<figcaption>""</figcaption>.<p><strong>ಸಿಂದಗಿ:</strong> ಪುರಸಭೆಯಲ್ಲಿ ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತ ನೀಡಲು ಪ್ರಥಮ ಆದ್ಯತೆ ನೀಡಲಾಗುವುದು ಎಂದು ಪುರಸಭೆ ನೂತನ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಭರವಸೆ ನೀಡಿದರು.</p>.<p>‘ಪುರಸಭೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಜನಸಾಮಾನ್ಯರ ಕೆಲಸಗಳು ಆಗುತ್ತಿಲ್ಲ. ಆಯಾಕಟ್ಟಿನ ಸ್ಥಳಗಳಲ್ಲಿ ಪೌರಕಾರ್ಮಿಕರದ್ದೇ ದರ್ಬಾರ್ ನಡೆದಿದ್ದು, ಇದಕ್ಕೆ ಕಡಿವಾಣ ಹಾಕಲಾಗುವುದು’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಖಾಲಿ ಇರುವ ಆರೋಗ್ಯ ನಿರೀಕ್ಷಕ, ಸಿವಿಲ್ ಎಂಜಿನಿಯರ್, ತೆರಿಗೆ, ನೀರು, ಕಂದಾಯ ವಿಭಾಗದಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು ಪುರಸಭೆಗೆ ನಿಯೋಜಿಸಲು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಡಿಯುಡಿಸಿ ಯೋಜನಾ ನಿರ್ದೇಶಕರಿಗೆ ಮನವಿ ಮಾಡಲಾಗಿದೆ’ ಎಂದರು.</p>.<p>‘ಪುರಸಭೆಯಈ ಹಿಂದಿನ ಆಡಳಿತಾವಧಿಯಲ್ಲಿ ಕೇವಲ ಎರಡು ಸಾಮಾನ್ಯಸಭೆ ಮಾತ್ರ ನಡೆದಿತ್ತು. ಪಟ್ಟಣದ ಅಭಿವೃದ್ಧಿ ಬಗ್ಗೆ ಚರ್ಚೆ, ಚಿಂತನೆಗಳೇ ನಡೆದಿರಲಿಲ್ಲ. ಈಗ ಪರಿಸ್ಥಿತಿ ಬದಲಾಗಿದೆ. ನನ್ನ ಅವಧಿಯಲ್ಲಿ ಎಲ್ಲ 23 ವಾರ್ಡ್ಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಪಟ್ಟಣದಲ್ಲಿ ಹೆಚ್ಚಾಗಿರುವ ಬಿಡಾಡಿ ಜಾನುವಾರು, ಹಂದಿ ಮತ್ತು ಬೀದಿ ನಾಯಿಗಳ ಮಾಲೀಕರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಮನೆಯಲ್ಲಿ ಕಟ್ಟಿಕೊಳ್ಳದೇ ಬೀದಿಗೆ ಬಿಟ್ಟರೆ ತೆರವಿಗೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಪಟ್ಟಣದಲ್ಲಿ ಸ್ವಚ್ಛತೆ ನಿರ್ವಹಣೆಗೆ ಅಗತ್ಯವಿರುವ ಹೊಸ ಆಟೊ ಟಿಪ್ಪರ್ ಖರೀದಿಸಲಾಗುವುದು. ಮನೆಮನೆಯಿಂದ ಕಸ ಸಂಗ್ರಹ ಸಂಬಂಧ ಆರಂಭದಲ್ಲಿ ಕೊಳೆಗೇರಿ ನಿವಾಸಿಗಳಿಗೆ ₹15 ಲಕ್ಷ ಮೊತ್ತದಲ್ಲಿ ಎರಡೆರಡು ಬಕೆಟ್ ನೀಡಲು ಉದ್ದೇಶಿಸಲಾಗಿದೆ. ಈ ಕುರಿತು ಸಾಮಾನ್ಯ ಸಭೆಯಲ್ಲಿ ಚರ್ಚಿಸಿ, ಕ್ರಮಕೈಗೊಳ್ಳಲಾಗುವುದು ಎಂದರು.</p>.<p>₹25 ಲಕ್ಷ ಮೊತ್ತದಲ್ಲಿ ಎಲ್ಲ ವಾರ್ಡ್ಗಳಲ್ಲಿ ಎಲ್ಇಡಿ ಬೀದಿ ದೀಪ ಅಳವಡಿಕೆ ಮಾಡಲಾಗುವುದು. ರಸ್ತೆ, ಉದ್ಯಾನ ಸೇರಿದಂತೆ ಸಾರ್ವಜನಿಕ ಸ್ಥಳಗಳ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<p>ಸಿದ್ಧಲಿಂಗ ಸ್ವಾಮೀಜಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಅಧಿಕವಾಗಿರುವುದರಿಂದ ಪೊಲೀಸರೊಂದಿಗೆ ಚರ್ಚಿಸಿ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p>ಬಸವೇಶ್ವರ ಸರ್ಕಲ್ನಲ್ಲಿ ₹15 ಲಕ್ಷ ಮೊತ್ತದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ಬಸ್ ನಿಲ್ದಾಣ ನಿರ್ಮಾಣದ ಜೊತೆಗೆ ಪಟ್ಟಣವನ್ನು ಹಸಿರಾಗಿಸುವ ಉದ್ದೇಶದಿಂದ ರಸ್ತೆ ಅಕ್ಕಪಕ್ಕದಲ್ಲಿ ಸಸಿ ನಡೆಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.</p>.<p><strong>‘ಮಾದರಿ ಪಟ್ಟಣವಾಗಿ ಅಭಿವೃದ್ಧಿ’<br />ಸಿಂದಗಿ: </strong>ಶಾಸಕ ಎಂ.ಸಿ ಮನಗೂಳಿ ಅವರು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಂಡಿದ್ದು, ಅವರ ಸಹಕಾರದೊಂದಿಗೆ ಸಿಂದಗಿಯನ್ನು ಮಾದರಿ ಪಟ್ಟಣವನ್ನಾಗಿ ರೂಪಿಸಲು ಆದ್ಯತೆ ನೀಡಲಾಗುವುದು ಎಂದುಡಾ.ಶಾಂತವೀರ ಮನಗೂಳಿ ಹೇಳಿದರು.</p>.<p>ಪಟ್ಟಣಕ್ಕೆ ಶಾಸ್ವತ ಕುಡಿಯುವ ನೀರು ಒದಗಿಸಲು ಬಳಗೂರ ಕೆರೆಯಿಂದ ಸಿಂದಗಿ ಕೆರೆಗೆ ನೀರು ಪೂರೈಕೆಗೆ ₹27.10 ಕೋಟಿ ಮೊತ್ತದ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ಬೇಸಿಗೆಯಲ್ಲಿ ಯೋಜನೆ ಜಾರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.</p>.<p>ಚಿಕ್ಕಸಿಂದಗಿ ಬೈಪಾಸ್ನಿಂದ ಬಸವೇಶ್ವರ ಸರ್ಕಲ್ ವರೆಗೆ, ಬಸವೇಶ್ವರ ಸರ್ಕಲ್ನಿಂದ ವಿವೇಕಾನಂದ ಸರ್ಕಲ್ ವರೆಗೆ ಹಾಗೂ ಬಸವೇಶ್ವರ ಸರ್ಕಲ್ನಿಂದ ಸಂಗೊಳ್ಳಿ ರಾಯಣ್ಣ ವೃತ್ತದ ವರೆಗೆ ರಸ್ತೆ ವಿಸ್ತರಣೆ ಹಾಗೂ ಗುಣಮಟ್ಟದ ರಸ್ತೆ ನಿರ್ಮಾಣ ಕಾಮಗಾರಿ ₹15 ಕೋಟಿ ಮೊತ್ತದಲ್ಲಿ ನಡೆದಿದೆ ಎಂದು ಹೇಳಿದರು.</p>.<p>ಕನಸದಾಸ ವೃತ್ತದಿಂದ ಮೊರಟಗಿ ನಾಕಾದ ವರೆಗೆ ರಸ್ತೆ ವಿಸ್ತರಣೆ ಮತ್ತು ಚರಂಡಿ ಕಾಮಗಾರಿ ₹ 5 ಕೋಟಿ ಮೊತ್ತದಲ್ಲಿ ಪ್ರಾರಂಭದ ಹಂತದಲ್ಲಿದೆ ಎಂದು ತಿಳಿಸಿದರು.</p>.<p>ಬಹುದಿನಗಳ ಬೇಡಿಕೆಯಾದ ₹90 ಕೋಟಿ ಮೊತ್ತದ ಒಳಚರಂಡಿ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ ಎಂದರು.</p>.<p>ಪಟ್ಟಣದ ಸ್ಮಶಾನವನ್ನು ₹ 60 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಸಿಂದಗಿ ಕೆರೆ ಆವರಣದಲ್ಲಿ ₹2 ಕೋಟಿ ಮೊತ್ತದಲ್ಲಿ ಕೈಗೊಂಡಿರುವ ಉದ್ಯಾನ ನಿರ್ಮಾಣ ಕಾಮಗಾರಿ ಮುಗಿಯುವ ಹಂತದಲ್ಲಿದೆ ಎಂದರು.</p>.<p>₹ 9 ಕೋಟಿ ವೆಚ್ಚದಲ್ಲಿ 9 ವಾರ್ಡ್ಗಳಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿ ಮುಗಿದಿದ್ದು, ಉಳಿದ ಎಲ್ಲ ವಾರ್ಡ್ಗಳಲ್ಲೂ ಸಿಸಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡುವಂತೆ ಸರ್ಕಾರಕ್ಕೆ ಶಾಸಕರು ಪ್ರಸ್ತಾವ ಸಲ್ಲಿಸಿದ್ದಾರೆ ಎಂದು ತಿಳಿಸಿದರು.</p>.<p>ವಿದ್ಯಾನಗರದ ಕೊಳೆಗೇರಿಯ ನಿವಾಸಿಗಳಿಗಾಗಿ ₹18 ಕೋಟಿ ವೆಚ್ಚದಲ್ಲಿ 250 ಮನೆಗಳು ಮಂಜೂರಾಗಿದ್ದು, ಟೆಂಡರ್ ಕರೆಯಲಾಗಿದೆ. ವಾಜಪೇಯಿಶ್ರೀ ವಸತಿ ಯೋಜನೆಯಡಿ 411 ನಿವೇಶನಗಳು ಮಂಜೂರಾಗಿ ಹಂಚಿಕೆಯಾಗಿದ್ದು, ಶೀಘ್ರದಲ್ಲೇ ಹಕ್ಕುಪತ್ರ ನೀಡಲಾಗುವುದು ಎಂದರು.</p>.<p>****</p>.<p>ಸಿಂದಗಿ ಅಭಿವೃದ್ಧಿಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಸ್ವತಂತ್ರ ಸದಸ್ಯರು ಪಕ್ಷಬೇಧ ಮರೆತು ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸಿದ್ದಾರೆ. ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.<br /><em><strong>–ಡಾ.ಶಾಂತವೀರ ಮನಗೂಳಿ, ಅಧ್ಯಕ್ಷ, ಸಿಂದಗಿ ಪುರಸಭೆ</strong></em></p>.<p>****<br />ಸಿಂದಗಿ ಪಟ್ಟಣದಕ್ಕೆ ಆರ್ಟಿಒ ಕಚೇರಿ, ನಗರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಹೆಚ್ಚಿನ ಅನುದಾನ ತಂದು ಪಟ್ಟಣವನ್ನು ಅಭಿವೃದ್ಧಿಗೊಳಿಸಲಾಗುವುದು<br /><em><strong>-ಎಂ.ಸಿ.ಮನಗೂಳಿ, ಶಾಸಕರು, ಸಿಂದಗಿ</strong></em></p>.<div style="text-align:center"><figcaption>ಸಿಂದಗಿ ಶಾಸಕ ಎಂ.ಸಿ.ಮನಗೂಳಿ</figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಸಿಂದಗಿ:</strong> ಪುರಸಭೆಯಲ್ಲಿ ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತ ನೀಡಲು ಪ್ರಥಮ ಆದ್ಯತೆ ನೀಡಲಾಗುವುದು ಎಂದು ಪುರಸಭೆ ನೂತನ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಭರವಸೆ ನೀಡಿದರು.</p>.<p>‘ಪುರಸಭೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಜನಸಾಮಾನ್ಯರ ಕೆಲಸಗಳು ಆಗುತ್ತಿಲ್ಲ. ಆಯಾಕಟ್ಟಿನ ಸ್ಥಳಗಳಲ್ಲಿ ಪೌರಕಾರ್ಮಿಕರದ್ದೇ ದರ್ಬಾರ್ ನಡೆದಿದ್ದು, ಇದಕ್ಕೆ ಕಡಿವಾಣ ಹಾಕಲಾಗುವುದು’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಖಾಲಿ ಇರುವ ಆರೋಗ್ಯ ನಿರೀಕ್ಷಕ, ಸಿವಿಲ್ ಎಂಜಿನಿಯರ್, ತೆರಿಗೆ, ನೀರು, ಕಂದಾಯ ವಿಭಾಗದಲ್ಲಿ ಖಾಲಿ ಇರುವ ಸಿಬ್ಬಂದಿಗಳನ್ನು ಪುರಸಭೆಗೆ ನಿಯೋಜಿಸಲು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಡಿಯುಡಿಸಿ ಯೋಜನಾ ನಿರ್ದೇಶಕರಿಗೆ ಮನವಿ ಮಾಡಲಾಗಿದೆ’ ಎಂದರು.</p>.<p>‘ಪುರಸಭೆಯಈ ಹಿಂದಿನ ಆಡಳಿತಾವಧಿಯಲ್ಲಿ ಕೇವಲ ಎರಡು ಸಾಮಾನ್ಯಸಭೆ ಮಾತ್ರ ನಡೆದಿತ್ತು. ಪಟ್ಟಣದ ಅಭಿವೃದ್ಧಿ ಬಗ್ಗೆ ಚರ್ಚೆ, ಚಿಂತನೆಗಳೇ ನಡೆದಿರಲಿಲ್ಲ. ಈಗ ಪರಿಸ್ಥಿತಿ ಬದಲಾಗಿದೆ. ನನ್ನ ಅವಧಿಯಲ್ಲಿ ಎಲ್ಲ 23 ವಾರ್ಡ್ಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.</p>.<p>ಪಟ್ಟಣದಲ್ಲಿ ಹೆಚ್ಚಾಗಿರುವ ಬಿಡಾಡಿ ಜಾನುವಾರು, ಹಂದಿ ಮತ್ತು ಬೀದಿ ನಾಯಿಗಳ ಮಾಲೀಕರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಮನೆಯಲ್ಲಿ ಕಟ್ಟಿಕೊಳ್ಳದೇ ಬೀದಿಗೆ ಬಿಟ್ಟರೆ ತೆರವಿಗೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ಪಟ್ಟಣದಲ್ಲಿ ಸ್ವಚ್ಛತೆ ನಿರ್ವಹಣೆಗೆ ಅಗತ್ಯವಿರುವ ಹೊಸ ಆಟೊ ಟಿಪ್ಪರ್ ಖರೀದಿಸಲಾಗುವುದು. ಮನೆಮನೆಯಿಂದ ಕಸ ಸಂಗ್ರಹ ಸಂಬಂಧ ಆರಂಭದಲ್ಲಿ ಕೊಳೆಗೇರಿ ನಿವಾಸಿಗಳಿಗೆ ₹15 ಲಕ್ಷ ಮೊತ್ತದಲ್ಲಿ ಎರಡೆರಡು ಬಕೆಟ್ ನೀಡಲು ಉದ್ದೇಶಿಸಲಾಗಿದೆ. ಈ ಕುರಿತು ಸಾಮಾನ್ಯ ಸಭೆಯಲ್ಲಿ ಚರ್ಚಿಸಿ, ಕ್ರಮಕೈಗೊಳ್ಳಲಾಗುವುದು ಎಂದರು.</p>.<p>₹25 ಲಕ್ಷ ಮೊತ್ತದಲ್ಲಿ ಎಲ್ಲ ವಾರ್ಡ್ಗಳಲ್ಲಿ ಎಲ್ಇಡಿ ಬೀದಿ ದೀಪ ಅಳವಡಿಕೆ ಮಾಡಲಾಗುವುದು. ರಸ್ತೆ, ಉದ್ಯಾನ ಸೇರಿದಂತೆ ಸಾರ್ವಜನಿಕ ಸ್ಥಳಗಳ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<p>ಸಿದ್ಧಲಿಂಗ ಸ್ವಾಮೀಜಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಅಧಿಕವಾಗಿರುವುದರಿಂದ ಪೊಲೀಸರೊಂದಿಗೆ ಚರ್ಚಿಸಿ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p>ಬಸವೇಶ್ವರ ಸರ್ಕಲ್ನಲ್ಲಿ ₹15 ಲಕ್ಷ ಮೊತ್ತದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ಬಸ್ ನಿಲ್ದಾಣ ನಿರ್ಮಾಣದ ಜೊತೆಗೆ ಪಟ್ಟಣವನ್ನು ಹಸಿರಾಗಿಸುವ ಉದ್ದೇಶದಿಂದ ರಸ್ತೆ ಅಕ್ಕಪಕ್ಕದಲ್ಲಿ ಸಸಿ ನಡೆಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.</p>.<p><strong>‘ಮಾದರಿ ಪಟ್ಟಣವಾಗಿ ಅಭಿವೃದ್ಧಿ’<br />ಸಿಂದಗಿ: </strong>ಶಾಸಕ ಎಂ.ಸಿ ಮನಗೂಳಿ ಅವರು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಂಡಿದ್ದು, ಅವರ ಸಹಕಾರದೊಂದಿಗೆ ಸಿಂದಗಿಯನ್ನು ಮಾದರಿ ಪಟ್ಟಣವನ್ನಾಗಿ ರೂಪಿಸಲು ಆದ್ಯತೆ ನೀಡಲಾಗುವುದು ಎಂದುಡಾ.ಶಾಂತವೀರ ಮನಗೂಳಿ ಹೇಳಿದರು.</p>.<p>ಪಟ್ಟಣಕ್ಕೆ ಶಾಸ್ವತ ಕುಡಿಯುವ ನೀರು ಒದಗಿಸಲು ಬಳಗೂರ ಕೆರೆಯಿಂದ ಸಿಂದಗಿ ಕೆರೆಗೆ ನೀರು ಪೂರೈಕೆಗೆ ₹27.10 ಕೋಟಿ ಮೊತ್ತದ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ಬೇಸಿಗೆಯಲ್ಲಿ ಯೋಜನೆ ಜಾರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.</p>.<p>ಚಿಕ್ಕಸಿಂದಗಿ ಬೈಪಾಸ್ನಿಂದ ಬಸವೇಶ್ವರ ಸರ್ಕಲ್ ವರೆಗೆ, ಬಸವೇಶ್ವರ ಸರ್ಕಲ್ನಿಂದ ವಿವೇಕಾನಂದ ಸರ್ಕಲ್ ವರೆಗೆ ಹಾಗೂ ಬಸವೇಶ್ವರ ಸರ್ಕಲ್ನಿಂದ ಸಂಗೊಳ್ಳಿ ರಾಯಣ್ಣ ವೃತ್ತದ ವರೆಗೆ ರಸ್ತೆ ವಿಸ್ತರಣೆ ಹಾಗೂ ಗುಣಮಟ್ಟದ ರಸ್ತೆ ನಿರ್ಮಾಣ ಕಾಮಗಾರಿ ₹15 ಕೋಟಿ ಮೊತ್ತದಲ್ಲಿ ನಡೆದಿದೆ ಎಂದು ಹೇಳಿದರು.</p>.<p>ಕನಸದಾಸ ವೃತ್ತದಿಂದ ಮೊರಟಗಿ ನಾಕಾದ ವರೆಗೆ ರಸ್ತೆ ವಿಸ್ತರಣೆ ಮತ್ತು ಚರಂಡಿ ಕಾಮಗಾರಿ ₹ 5 ಕೋಟಿ ಮೊತ್ತದಲ್ಲಿ ಪ್ರಾರಂಭದ ಹಂತದಲ್ಲಿದೆ ಎಂದು ತಿಳಿಸಿದರು.</p>.<p>ಬಹುದಿನಗಳ ಬೇಡಿಕೆಯಾದ ₹90 ಕೋಟಿ ಮೊತ್ತದ ಒಳಚರಂಡಿ ನಿರ್ಮಾಣ ಕಾಮಗಾರಿ ಭರದಿಂದ ಸಾಗಿದೆ ಎಂದರು.</p>.<p>ಪಟ್ಟಣದ ಸ್ಮಶಾನವನ್ನು ₹ 60 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಸಿಂದಗಿ ಕೆರೆ ಆವರಣದಲ್ಲಿ ₹2 ಕೋಟಿ ಮೊತ್ತದಲ್ಲಿ ಕೈಗೊಂಡಿರುವ ಉದ್ಯಾನ ನಿರ್ಮಾಣ ಕಾಮಗಾರಿ ಮುಗಿಯುವ ಹಂತದಲ್ಲಿದೆ ಎಂದರು.</p>.<p>₹ 9 ಕೋಟಿ ವೆಚ್ಚದಲ್ಲಿ 9 ವಾರ್ಡ್ಗಳಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿ ಮುಗಿದಿದ್ದು, ಉಳಿದ ಎಲ್ಲ ವಾರ್ಡ್ಗಳಲ್ಲೂ ಸಿಸಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡುವಂತೆ ಸರ್ಕಾರಕ್ಕೆ ಶಾಸಕರು ಪ್ರಸ್ತಾವ ಸಲ್ಲಿಸಿದ್ದಾರೆ ಎಂದು ತಿಳಿಸಿದರು.</p>.<p>ವಿದ್ಯಾನಗರದ ಕೊಳೆಗೇರಿಯ ನಿವಾಸಿಗಳಿಗಾಗಿ ₹18 ಕೋಟಿ ವೆಚ್ಚದಲ್ಲಿ 250 ಮನೆಗಳು ಮಂಜೂರಾಗಿದ್ದು, ಟೆಂಡರ್ ಕರೆಯಲಾಗಿದೆ. ವಾಜಪೇಯಿಶ್ರೀ ವಸತಿ ಯೋಜನೆಯಡಿ 411 ನಿವೇಶನಗಳು ಮಂಜೂರಾಗಿ ಹಂಚಿಕೆಯಾಗಿದ್ದು, ಶೀಘ್ರದಲ್ಲೇ ಹಕ್ಕುಪತ್ರ ನೀಡಲಾಗುವುದು ಎಂದರು.</p>.<p>****</p>.<p>ಸಿಂದಗಿ ಅಭಿವೃದ್ಧಿಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಸ್ವತಂತ್ರ ಸದಸ್ಯರು ಪಕ್ಷಬೇಧ ಮರೆತು ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸಿದ್ದಾರೆ. ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು.<br /><em><strong>–ಡಾ.ಶಾಂತವೀರ ಮನಗೂಳಿ, ಅಧ್ಯಕ್ಷ, ಸಿಂದಗಿ ಪುರಸಭೆ</strong></em></p>.<p>****<br />ಸಿಂದಗಿ ಪಟ್ಟಣದಕ್ಕೆ ಆರ್ಟಿಒ ಕಚೇರಿ, ನಗರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಹೆಚ್ಚಿನ ಅನುದಾನ ತಂದು ಪಟ್ಟಣವನ್ನು ಅಭಿವೃದ್ಧಿಗೊಳಿಸಲಾಗುವುದು<br /><em><strong>-ಎಂ.ಸಿ.ಮನಗೂಳಿ, ಶಾಸಕರು, ಸಿಂದಗಿ</strong></em></p>.<div style="text-align:center"><figcaption>ಸಿಂದಗಿ ಶಾಸಕ ಎಂ.ಸಿ.ಮನಗೂಳಿ</figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>