಯತ ವರ್ಗಕ್ಕೆ ಆದ್ಯತೆ ನೀಡಿ ಹಿಂದುಳಿದ ವರ್ಗಗಳನ್ನು ಕಡೆಗಣಿಸಿರುವುದು ಮುಂದಿನ ಚುನಾವಣೆಗಳಲ್ಲಿ ಪಕ್ಷಕ್ಕೆ ಮಾರಕವಾಗಲಿದೆ ಎಂದು ಹೇಳಿದ್ದಾರೆ.