<p><strong>ಸಿಂದಗಿ:</strong> ಕಂದಾಯ ಇಲಾಖೆಯ 1 ಎಕರೆ 14 ಗುಂಟೆ ಪ್ರದೇಶದಲ್ಲಿನ ಹಳೆಯ ತಹಶೀಲ್ದಾರ್ ಕಾರ್ಯಾಲಯ ಸ್ಥಳಾಂತರಗೊಂಡ ನಂತರ ಖಾಲಿ ಉಳಿದುಕೊಂಡಿತ್ತು. ಈ ಜಾಗೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದಾಗಿ ಸರ್ಕಾರ ಮಟ್ಟದಲ್ಲಿ ಈ ಪ್ರದೇಶವನ್ನು ಪುರಸಭೆಗೆ ಹಸ್ತಾಂತರಿಸಿಕೊಂಡು ಇಲ್ಲಿ ₹ 27.68 ಕೋಟಿ ವೆಚ್ಚದಲ್ಲಿ 132 ಮಳಿಗೆಗಳ ನಿರ್ಮಾಣ ಮಾಡುವ ಪ್ರಸ್ತಾವ ಸಲ್ಲಿಸಲಾಗಿತ್ತು. ಈಗ ಪ್ರಥಮ ಹಂತದಲ್ಲಿ 30 ಮಳಿಗೆಗಳ ನಿರ್ಮಾಣಕ್ಕಾಗಿ ₹ 5 ಕೋಟಿ ಅನುದಾನ ಬಿಡುಗಡೆಗೊಂಡಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ಪಟ್ಟಣದ ಕಂದಾಯ ಇಲಾಖೆಯ ಹಳೆಯ ತಹಶೀಲ್ದಾರ್ ಕಾರ್ಯಾಲಯದ ಪ್ರದೇಶದಲ್ಲಿ ಬುಧವಾರ ಮೆಗಾ ಮಾರ್ಕೆಟ್ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.</p>.<p>ಇನ್ನು ಒಂದೆರಡು ತಿಂಗಳಲ್ಲಿ ಇನ್ನೂ ₹ 10 ಕೋಟಿ ಬಿಡುಗಡೆಗೊಳಿಸುವ ಮೂಲಕ ಎಲ್ಲರ ಕಲ್ಪನೆಗೂ ಮೀರಿ ಸುಸಜ್ಜಿತವಾದ ಮೆಗಾ ಮಾರ್ಕೆಟ್ ಅನ್ನು ನನ್ನ ಅವಧಿಯಲ್ಲಿ ನಿರ್ಮಾಣ ಮಾಡುವುದು ನನ್ನ ಸಂಕಲ್ಪ. ಈ ಪ್ರದೇಶದ ಸುತ್ತ ಹಲವಾರು ವರ್ಷಗಳಿಂದ ಸಣ್ಣ, ಸಣ್ಣ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇದೇ ಮಾರ್ಕೆಟ್ನಲ್ಲಿ ಅವರಿಗೆ ಕಡಿಮೆ ದರದ ಬಾಡಿಗೆಯಲ್ಲಿ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಸರ್ಕಾರದಲ್ಲಿ ದುಡ್ಡೆ ಇಲ್ಲ ಎಲ್ಲ ಹಣ ಗ್ಯಾರಂಟಿಗಾಗಿ ಬಳಕೆಯಾಗಿದ್ದರಿಂದ ಅಭಿವೃದ್ಧಿ ಆಗುತ್ತಿಲ್ಲ ಎಂದು ವಿರೋದಪಕ್ಷ ವ್ಯವಸ್ಥಿತವಾಗಿ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದೆ. ಅಭಿವೃದ್ಧಿಗಾಗಿ ಸರ್ಕಾರದಲ್ಲಿ ಸಾಕಷ್ಟು ಹಣವಿದೆ. ರಾಜಕಾರಣದಲ್ಲಿ ಟೀಕೆ-ಟಿಪ್ಪಣೆ ಸಹಜ ಅದಕ್ಕೆ ಸ್ವಾಗತಿಸುವೆ. ಅಭಿವೃದ್ಧಿಯೇ ನನ್ನ ಗುರಿ ಎಂದು ವಿರೋದಪಕ್ಷದ ಟೀಕೆಗೆ ಉತ್ತರಿಸಿದರು.</p>.<p>ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ.ಶಾಂತವೀರ ಮನಗೂಳಿ ಮಾತನಾಡಿ, ಸರ್ಕಾರವನ್ನು ಅಭಿನಂದಿಸಿದರು. ಪುರಸಭೆ ಸದಸ್ಯ ಸಾಯಬಣ್ಣ ಪುರದಾಳ ಪ್ರಾಸ್ತಾವಿಕವಾಗಿ ಮಾತನಾಡಿದರು.<br> ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ ಒಳಗೊಂಡಂತೆ ಸದಸ್ಯರು, ಆಶ್ರಯ ಸಮಿತಿ ಸದಸ್ಯರು, ಪುರಸಭೆ ಅಧಿಕಾರಿ ವರ್ಗ ವೇದಿಕೆಯಲ್ಲಿದ್ದರು.</p>.<div><blockquote>ಸಿಂದಗಿ ಬಸವೇಶ್ವರ ವೃತ್ತದಲ್ಲಿ ಪುರಸಭೆ ವತಿಯಿಂದ ₹ 1.20 ಕೋಟಿ ವೆಚ್ಚದಲ್ಲಿ 20 ವ್ಯಾಪಾರಿ ಮಳಿಗೆಗಳು ಬಸ್ ತಂಗುದಾಣ ನಿರ್ಮಾಣ ಕಾಮಗಾರಿಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು </blockquote><span class="attribution">ಡಾ.ಶಾಂತವೀರ ಮನಗೂಳಿ ಪುರಸಭೆ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ಕಂದಾಯ ಇಲಾಖೆಯ 1 ಎಕರೆ 14 ಗುಂಟೆ ಪ್ರದೇಶದಲ್ಲಿನ ಹಳೆಯ ತಹಶೀಲ್ದಾರ್ ಕಾರ್ಯಾಲಯ ಸ್ಥಳಾಂತರಗೊಂಡ ನಂತರ ಖಾಲಿ ಉಳಿದುಕೊಂಡಿತ್ತು. ಈ ಜಾಗೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದಾಗಿ ಸರ್ಕಾರ ಮಟ್ಟದಲ್ಲಿ ಈ ಪ್ರದೇಶವನ್ನು ಪುರಸಭೆಗೆ ಹಸ್ತಾಂತರಿಸಿಕೊಂಡು ಇಲ್ಲಿ ₹ 27.68 ಕೋಟಿ ವೆಚ್ಚದಲ್ಲಿ 132 ಮಳಿಗೆಗಳ ನಿರ್ಮಾಣ ಮಾಡುವ ಪ್ರಸ್ತಾವ ಸಲ್ಲಿಸಲಾಗಿತ್ತು. ಈಗ ಪ್ರಥಮ ಹಂತದಲ್ಲಿ 30 ಮಳಿಗೆಗಳ ನಿರ್ಮಾಣಕ್ಕಾಗಿ ₹ 5 ಕೋಟಿ ಅನುದಾನ ಬಿಡುಗಡೆಗೊಂಡಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.</p>.<p>ಪಟ್ಟಣದ ಕಂದಾಯ ಇಲಾಖೆಯ ಹಳೆಯ ತಹಶೀಲ್ದಾರ್ ಕಾರ್ಯಾಲಯದ ಪ್ರದೇಶದಲ್ಲಿ ಬುಧವಾರ ಮೆಗಾ ಮಾರ್ಕೆಟ್ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.</p>.<p>ಇನ್ನು ಒಂದೆರಡು ತಿಂಗಳಲ್ಲಿ ಇನ್ನೂ ₹ 10 ಕೋಟಿ ಬಿಡುಗಡೆಗೊಳಿಸುವ ಮೂಲಕ ಎಲ್ಲರ ಕಲ್ಪನೆಗೂ ಮೀರಿ ಸುಸಜ್ಜಿತವಾದ ಮೆಗಾ ಮಾರ್ಕೆಟ್ ಅನ್ನು ನನ್ನ ಅವಧಿಯಲ್ಲಿ ನಿರ್ಮಾಣ ಮಾಡುವುದು ನನ್ನ ಸಂಕಲ್ಪ. ಈ ಪ್ರದೇಶದ ಸುತ್ತ ಹಲವಾರು ವರ್ಷಗಳಿಂದ ಸಣ್ಣ, ಸಣ್ಣ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಇದೇ ಮಾರ್ಕೆಟ್ನಲ್ಲಿ ಅವರಿಗೆ ಕಡಿಮೆ ದರದ ಬಾಡಿಗೆಯಲ್ಲಿ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಸರ್ಕಾರದಲ್ಲಿ ದುಡ್ಡೆ ಇಲ್ಲ ಎಲ್ಲ ಹಣ ಗ್ಯಾರಂಟಿಗಾಗಿ ಬಳಕೆಯಾಗಿದ್ದರಿಂದ ಅಭಿವೃದ್ಧಿ ಆಗುತ್ತಿಲ್ಲ ಎಂದು ವಿರೋದಪಕ್ಷ ವ್ಯವಸ್ಥಿತವಾಗಿ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದೆ. ಅಭಿವೃದ್ಧಿಗಾಗಿ ಸರ್ಕಾರದಲ್ಲಿ ಸಾಕಷ್ಟು ಹಣವಿದೆ. ರಾಜಕಾರಣದಲ್ಲಿ ಟೀಕೆ-ಟಿಪ್ಪಣೆ ಸಹಜ ಅದಕ್ಕೆ ಸ್ವಾಗತಿಸುವೆ. ಅಭಿವೃದ್ಧಿಯೇ ನನ್ನ ಗುರಿ ಎಂದು ವಿರೋದಪಕ್ಷದ ಟೀಕೆಗೆ ಉತ್ತರಿಸಿದರು.</p>.<p>ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ.ಶಾಂತವೀರ ಮನಗೂಳಿ ಮಾತನಾಡಿ, ಸರ್ಕಾರವನ್ನು ಅಭಿನಂದಿಸಿದರು. ಪುರಸಭೆ ಸದಸ್ಯ ಸಾಯಬಣ್ಣ ಪುರದಾಳ ಪ್ರಾಸ್ತಾವಿಕವಾಗಿ ಮಾತನಾಡಿದರು.<br> ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ ಒಳಗೊಂಡಂತೆ ಸದಸ್ಯರು, ಆಶ್ರಯ ಸಮಿತಿ ಸದಸ್ಯರು, ಪುರಸಭೆ ಅಧಿಕಾರಿ ವರ್ಗ ವೇದಿಕೆಯಲ್ಲಿದ್ದರು.</p>.<div><blockquote>ಸಿಂದಗಿ ಬಸವೇಶ್ವರ ವೃತ್ತದಲ್ಲಿ ಪುರಸಭೆ ವತಿಯಿಂದ ₹ 1.20 ಕೋಟಿ ವೆಚ್ಚದಲ್ಲಿ 20 ವ್ಯಾಪಾರಿ ಮಳಿಗೆಗಳು ಬಸ್ ತಂಗುದಾಣ ನಿರ್ಮಾಣ ಕಾಮಗಾರಿಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು </blockquote><span class="attribution">ಡಾ.ಶಾಂತವೀರ ಮನಗೂಳಿ ಪುರಸಭೆ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>