<p><strong>ಸಿಂದಗಿ:</strong> ಅಭಿವೃದ್ಧಿ ವಿಷಯವಾಗಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಮಧ್ಯೆ ತಾರತಮ್ಯ ಸಲ್ಲದು. ಶಿಕ್ಷಣ, ಆರೋಗ್ಯ, ಕೈಗಾರಿಕೆ, ಸಾರಿಗೆ, ನೀರಾವರಿ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ನಮಗೆ ತಾರತಮ್ಯ ಆಗುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಆರೋಪಿಸಿದರು.</p>.<p>ವಿಜಯಪುರ ನಗರದಲ್ಲಿ ಪಿಪಿಪಿ ಮಾದರಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ವಿರೋಧಿಸಿ ಕಳೆದ 85 ದಿನಗಳಿಂದ ಪ್ರತಿಭಟನೆ ನಡೆದಿದೆ. ವಿಜಯಪುರದಲ್ಲಿ ಈಗಾಗಲೇ ಎರಡು ವೈದ್ಯಕೀಯ ಕಾಲೇಜುಗಳಿವೆ. ಈಗ ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಮಂಜೂರು ಮಾಡಬಾರದು. ಈ ಕಾಲೇಜನ್ನು ಗ್ರಾಮೀಣ ಭಾಗ ಸಿಂದಗಿ-ಇಂಡಿ ಬಳಿ ಇಲ್ಲವೇ ಸಿಂದಗಿ-ದೇವರಹಿಪ್ಪರಗಿ ಬಳಿ ಮಂಜೂರು ಮಾಡಬೇಕು ಎಂದು ಅವರು ಕೋರಿದರು.</p>.<p>ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನಸಭೆಯಲ್ಲಿ ಶುಕ್ರವಾರ ಉತ್ತರಕರ್ನಾಟಕ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಅವರು, ಅಲ್ಲಿ ಮಾತನಾಡಿರುವ ವಿಷಯವನ್ನು ದೂರವಾಣಿ ಮುಖಾಂತರ ಪ್ರಜಾವಾಣಿಗೆ ತಿಳಿಸಿದರು.</p>.<p>ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಿಂದಗಿ ಮತಕ್ಷೇತ್ರದಲ್ಲಿ 14 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದರೂ ಒಂಬತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದಂತೆ ಗ್ರಾಮೀಣ ಜನರಿಗೆ ಆರೋಗ್ಯ ಸೌಲಭ್ಯ ದೊರಕಬೇಕು. ಹೀಗಾಗಿ ಹೆಚ್ಚಿನ ಆದ್ಯತೆಗಾಗಿ ಕೇಳಿಕೊಳ್ಳಲಾಗಿದೆ ಎಂದರು.</p>.<p>ನನ್ನ ಮತಕ್ಷೇತ್ರದಲ್ಲಿ ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಒಟ್ಟು ₹101 ಕೋಟಿ ಬೆಳೆ ಪರಿಹಾರ ಬಿಡುಗಡೆಗೊಳಿಸಿದ್ದಕ್ಕೆ ಅಭಿನಂದಿಸಲಾಗಿದೆ ಎಂದು ತಿಳಿಸಿದರು.</p>.<p>ಸಿಂದಗಿ-ಇಂಡಿ ಭಾಗದಲ್ಲಿ ಒಟ್ಟು ಎಂಟು ಸಕ್ಕರೆ ಕಾರ್ಖಾನೆಗಳಿವೆ. ರೈತರು ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸಲು ದಾರಿ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಹೊಲಗಳಿಗೆ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದ್ದಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂದಗಿ:</strong> ಅಭಿವೃದ್ಧಿ ವಿಷಯವಾಗಿ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಮಧ್ಯೆ ತಾರತಮ್ಯ ಸಲ್ಲದು. ಶಿಕ್ಷಣ, ಆರೋಗ್ಯ, ಕೈಗಾರಿಕೆ, ಸಾರಿಗೆ, ನೀರಾವರಿ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ನಮಗೆ ತಾರತಮ್ಯ ಆಗುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಆರೋಪಿಸಿದರು.</p>.<p>ವಿಜಯಪುರ ನಗರದಲ್ಲಿ ಪಿಪಿಪಿ ಮಾದರಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ವಿರೋಧಿಸಿ ಕಳೆದ 85 ದಿನಗಳಿಂದ ಪ್ರತಿಭಟನೆ ನಡೆದಿದೆ. ವಿಜಯಪುರದಲ್ಲಿ ಈಗಾಗಲೇ ಎರಡು ವೈದ್ಯಕೀಯ ಕಾಲೇಜುಗಳಿವೆ. ಈಗ ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಮಂಜೂರು ಮಾಡಬಾರದು. ಈ ಕಾಲೇಜನ್ನು ಗ್ರಾಮೀಣ ಭಾಗ ಸಿಂದಗಿ-ಇಂಡಿ ಬಳಿ ಇಲ್ಲವೇ ಸಿಂದಗಿ-ದೇವರಹಿಪ್ಪರಗಿ ಬಳಿ ಮಂಜೂರು ಮಾಡಬೇಕು ಎಂದು ಅವರು ಕೋರಿದರು.</p>.<p>ಬೆಳಗಾವಿ ಸುವರ್ಣ ವಿಧಾನಸೌಧ ವಿಧಾನಸಭೆಯಲ್ಲಿ ಶುಕ್ರವಾರ ಉತ್ತರಕರ್ನಾಟಕ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಅವರು, ಅಲ್ಲಿ ಮಾತನಾಡಿರುವ ವಿಷಯವನ್ನು ದೂರವಾಣಿ ಮುಖಾಂತರ ಪ್ರಜಾವಾಣಿಗೆ ತಿಳಿಸಿದರು.</p>.<p>ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಿಂದಗಿ ಮತಕ್ಷೇತ್ರದಲ್ಲಿ 14 ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದರೂ ಒಂಬತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಂಬಂಧಿಸಿದಂತೆ ಗ್ರಾಮೀಣ ಜನರಿಗೆ ಆರೋಗ್ಯ ಸೌಲಭ್ಯ ದೊರಕಬೇಕು. ಹೀಗಾಗಿ ಹೆಚ್ಚಿನ ಆದ್ಯತೆಗಾಗಿ ಕೇಳಿಕೊಳ್ಳಲಾಗಿದೆ ಎಂದರು.</p>.<p>ನನ್ನ ಮತಕ್ಷೇತ್ರದಲ್ಲಿ ಅತಿವೃಷ್ಟಿಯಿಂದಾಗಿ ಬೆಳೆಹಾನಿಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಒಟ್ಟು ₹101 ಕೋಟಿ ಬೆಳೆ ಪರಿಹಾರ ಬಿಡುಗಡೆಗೊಳಿಸಿದ್ದಕ್ಕೆ ಅಭಿನಂದಿಸಲಾಗಿದೆ ಎಂದು ತಿಳಿಸಿದರು.</p>.<p>ಸಿಂದಗಿ-ಇಂಡಿ ಭಾಗದಲ್ಲಿ ಒಟ್ಟು ಎಂಟು ಸಕ್ಕರೆ ಕಾರ್ಖಾನೆಗಳಿವೆ. ರೈತರು ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸಲು ದಾರಿ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಹೊಲಗಳಿಗೆ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದ್ದಾಗಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>